ಮಠ-ಮಂದಿರಗಳಿಗೆ ಬಿಜೆಪಿ ಕೊಟ್ಟಿದ್ದು 610 ಕೋಟಿ!
ಬೆಂಗಳೂರು, ಜು. 16 : ಅಭಿವೃದ್ಧಿಯೇ ನಮ್ಮ ಮೂಲಮಂತ್ರ ಎಂದು ಹೇಳಿ ರಾಜ್ಯದಲ್ಲಿ ಅಧಿಕಾರ ನಡೆಸಿದ ಬಿಜೆಪಿ ಸರ್ಕಾರ ಮಠ ಮಾನ್ಯಗಳಿಗೆ ಉದಾರವಾಗಿ ಅನುದಾನ ನೀಡಿದೆ ಎಂಬುದು ಸತ್ಯ. ಆದರೆ, ಮೂರು ವರ್ಷಗಳಲ್ಲಿ ಸರ್ಕಾರ ಮಠಗಳಿಗೆ ಕೊಟ್ಟ ಮೊತ್ತವೆಷ್ಟು ಗೊತ್ತೆ ಬರೋಬ್ಬರಿ 610.7 ಕೋಟಿ ರೂಪಾಯಿ!
ಈ ಮಾಹಿತಿಯನ್ನು ಸ್ವತಃ ಮುಜರಾಯಿ ಸಚಿವ ಪ್ರಕಾಶ್ ಹುಕ್ಕೇರಿ, ಸೋಮವಾರ ವಿಧಾನಸಭೆ ಕಲಾಪದಲ್ಲಿ ಬಿಡುಗಡೆ ಮಾಡುವ ಮೂಲಕ ಬಿಜೆಪಿ ಸರ್ಕಾರಕ್ಕೆ ಮುಖಭಂಗ ಉಂಟು ಮಾಡಿದ್ದಾರೆ. ಪ್ರತಿಪಕ್ಷಗಳ ಟೀಕೆಗೂ ಮಣಿಯದೆ ಬಿಜೆಪಿ ಸರ್ಕಾರ ಮಠಗಳಿಗೆ ಕೋಟಿ ಕೋಟಿ ಅನುದಾನ ನೀಡಿತ್ತು.
ಬೆಳ್ತಂಗಡಿ ಶಾಸಕ ವಸಂತ ಬಂಗೇರ ಹಿಂದಿನ ಸರ್ಕಾರದ ಅವಧಿಯಲ್ಲಿ ಮಠಗಳಿಗೆ ನೀಡಲಾಗಿರುವ ಅನುದಾನದ ವಿವರ ನೀಡುವಂತೆ ಲಿಖಿತ ಪ್ರಶ್ನೆ ಸಲ್ಲಿಸಿದ್ದರು. ಇದಕ್ಕೆ ಉತ್ತರಿಸಿರುವ ಮುಜರಾಯಿ ಸಚಿವರು ಅಂಕಿ ಅಂಶಗಳನ್ನು ಬಿಚ್ಚಿಟ್ಟಿದ್ದಾರೆ.
ಮೂರು ವರ್ಷಗಳಲ್ಲಿ ಮೂವರು ಮುಖ್ಯಮಂತ್ರಿಗಳು 13029 ಮಠ ಹಾಗೂ ದೇವಾಲಯಗಳಿಗೆ 610.7 ಕೋಟಿ ರೂ. ಅನುದಾನ ನೀಡಿದ್ದಾರೆ. ಹೊರ ರಾಜ್ಯಗಳಲ್ಲಿರುವ 28 ಮಠ-ಮಂದಿರಗಳಿಗೂ 31 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

ಯಡಿಯೂರಪ್ಪ ಅವರಿಂದ ಪ್ರಾರಂಭ
ಮಠಗಳಿಗೆ ಮೊದಲು ಅನುದಾನ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು ಬಿಜೆಪಿಯನ್ನು ಅಧಿಕಾರದ ಗದ್ದುಗೆ ಮೇಲೆ ಕೂರಿಸಿ, ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ. ಅನಂತರ ಡಿ.ವಿ.ಸದಾನಂದಗೌಡ ಮತ್ತು ಜಗದೀಶ್ ಶೆಟ್ಟರ್ ಸಹ ಮಠಗಳಿಗೆ ಅನುದಾನ ನೀಡುವ ಸಂಪ್ರದಾಯ ಮುಂದುವರೆಸಿದರು.

ಕೆಲವು ಜಿಲ್ಲೆಗಳಿಗೆ ಹೆಚ್ಚು
ಮಠಗಳಿಗೆ ಅನುದಾನ ನೀಡುವಲ್ಲಿಯೂ ಕೆಲವು ಜಿಲ್ಲೆಗಳಿಗೆ ಸರ್ಕಾರ ಆದ್ಯತೆ ನೀಡಿದೆ. ಬೆಳಗಾವಿಯ-620, ದಾವಣಗೆರೆಯ-792, ಗುಲ್ಬರ್ಗದ-452, ತುಮಕೂರಿನ-881, ಶಿವಮೊಗ್ಗದ- 897 ಹಾಗೂ ಚಿತ್ರದುರ್ಗದ 1333 ಮಠ-ಮಂದಿರಗಳಿಗೆ 192.81 ಕೋಟಿ ರೂ. ಅನುದಾನ ನೀಡಲಾಗಿದೆ.

ಉತ್ತರ ಕರ್ನಾಟಕಕ್ಕೂ ಆದ್ಯತೆ
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಚೊಚ್ಚಲ ಬಜೆಟ್ ಮಂಡಿಸಿದ ಜಗದೀಶ್ ಶೆಟ್ಟರ್ ಉತ್ತರ ಕರ್ನಾಟಕ ಭಾಗದ ಮಠಗಳಿಗೂ ಹೆಚ್ಚು ಅನುದಾನ ನೀಡಿದರು. ಧಾರವಾಡದ-162, ಗದಗದ-238 ಬಳ್ಳಾರಿಯ-101, ಬಾಗಲಕೋಟೆಯ-262, ಬಿಜಾಪುರದ-430, ಬೀದರ್ ಜಿಲ್ಲೆಯ -149, ಹಾವೇರಿಯ-296, ಕೊಪ್ಪಳದ-505, ರಾಯಚೂರಿನ-203 ಮಠ ಮತ್ತು ದೇವಾಲಯಗಳಿಗೂ ಅನುದಾನ ನೀಡಲಾಗಿದೆ.

ಎಲ್ಲಾ ಜಿಲ್ಲೆಗಳಿಗೂ ಆದ್ಯತೆ
ಅನುದಾನ ನೀಡುವ ವಿಚಾರದಲ್ಲಿ ಯಾವ ಜಿಲ್ಲೆಗಳನ್ನು ಸರ್ಕಾರ ಕಡೆಗಣಿಸಿಲ್ಲ. ಬೆಂಗಳೂರು ನಗರದ-315, ಬೆಂಗಳೂರು ಗ್ರಾಮಾಂತರದ -147, ಚಾಮರಾಜನಗರದ-146, ಚಿಕ್ಕಬಳ್ಳಾಪುರದ-245, ಚಿಕ್ಕಮಗಳೂರಿನ-413, ದಕ್ಷಿಣ ಕನ್ನಡದ-525, ಹಾಸನದ-515, ಕೊಡಗಿನ-370, ಕೋಲಾರದ-357, ಮಂಡ್ಯದ-513, ಮೈಸೂರಿನ-302, ರಾಮನಗರದ-332, ಉಡುಪಿಯ-1012 ಮಠ ಮತ್ತು ಮಂದಿರಗಳಿಗೆ ಅನುದಾನ ನೀಡಲಾಗಿದೆ.

ಯಾವ ವರ್ಷ ಎಷ್ಟು ಹಣ
ಬಿಜೆಪಿ ಸರ್ಕಾರ 2010-11ನೇ ಸಾಲಿನಲ್ಲಿ 2809 ದೇವಾಲಯ ಹಾಗೂ 130 ಮಠಗಳಿಗೆ 199.10 ಕೋಟಿ ರೂ., 2011-12 ನೇ ಸಾಲಿನಲ್ಲಿ 4070 ದೇವಾಲಯ ಹಾಗೂ 183 ಮಠಗಳಿಗೆ 167.87 ಕೋಟಿ ರೂ., 2012-13 ನೇ ಸಾಲಿನಲ್ಲಿ 5,583 ದೇವಾಲಯ ಹಾಗೂ 252 ಮಠಗಳಿಗೆ 250.22 ಕೋಟಿ ರೂ. ಅನುದಾನ ನೀಡಿದೆ.

ಸಿದ್ದರಾಮಯ್ಯ ಏನು ಮಾಡಿದರು
ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ, ಮುಖ್ಯಮಂತ್ರಿ ಹುದ್ದೆಗೆ ಏರಿ ಚೊಚ್ಚಲ ಬಜೆಟ್ ಮಂಡಿಸಿದ್ದಾರೆ. ಅವರು ಮಠಗಳಿಗೆ ನೇರವಾಗಿ ಹಣ ನೀಡುವ ಪರಿಪಾಠವನ್ನು ನಿಲ್ಲಿಸಿದ್ದಾರೆ. ಆದರೆ, ಶೈಕ್ಷಣಿಕ ಸಂಸ್ಥೆಗಳನ್ನು ನಡೆಸುತ್ತಿರುವ ಆರ್ಥಿಕವಾಗಿ ದುರ್ಬಲವಾದ ಹಿಂದುಳಿದವರ ಮಠಗಳಿಗೆ 75 ಕೋಟಿ ರೂ. ಮೀಸಲಿಟ್ಟಿದ್ದಾರೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications