ಸನ್ ನೆಟ್ವರ್ಕ್ ತೆಕ್ಕೆಗೆ ಟಿವಿ 9 ಗ್ರೂಪ್ ! ಸ್ಪಷ್ಟೀಕರಣ
ಚೆನ್ನೈ, ಜು 17: ಕಲಾನಿಧಿ ಮಾರನ್ ಒಡೆತನದ ಸನ್ ಟಿವಿ ನೆಟ್ವರ್ಕ್ ಲಿಮಿಟೆಡ್ ಹೈದರಾಬಾದ್ ಮೂಲದ ಟಿವಿ 9 ಸಮೂಹ ಸಂಸ್ಥೆಯನ್ನು ಖರೀದಿಸಲಿದೆ ಎನ್ನುವ ಸುದ್ದಿಗೆ ಸನ್ ನೆಟ್ವರ್ಕ್ ಸ್ಪಷ್ಟೀಕರಣ ನೀಡಿದೆ.
ಮಾಧ್ಯಮಗಳಲ್ಲಿ ಬರುತ್ತಿರುವ ಈ ಸುದ್ದಿ ಸತ್ಯಕ್ಕೆ ದೂರವಾಗಿದ್ದು, ಈ ವರದಿಯಲ್ಲಿ ಯಾವುದೇ ಸತ್ಯಾಂಶಗಳಿಲ್ಲ ಎಂದು ಸನ್ ನೆಟ್ವರ್ಕ್ ಲಿಮಿಟೆಡ್ ಸಂಸ್ಥೆಯ ಮುಖ್ಯ ಹಣಕಾಸು ಅಧಿಕಾರಿ ಎಸ್ ಎಲ್ ನಾರಾಯಣ್ ಸ್ಪಷ್ಟ ಪಡಿಸಿದ್ದಾರೆ.

ಈ ಬಗ್ಗೆ ಮಾತನಾಡುತ್ತಿದ್ದ ಅಸೋಸಿಯೇಟೆಡ್ ಬ್ರಾಡ್ಕಾಸ್ಟ್ ಕಂಪೆನಿ ಲಿಮಿಟೆಡ್ ಸಂಸ್ಥೆಯ ಶ್ರೀನಿರಾಜು , ಟಿವಿ 9 ಸಮೂಹ ಸಂಸ್ಥೆಯ ಷೇರುಗಳನ್ನು ಸನ್ ನೆಟ್ವರ್ಕಿಗೆ ಮಾರಾಟ ಮಾಡುವ ಸುದ್ದಿ ಸುಳ್ಳು ವರದಿ. ಇದು ಚರ್ಚೆಯ ಹಂತದಲ್ಲೂ ಇಲ್ಲ ಮತ್ತು ಸನ್ ನೆಟ್ವರ್ಕ್ ಈ ಬಗ್ಗೆ ನಮಗೆ ಪ್ರಸ್ತಾಪನೆಯನ್ನೂ ಸಲ್ಲಿಸಿಲ್ಲ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಸನ್ ನೆಟ್ವರ್ಕ್, ಟಿವಿ 9 ಸಂಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದು ಕೊಳ್ಳುವ ಸಂಬಂಧ ಮಾತುಕತೆ ಅಂತಿಮ ಹಂತದಲ್ಲಿದೆ. ಸುಮಾರು 150 ಕೋಟಿ ರೂಪಾಯಿಗೆ ಈ ಡೀಲ್ ಅಂತಿಮವಾಗಬಹುದು ಎಂದು ಹಿಂದು ಬ್ಯುಸಿನೆಸ್ ಆನ್ಲೈನ್ ಸೇರಿದಂತೆ ಹಲವು ಆಂಗ್ಲ ಅಂತರ್ಜಾಲಗಳಲ್ಲಿ ಸೋಮವಾರ (ಜು 15) ವರದಿ ಪ್ರಕಟವಾಗಿದ್ದವು.
ಮಾರಿಷಸ್ ಮೂಲದ ಸೈಫ್ ಪಾರ್ಟ್ನರ್ಸ್ ಟಿವಿ 9 ಸಂಸ್ಥೆಯಲ್ಲಿ ಗಣನೀಯ ಷೇರುಗಳನ್ನು ಹೊಂದಿದ್ದು ಅದನ್ನು ಅದು ಮಾರಾಟ ಮಾಡಿ ಸಂಸ್ಥೆಯ ಆಡಳಿತದಿಂದ ಹೊರಬರಲು ಇಚ್ಚಿಸುತ್ತಿದೆ ಎಂದೂ ಅಂತರ್ಜಾಲದಲ್ಲಿ ವರದಿಯಾಗಿತ್ತು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications