ಬಿಜಿಎಸ್ ಮೆಡಿಕಲ್ ಕಾಲೇಜಿನ ಮೇಲೆ ಐಟಿ ದಾಳಿ

ಗುರುವಾರ 12 ಗಂಟೆ ವೇಳೆಗೆ ಬೆಂಗಳೂರಿನ ವಿಜಯನಗರದಲ್ಲಿರುವ ಬಿಜಿಎಸ್ ಸಂಸ್ಥೆಯ ಮೆಡಿಕಲ್ ಕಾಲೇಜಿನ ಕಚೇರಿಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದರು. ವಿಜಯನಗರದಲ್ಲಿರುವುದು ಆದಿಚುಂನಗಿರಿ ಮಠದ ಶಾಖಾ ಕೇಂದ್ರವಾಗಿದ್ದು, ಅದರ ಮೇಲೆ ದಾಳಿ ನಡೆಸಿರುವುದು ಒಕ್ಕಲಿಗೆ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರಿನಲ್ಲಿರುವ ಅಂಬೇಡ್ಕರ್ ಮೆಡಿಕಲ್ ಕಾಲೇಜಿನ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ನಾಲ್ಕು ಮತ್ತು ಗುಲ್ಬರ್ಗಾದ ಮೂರು ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಶಶೀಲ್ ನಮೋಶಿ ನಿವಾಸದ ಮೇಲೆ ದಾಳಿ : ಗುಲ್ಬರ್ಗಾದಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಶಶೀಲ್ ನಮೋಶಿ ಮನೆ ಮೇಲೆಯೂ ದಾಳಿ ನಡೆಸಲಾಗಿದೆ. ಶಶೀಲ್ ನಮೋಶಿ ಮಾಜಿ ವಿಧಾನಪರಿಷತ್ ಸದಸ್ಯರಾಗಿದ್ದು, ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿದ್ದಾರೆ. ಹೈಕ ಶಿಕ್ಷಣ ಸಂಸ್ಥೆಗಳ ಹಲವು ಕೌನ್ಸಿಲರ್ ಗಳ ಮನೆಗಳ ಮೇಲೂ ದಾಳಿ ನಡೆಸಲಾಗಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. (ಮಠದ ಮೇಲಿನ ದಾಳಿಗೆ ವ್ಯಾಪಕ ಖಂಡನೆ)
ಡಿ.ಕೆ.ಶಿವಕುಮಾರ್ ಖಂಡನೆ : ಬಿಜಿಎಸ್ ಮೆಡಿಕಲ್ ಕಾಲೇಜಿನ ಕಚೇರಿ ಮಾಡಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಕ್ರಮವನ್ನು ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಖಂಡಿಸಿದ್ದಾರೆ. ಧಾರ್ಮಿಕ ಸಂಸ್ಥೆಗಳ ಮೇಲೆ ದಾಳಿ ನಡೆಸಿರುವುದು ಖಂಡನೀಯ. ಮಠಗಳು ಸಮಾಜಕ್ಕೆ ಕೊಡುಗೆ ನೀಡುವ ಕೆಲಸ ಮಾಡುತ್ತವೆ. ಅಂತಹ ಮಠಗಳು ನಡೆಸುವ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ಸಡೆಸುವ ಕ್ರಮ ಸರಿಯಲ್ಲ ಎಂದು ಹೇಳಿದ್ದಾರೆ.
ಸದಾನಂದ ಗೌಡರು ಗರಂ : ವಿಧಾನ ಪರಿಷತ್ ನಲ್ಲಿ ಆದಿಚುಂಚನಗಿರಿ ಮಠದ ಮೇಲಾಗಿರುವ ದಾಳಿಯನ್ನು ಖಂಡಿಸಿದ ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ಮಠ-ಮಂದಿರಗಳ ಮೇಲೆ ದಾಳಿ ನಡೆದೆ, ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಮಠದ ಮೇಲೆ ದಾಳಿ ನಡೆಸಿರುವುದು ಸರಿಯಲ್ಲ ಎಂದು ದಾಳಿಯನ್ನು ಖಂಡಿಸಿದರು.
ಸಚಿವರು ಹೊಣೆ : ಗೌರವದ ಪ್ರತೀಕವಾಗಿರುವ ಮಠದ ಮೇಲೆ ದಾಳಿ ನಡೆಸಿರುವುದು ಖಂಡನೀಯ. ಇದು ಒಂದು ಸಮುದಾಯದ ಸ್ವಾಭಿಮಾನವನ್ನು ಕೆಣಕುತ್ತದೆ. ಇಂತಹ ಬೆಳವಣಿಗೆಗಳಿಗೆ ಕೇಂದ್ರ ಸರ್ಕಾರದಲ್ಲಿರುವ ರಾಜ್ಯದ ಸಚಿವರೆ ಹೊಣೆ ಎಂದು ಮಾಜಿ ಸಚಿವ ಸಿ.ಟಿ.ರವಿ ಆರೋಪಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications