ರಾಜೀವ್ ಗಾಂಧಿ ಬರ್ಥಡೇಗೆ ಭರ್ಜರಿ ಕೊಡುಗೆ
ನವದೆಹಲಿ, ಜು.13: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನೋತ್ಸವದಂದು ಯುಪಿಎ ಸರ್ಕಾರದ ಮಹತ್ವಾಕಾಂಕ್ಷಿ ಆಹಾರ ಭದ್ರತೆ ಯೋಜನೆ ಜಾರಿಗೆ ತರಲು ಯುಪಿಎ ಸರ್ಕಾರ ನಿರ್ಧರಿಸಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯುವ ವೇಳೆಗೆ ಬಿಜೆಪಿ ಭಾರಿ ಪ್ರತಿಭಟನೆ ನಡೆಸಿದೆ.
ಯುಪಿಎ ಸರ್ಕಾರದ ಆರ್ಥಿಕ ನೀತಿ, ಬೆಲೆ ಏರಿಕೆ, ಆಹಾರ ಭದ್ರತಾ ಕಾಯ್ದೆ ಲೋಪ ದೋಷಗಳನ್ನು ವಿರೋಧಿಸಿ ಬಿಜೆಪಿ ಮಹಿಳಾ ಮೋರ್ಚಾ ಶನಿವಾರ(ಜು.13) ನವದೆಹಲಿಯ #10 ಜನಪಥ್ ನಿವಾಸದ ಎದುರು ಭಾರಿ ಪ್ರತಿಭಟನೆ ನಡೆಸಿದ್ದಾರೆ.
ಹಲವಾರು ಪ್ರತಿಭಟನಾಕಾರರು ಚಪ್ಪಲಿ ತೋರಿಸುತ್ತಾ ಸೋನಿಯಾ ಗಾಂಧಿ ಹಾಗೂ ಮನಮೋಹನ್ ಸಿಂಗ್ ಅವರನ್ನು ಟೀಕಿಸಿದ್ದಾರೆ. ಸೋನಿಯಾ ಗಾಂಧಿ ನಿವಾಸದತ್ತ ಪ್ರತಿಭಟನಾಕಾರರು ನುಗ್ಗಲು ಯತ್ನಿಸಿದ್ದಾರೆ. ಪರಿಸ್ಥಿತಿ ಕೈ ಮೀರ ತೊಡಗಿದಾಗ ವಿಧಿ ಇಲ್ಲದೆ ಪೊಲೀಸ್ ಪಡೆ ಅಶ್ರುವಾಯು ಸಿಡಿಸಿದ್ದಾರೆ.
ಆದರೂ ಮಹಿಳೆಯರು ಒದ್ದೆ ಬಟ್ಟೆಗಳಲ್ಲೇ ಪೊಲೀಸರ ಕೈಗೆ ಸಿಗದಂತೆ ನುಗ್ಗಲು ಯತ್ನಿಸಿದ್ದಾರೆ. ಚಿತ್ರಗಳಲ್ಲಿ ನೋಡಿ.. ಅತ್ತ ಮೀಟಿಂಗ್ ನಲ್ಲಿ ಏನಾಯಿತು? ಆಹಾರ ಭದ್ರತಾ ಕಾಯ್ದೆ ವಿವರಗಳೇನು? ಮುಂದೆ ಓದಿ...

ಮಹತ್ವದ ಸಭೆ
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನಿ ಮನಮೋಹನ್ ಸಿಂಗ್, ಉಪಾಧ್ಯಕ್ಷ ರಾಹುಲ್ ಗಾಂಧಿ, ಆಹಾರ ಸಚಿವ ಕೆವಿ ಥಾಮಸ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಜೊತೆಗೆ ಕಾಂಗ್ರೆಸ್ ಸರ್ಕಾರವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಇಂದಿನ ಸಭೆಯಲ್ಲಿ ಪಾಲ್ಗೊಂಡಿದ್ದರು,

ಅಧಿಕ ಜನಕ್ಕೆ ಪ್ರಯೋಜನ
ದೇಶದ ಶೇ 67ರಷ್ಟು ಅಥವಾ 82 ಕೋಟಿಗೂ ಅಧಿಕ ಜನಕ್ಕೆ ಆಹಾರ ಭದ್ರತಾ ಕಾಯ್ದೆಯ ಪ್ರಯೋಜನ ತಲುಪಲಿದೆ. ಕುಟುಂಬದ ಪ್ರತಿ ಸದಸ್ಯನಿಗೆ ಮಾಸಿಕ 1 ರು ದರದಲ್ಲಿ 5 ಕೆ.ಜಿ ಅಕ್ಕಿ, 3 ರು ದರದಲ್ಲಿ ಗೋಧಿ ಹಾಗೂ 2 ರು ದರದಲ್ಲಿ ಜೋಳವನ್ನು ಸಾರ್ವಜನಿಕ ಪಡಿತರ ವಿತರಣೆಯ ಅಡಿಯಲ್ಲಿ ನೀಡಲು ಯೋಜನೆ ಸಹಕಾರಿಯಾಗಲಿದೆ.

ಎಲ್ಲೆಲ್ಲಿ ಜಾರಿಯಲ್ಲಿದೆ?
ಈಗಾಗಲೇ ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶ, ಛತ್ತೀಸ್ ಗಢ, ಎಐಎಡಿಎಂಕೆ ಆಡಳಿತದ ತಮಿಳುನಾಡು, ಕಾಂಗ್ರೆಸ್ ಆಡಳಿತದ ಆಂಧ್ರಪ್ರದೇಶ, ಕೇರಳದಲ್ಲಿ 1 ರು ದರದಲ್ಲಿ ಕೆಜಿ ಅಕ್ಕಿಯನು ವಿತರಿಸಲಾಗುತ್ತಿದೆ. ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅನ್ನಭಾಗ್ಯ ಯೋಜನೆ ಇದೀಗ ಆರಂಭಗೊಂಡಿದೆ.

ಬಿಜೆಪಿ ಭಾರಿ ಪ್ರತಿಭಟನೆ
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯುವ ವೇಳೆಗೆ ಬಿಜೆಪಿ ಭಾರಿ ಪ್ರತಿಭಟನೆ ನಡೆಸಿದೆ.

ಬಿಜೆಪಿ ಮಹಿಳಾ ಮೋರ್ಚಾ
ಯುಪಿಎ ಸರ್ಕಾರದ ಆರ್ಥಿಕ ನೀತಿ, ಬೆಲೆ ಏರಿಕೆ, ಆಹಾರ ಭದ್ರತಾ ಕಾಯ್ದೆ ಲೋಪ ದೋಷಗಳನ್ನು ವಿರೋಧಿಸಿ ಬಿಜೆಪಿ ಮಹಿಳಾ ಮೋರ್ಚಾ ಶನಿವಾರ(ಜು.13) ನವದೆಹಲಿಯ #10 ಜನಪಥ್ ನಿವಾಸದ ಎದುರು ಭಾರಿ ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿ ಮಹಿಳಾ ಮೋರ್ಚಾ
ಹಲವಾರು ಪ್ರತಿಭಟನಾಕಾರರು ಚಪ್ಪಲಿ ತೋರಿಸುತ್ತಾ ಸೋನಿಯಾ ಗಾಂಧಿ ಹಾಗೂ ಮನಮೋಹನ್ ಸಿಂಗ್ ಅವರನ್ನು ಟೀಕಿಸಿದ್ದಾರೆ. ಸೋನಿಯಾ ಗಾಂಧಿ ನಿವಾಸದತ್ತ ಪ್ರತಿಭಟನಾಕಾರರು ನುಗ್ಗಲು ಯತ್ನಿಸಿದ್ದಾರೆ.
-
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications