ವಿಷ್ಣು ಸ್ಮಾರಕಕ್ಕೆ ಸರ್ಕಾರದಿಂದ ಭೂಮಿ ಹಸ್ತಾಂತರ

ಭಾರತಿ ವಿಷ್ಣುವರ್ಧನ್ ಅವರು ಈ ಸಂಬಂಧ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಸಿದ್ದರಾಮಯ್ಯ ಈ ವಿಷಯ ಘೋಷಿಸಿದ್ದಾರೆ. ಹಸ್ತಾಂತರದ ದಾಖಲಾತಿ ಪತ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾರತಿ ವಿಷ್ಣುವರ್ಧನ್ ಅವರಿಗೆ ನೀಡಿದರು.
ಈಗಾಗಲೇ ಎರಡು ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಈ ಜಮೀನಿನ ಹಣವನ್ನು ಕೂಡ ಮಾಲೀಕರಿಗೆ ನೀಡಲಾಗಿದೆ. ಗುರುವಾರದಿಂದಲೇ ಭೂಮಿ ಟ್ರಸ್ಟ್ ವಶಕ್ಕೆ ದೊರಕಲಿದ್ದು, ಸ್ಮಾರಕ ನಿರ್ಮಾಣ ಕಾರ್ಯ ಯಾವುದೇ ಅಡೆ-ತಡೆ ಇಲ್ಲದೆ ಸಾಗಲಿದೆ ಎಂದರು.
ವಿಷ್ಣುವರ್ಧನ್ ಕನ್ನಡ ಚಿತ್ರರಂಗ ಕಂಡ ಅಪರೂಪದ ನಟರಾಗಿದ್ದು, ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಈ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ಸ್ಮಾರಕ ಕಾಮಗಾರಿ ಆರಂಭ : ಮುಂಬರುವ ಸೆಪ್ಟೆಂಬರ್ ವೇಳೆಗೆ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಭಾರತಿ ವಿಷ್ಣುವರ್ಧನ್ ಹೇಳಿದರು. ಸಿಎಂ ನಿವಾಸದಲ್ಲಿ ಮುಖ್ಯಮಂತ್ರಿಯಿಂದ ಭೂಮಿ ಹಸ್ತಾಂತರ ಪಡೆದುಕೊಂಡ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ನಂತರ ಮುತುವರ್ಜಿ ವಹಿಸಿ ವಿಷ್ಣುವರ್ಧನ್ ಸಮಾಧಿ ಇರುವ ಅಭಿಮಾನ್ ಸ್ಟುಡಿಯೋದಲ್ಲಿ ಎರಡು ಎಕರೆ ಭೂಮಿಯನ್ನು ಗುರುತಿಸಿ ಟ್ರಸ್ಟ್ ವಶಕ್ಕೆ ನೀಡಿದ್ದಾರೆ.
ಸಮಾಧಿ ಸುತ್ತಲೂ ಇನ್ನೂ ಎರಡು ಎಕರೆ ನೀಡಬೇಕೆಂಬುದು ನಮ್ಮ ಬೇಡಿಕೆ. ಅಭಿಮಾನ್ ಸ್ಟುಡಿಯೋ ಮಾಲೀಕರಾಗಿದ್ದ ಹಿರಿಯ ನಟ ಬಾಲಕೃಷ್ಣ ಅವರ ಮಕ್ಕಳ ನಡುವೆ ಭೂಮಿ ಹಂಚಿಕೆ ಸಂಬಂಧ ತಕರಾರಿದ್ದು, ಅದು ಇತ್ಯರ್ಥವಾಗುವವರೆಗೂ ಸರ್ಕಾರ ಟ್ರಸ್ಟ್ ವಶಕ್ಕೆ ಭೂಮಿ ನೀಡಲು ಸಾಧ್ಯವಾಗುವುದಿಲ್ಲ.
ಹಾಗಾಗಿ ತಾವು ಬಾಲಕೃಷ್ಣ ಅವರ ಮಗಳ ಜೊತೆ ಖಾಸಗಿಯಾಗಿ ಮಾತನಾಡಿದಾಗ ಭೂಮಿ ನೀಡಲು ಒಪ್ಪಿಕೊಂಡಿದ್ದಾರೆ ಎಂದರು. ಆ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಬಾಲಕೃಷ್ಣ ಅವರ ಪುತ್ರಿ ಸ್ಮಾರಕ ನಿರ್ಮಾಣಕ್ಕೆ 2 ಎಕರೆ ನೀಡಲು ತನ್ನ ತಕರಾರಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರೆ ವಿವಾದ ಬಗೆಹರಿದು ಬೇಡಿಕೆಯಷ್ಟು ಭೂಮಿ ಲಭ್ಯವಾಗುತ್ತದೆ.
ಆದರೆ ಅಲ್ಲಿಯವರೆಗೂ ಕಾಯುವುದಕ್ಕಿಂತ ಈಗ ಸರ್ಕಾರ ಕೊಟ್ಟಿರುವ 2 ಎಕರೆ ಭೂಮಿ ಯಲ್ಲೇ ಪ್ರಾಥಮಿಕ ಕಾಮಗಾರಿಗಳನ್ನು ಆರಂಭಿಸಲಾಗುವುದು ಎಂದು ಭಾರತಿ ವಿಷ್ಣುವರ್ಧನ್ ತಿಳಿಸಿದರು. ತಮ್ಮ ಪತಿ ವಿಷ್ಣುವರ್ಧನ್ ಎಲ್ಲರ ವಿಶ್ವಾಸ ಗಳಿಸಿದ್ದರು. ಹಾಗಾಗಿ ಎಲ್ಲಾ ಕೆಲಸಗಳು ಸುಗಮವಾಗಿ ನಡೆಯುತ್ತಿದೆ ಎಂದು ಭಾರತಿ ಅವರು ಹೇಳಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications