ಕ್ರೈಸ್ಟ್ ಕಾಲೇಜು ಲೈಂಗಿಕ ಕಿರುಕುಳ ಪ್ರಕರಣಕ್ಕೆ ತೆರೆ

ಬುಧವಾರ ವಿದ್ಯಾರ್ಥಿನಿ ಪೋಷಕರು, ಬೆಂಗಳೂರಿನ ಮೈಕೋ ಲೇಔಟ್ ಪೊಲೀಸ್ ಠಾಣೆಗೆ ತೆರಳಿ ಶಿಕ್ಷಕ ಅಜಯ್ ಪಿನ್ನಿತ್ರನ್ ವಿರುದ್ಧ ನೀಡಿದ ತೀರ್ಪನ್ನು ಹಿಂಪಡೆದಿದ್ದಾರೆ. ನಮಗೆ ಈ ಪ್ರಕರಣದಿಂದ ಮಾನಸಿಕ ಕಿರಿಕಿರಿ ಉಂಟಾಗಿದೆ.
ಈ ಪ್ರಕಣದ ತನಿಖೆ ನಡೆದು ವಿಚಾರಣೆ ಮುಗಿಯಲು ಹಲವು ದಿನಗಳು ಬೇಕು. ನಮಗೆ ಅನಗತ್ಯ ಕಲಾಪಗಳು ಬೇಡ ಆದ್ದರಿಂದ ದೂರನ್ನು ಹಿಂಪಡೆಯುತ್ತೇವೆ. ದೂರನ್ನು ಹಿಂಪಡೆಯುವಂತೆ ನಮಗೆ ಯಾವುದೇ ಒತ್ತಡವಿಲ್ಲ ಎಂದು ವಿದ್ಯಾರ್ಥಿನಿ ತಂದೆ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.
ಏನಿದು ಪ್ರಕರಣ : ಕ್ರೈಸ್ಟ್ ಕಾಲೇಜಿನ 2ನೇ ವರ್ಷದ ಬಿಎ ವಿದ್ಯಾರ್ಥಿನಿ ಎನ್ಸಿಸಿಗೆ ಸೇರ್ಪಡೆಯಾಗಿದ್ದಳು. ಸುಮಾರು ಆರು ತಿಂಗಳಿನಿಂದ, ತರಬೇತಿ ನೆಪದಲ್ಲಿ ಶಿಕ್ಷಕ ಅಜಯ್ ನನ್ನನ್ನು ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬುದು ವಿದ್ಯಾರ್ಥಿನಿ ಆರೋಪ.
ಸೋಮವಾರ ಎನ್ಸಿಸಿ ಶಿಬಿರದಲ್ಲಿ ಪಾಲ್ಗೊಳ್ಳುವಂತೆ ವಿದ್ಯಾರ್ಥಿನಿಗೆ ಶಿಕ್ಷಕರು ಸೂಚಿಸಿದ್ದರು. ಇದಕ್ಕೆ ಆಕೆ ಆಕ್ಷೇಪ ವ್ಯಕ್ತಪಡಿಸಿದಾಗ, ವಿದ್ಯಾರ್ಥಿಗಳ ಎದುರು ನನಗೆ ಹೊಡೆದಿದ್ದಾರೆ ಯುವತಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಳು.
ಶಿಕ್ಷಕರ ವರ್ತನೆಯಿಂದ ಮನನೊಂದ ಯುವತಿ ಸೋಮವಾರ ಕಾಲೇಜಿನ ಕ್ಯಾಂಪಸ್ಸಿನಲ್ಲಿ, ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಸದ್ಯ ಯುವತಿ ಜಯನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಯುವತಿ ಕುಟುಂಬದವರು ನೀಡಿದ ದೂರಿನ ಅನ್ವಯ ಮೈಕೋಲೇಜೌಟ್ ಪೊಲೀಸರು ಮಂಗಳವಾರ ಶಿಕ್ಷಕ ಅಜಯ್ ನನ್ನು ಬಂಧಿಸಿ, 6ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಶಿಕ್ಷಕನಿಗೆ ಒಂದು ವಾರಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications