ಬಾರ್ ಗಳಲ್ಲಿ ವಸ್ತ್ರ ಸಂಹಿತೆ ಕಡ್ಡಾಯ : ಹೈಕೋರ್ಟ್

ಮಹಿಳಾ ಉದ್ಯೋಗಿಗಳ ಬಾರ್ ಮತ್ತು ರೆಸ್ಟೋರೆಂಟ್ ಮಾಲೀಕರ ಸಂಘ ಹಾಗೂ ಕೆಲ ಬಾರ್ ಮಾಲೀಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎ.ಎಸ್.ಬೋಪಣ್ಣ ಅವರ ಪೀಠ, ಮಂಗಳವಾರ ಈ ಆದೇಶ ನೀಡಿದೆ.
ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಬಾರ ಮತ್ತು ಡಿಸ್ಕೋಥೆಕ್ ಗಳಿಗೆ ನಿಗದಿಪಡಿಸಿರುವ ಮಾರ್ಗಸೂಚಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತು. ಮಾರ್ಗಸೂಚಿ ಪರಿಶೀಲನೆ ನಡೆಸಿದ ನ್ಯಾಯಪೀಠ, ಪರಿಚಾರಿಕೆಯರು ಕಡ್ಡಾಯವಾಗಿ ವಸ್ತ್ರ ಸಂಹಿತೆ ಪಾಲಿಸಬೇಕು ಎಂದು ಸೂಚಿಸಿ ಪ್ರಕರಣವನ್ನು ಇತ್ಯರ್ಥಪಡಿಸಿತು.
ಎರಡು ತಿಂಗಳುಗಳ ಕಾಲ ಮಾರ್ಗಸೂಚಿಯನ್ನು ರಾಜ್ಯದಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಬೇಕು. ಜಾರಿಯಲ್ಲಿರುವ ಮಾರ್ಗಸೂಚಿಯಲ್ಲಿ ಲೋಪ-ದೋಷಗಳು ಇದ್ದರೆ, 90 ದಿನಗಳ ಬಳಿಕ ಸೂಕ್ತ ಕಾನೂನು ತಿದ್ದುಪಡಿ ಮೂಲಕ ಅವುಗಳನ್ನು ಬದಲಾವಣೆ ಮಾಡುವಂತೆ ನ್ಯಾಯಾಲಯ ಆದೇಶಿಸಿತು.
ಮಾರ್ಗಸೂಚಿಗಳನ್ನು ಬಲವಂತವಾಗಿ ಬಾರ್ ಅಥವ ಡಿಸ್ಕೋಥೆಕ್ ಮಾಲೀಕರ ಮೇಲೆ ಸರ್ಕಾರ ಹೇರಬಾರದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು. ವಸ್ತ್ರ ಸಂಹಿತೆ ಮತ್ತು ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಸಂಬಂಧ ಯಾವುದೇ ವಿನಾಯಿತಿ ನೀಡಲು ನ್ಯಾಯಾಲಯ ನಿರಾಕರಿಸಿತು.
ವಸ್ತ್ರ ಸಂಹಿತೆ : ಪರಿಚಾರಕಿಯರು ಪಾದದವರೆಗೆ ಪ್ಯಾಂಟ್ ಮತ್ತು ಪೂರ್ತಿ ತೋಳಿನ ಅಂಗಿ/ಟೀ ಷರ್ಟ್, ಸಲ್ವಾರ್ ಕಮೀಜ್-ದುಪ್ಪಟ್ಟಾ ಧರಿಸಬೇಕು. ಅಶ್ಲೀಲವಾಗಿ ದೇಹ ಪ್ರದರ್ಶನಕ್ಕೆ ಅವಕಾಶ ಇಲ್ಲ. ಸೀರೆ ಧರಿಸುವ ಅವಕಾಶಕ್ಕೆ ಕೊಕ್ ನೀಡಲಾಗಿದೆ. (ಸರ್ಕಾರ ಮಾರ್ಗಸೂಚಿಯ ಅಂಶಗಳೇನು?)
ಬಾರ್ ಅನುಮತಿ ಪಡೆಯುವ ಸಂದರ್ಭದಲ್ಲೇ ಮಹಿಳಾ ಉದ್ಯೋಗಿಗಳ ಸಮವಸ್ತ್ರದ ಮಾದರಿಯನ್ನು ನೀಡಬೇಕು. ಪ್ರಾಧಿಕಾರ ಸಮ್ಮತಿ ಸೂಚಿಸುವ ವಸ್ತ್ರವನ್ನು ಕಡ್ಡಾಯ ಧರಿಸಬೇಕಾಗುತ್ತದೆ. ಮಹಿಳಾ ಉದ್ಯೋಗಿಗಳಿಗೆ ಪೂರ್ಣ ವಿವರ ಒಳಗೊಂಡ ಗುರುತಿನ ಚೀಟಿ ವಿತರಣೆ ಕಡ್ಡಾಯ ಎಂಬುದು ಮಾರ್ಗಸೂಚಿಯ ಪ್ರಮುಖ ಅಂಶವಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications