ಮುಷ್ಕರದ ಬಿಸಿ, ಲೋಡ್ ಮರಳಿಗೆ 35,000 ರೂ!

ರಾಜ್ಯಾದ್ಯಂತ 12,500ಕ್ಕೂ ಹೆಚ್ಚು ಮರಳು ಲಾರಿಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿ, ಸಾಗಣೆ ನಿಲ್ಲಿಸಿದ್ದರಿಂದ ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಮರಳಿನ ಅಭಾವ ಸೃಷ್ಟಿಯಾಗಿದೆ. ಕಟ್ಟಡ ನಿರ್ಮಾಣ ಕಾಮಗಾರಿಗಳು ಮರಳಿನ ಕೊರತೆಯಿಂದಾಗಿ ಸ್ಥಗಿತಗೊಳ್ಳುತ್ತಿವೆ.
ಟ್ರ್ಯಾಕ್ಟರ್, ಎತ್ತಿನ ಗಾಡಿ, ಸರಕು ಸಾಗಣೆ ಆಟೋಗಳ ಮೂಲಕ ಬೆಂಗಳೂರಿನ ಕೆಲವು ಕಡೆ ಮರಳು ಸಾಗಣೆ ಮಾಡಲಾಗುತ್ತಿದೆ. ಆದರೆ, ಸಂಗ್ರಹಿಸಿರುವ ಒಂದು ಲೋಡ್ ಮರಳಲು ನೀಡಲು ಲಾರಿ ಮಾಲೀಕರು 35,000ರೂ. ಕೇಳುತ್ತಿದ್ದಾರೆ.
ಮತ್ತಷ್ಟು ಬೆಂಬಲ : ಕರ್ನಾಟಕ ಸ್ಟೇಟ್ ಲಾರಿ ಓನರ್ ಅಂಡ್ ಏಜೆಂಟ್ಸ್ ಅಸೋಸಿಯೇಷನ್ ಜತೆಗೆ ಕರ್ನಾಟಕ ಲಾರಿ ಮಾಲೀಕರ ಸಂಘವೂ ಬುಧವಾರದಿಂದ ಮುಷ್ಕರಕ್ಕೆ ಬೆಂಬಲ ನೀಡಲಿದೆ. ಇದರಿಂದಾಗಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಲಕ್ಷಣಗಳು ಕಂಡುಬರುತ್ತಿದೆ.
ಇಂಧನ ಪೂರೈಕೆ ಸ್ಥಗಿತ ಬೆದರಿಕೆ : ಲಾರಿ ಮಾಲೀಕರ ಬೇಡಿಕೆ ಈಡೇರಿಸದಿದ್ದರೆ, ಜು 20ರಿಂದ ಡಿಸೇಲ್ ಮತ್ತು ಪೆಟ್ರೋಲ್ ಸಾಗಿಸುವ ಲಾರಿಗಳನ್ನು ನಿಲ್ಲಿಸಿ, ಮುಷ್ಕರ ನಡೆಸುವಾಗಿ ಲಾರಿ ಮಾಲೀಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಕಾರ್ಮಿಕರಿಗೆ ಕೆಲಸವಿಲ್ಲ : ಲಾರಿ ಮುಷ್ಕರದಿಂದಾಗಿ ಲಾರಿ ಚಾಲಕ, ಕ್ಲೀನರ್, ಲೋಡರ್ ಗಳಿಗೆ ಕೆಲಸವಿಲ್ಲದಂತಾಗಿದೆ. ಮರಳಿನ ಅಭಾವದಿಂದಾಗಿ ಕಟ್ಟಡ ಕಾರ್ಮಿಕರು ಸುಮ್ಮನೆ ಕುಳಿತುಕೊಳ್ಳುವ ಪರಿಸ್ಥಿತಿ ಬಂದೊದಗಿದೆ.
ಸರ್ಕಾರದ ಮೌನ : ಮುಷ್ಕರಕ್ಕೆ ಮುನ್ನ ಮಾತುಕತೆಗೆ ಬನ್ನಿ ಎಂದು ಸರ್ಕಾರ ಅನೌಪಚಾರಿಕವಾಗಿ ಲಾರಿ ಮಾಲೀಕರಿಗೆ ಹೇಳಿತ್ತು. ಆದರೆ, ಮುಷ್ಕರ ಪ್ರಾರಂಭವಾಗಿ ಮೂರು ದಿನಗಳು ಕಳೆದರೂ ಸರ್ಕಾರ ಲಾರಿ ಮಾಲೀಕರೊಂದಿಗೆ ಮಾತುಕತೆಗೆ ನಡೆಸಿಲ್ಲ. (ಮರಳು ಲಾರಿ ಮುಷ್ಕರ, ಕಟ್ಟಡ ನಿರ್ಮಾಣ ಕಷ್ಟ)
ಸರ್ಕಾರಕ್ಕೆ ಆದಾಯ : ರಾಜ್ಯದಲ್ಲಿ ಮರಳು ನೀತಿ ಜಾರಿಗೊಳಿಸಿದರೆ ಸರ್ಕಾರದ ಬೊಕ್ಕಸಕ್ಕೆ 300 ಕೋಟಿ ರೂ.ಗೂ ಹೆಚ್ಚು ಆದಾಯ ಸಂಗ್ರಹವಾಗುತ್ತದೆ. ಆದರೂ ಸರ್ಕಾರ, ನೀತಿ ಜಾರಿಗೊಳಿಸಲು ಆಸಕ್ತಿ ತೋರುತ್ತಿಲ್ಲ ಎಂದು ಕರ್ನಾಟಕ ಸ್ಟೇಟ್ ಲಾರಿ ಓನರ್ ಅಸೋಸಿಯೇಷನ್ ಆರೋಪಿಸಿದೆ.
ನೀತಿ ಜಾರಿಗೆ ಬರುವವರೆಗೆ ಹೋರಾಟ : ಸರ್ಕಾರ ಲಾರಿ ಮಾಲೀಕರೊಂದಿಗೆ ಮಾತುಕತೆ ನಡೆಸಿ, ಮರಳು ನೀತಿ ಜಾರಿಗೊಳಿಸುವ ಭರವಸೆ ನೀಡುವ ತನಕ ಮುಷ್ಕರ ಹಿಂಪಡೆಯುವುದಿಲ್ಲ ಎಂದು ಲಾರಿ ಓನರ್ ಅಸೋಸಿಯೇಷನ್ ಹೇಳಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications