ಮತ್ತೆ ಬಿಜೆಪಿಗೆ ನಮೋ ಎಂದ ಶಶೀಲ್ ನಮೋಶಿ

ದಾವಣಗೆರೆಯಲ್ಲಿ ಮಂಗಳವಾರ ಮಾತನಾಡಿದ ಶಶೀಲ್ ನಮೋಶೀ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೊನೆ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿತ್ತು. ಆದ್ದರಿಂದ, ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಜೆಡಿಎಸ್ ಸೇರಿದ್ದೆ. ಪುನಃ ನಾನು ಬಿಜೆಪಿಗೆ ಮರಳುಲು ತೀರ್ಮಾನಿಸಿದ್ದು, ಶೀಘ್ರದಲ್ಲೇ ಪಕ್ಷ ಸೇರತ್ತೇನೆ ಹಾಗೂ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಹೇಳಿದರು.
ಬಿಜೆಪಿ ತೊರೆದಿದ್ದರು : ವಿಧಾನಸಭೆ ಚುನಾವಣೆಯಲ್ಲಿ ಗುಲ್ಬರ್ಗಾ ಉತ್ತರ ಕ್ಷೇತ್ರದಿಂದ ಶಶೀಲ್ ನಮೋಶಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿತ್ತು. ಇದರಿಂದ ಕೋಪಗೊಂಡು ಜೆಡಿಎಸ್ ಸೇರಿದ್ದರು. (ಬಿಜೆಪಿ ತೊರೆದ ನಮೋಶಿ)
ಆದರೆ, ಚುನಾವಣೆಯಲ್ಲಿ ಗುಲ್ಬರ್ಗಾ ಉತ್ತರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಳಿದು ಸೋಲು ಅನುಭವಿಸಿದ್ದರು. ಸದ್ಯ ಬಿಜೆಪಿ ಮರಳುತ್ತೇನೆ ಎಂದು ಹೇಳುವ ಮೂಲಕ ಬಿಜೆಪಿಗೆ ಮರಳಿ ಬನ್ನಿ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ನಾಯಕರು ಬರುತ್ತಾರೆ : ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಪಕ್ಷ ಕೆಜೆಪಿ ಹಾಗೂ ಬಿಎಸ್ಆರ್ ಕಾಂಗ್ರೆಸ್ ಎಂದು ಮೂರು ಹೋಳಾಗಿರುವುದೇ ಕಾರಣ ಎಂದು ಶಶೀಲ್ ನಮೋಶಿ ವಿಶ್ಲೇಷಿಸಿದ್ದಾರೆ.
ಮುಂದಿನ ದಿನಗಳಲ್ಲಿ ಮೂರು ಪಕ್ಷಗಳ ನಾಯಕರು ಒಗ್ಗಟ್ಟಾಗುತ್ತೇವೆ. ಕಾಂಗ್ರೆಸ್ ಪಕ್ಷವನ್ನು ಎದುರಿಸುತ್ತೇವೆ. ಪಕ್ಷದ ಹಿರಿಯ ನಾಯಕರು ಈ ಕುರಿತು ಮಾತುಕತೆ ನಡೆಸಿದ್ದು, ತಾವು ಸೇರಿದಂತೆ ಹಲವು ಮುಖಂಡರು ಬಿಜೆಪಿ ಮರಳಲಿದ್ದೇವೆ ಎಂದು ನಮೋಶಿ ಹೇಳಿದರು.
ಬಿಜೆಪಿ, ಕೆಜೆಪಿ ಮತ್ತು ಬಿಎಸ್ಆರ್ ಕಾಂಗ್ರೆಸ್ ನಡುವಿನ ಮೈತ್ರಿಯ ಮಾತುಗಳು ರಾಜ್ಯದಲ್ಲಿ ಕೇಳಿ ಬರುತ್ತಿರುವಾಗಲೇ ಶಶೀಲ್ ನವೋಶಿ ಬಿಜೆಪಿಗೆ ಮರಳಲು ಸಿದ್ಧರಾಗಿದ್ದಾರೆ. ಇವರಿಂದಾಗಿ ಬಿಜೆಪಿಗೆ ಮರಳುವವರ ಅಭಿಯಾನಕ್ಕೆ ಚಾಲನೆ ದೊರಕಲಿದಯೇ ಕಾದು ನೋಡಬೇಕು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications