ಬಿಜಿಎಸ್ ಮೆಡಿಕಲ್ ಕಾಲೇಜಿನ ಮೇಲೆ ಐಟಿ ದಾಳಿ

ಗುರುವಾರ 12 ಗಂಟೆ ವೇಳೆಗೆ ಬೆಂಗಳೂರಿನ ವಿಜಯನಗರದಲ್ಲಿರುವ ಬಿಜಿಎಸ್ ಸಂಸ್ಥೆಯ ಮೆಡಿಕಲ್ ಕಾಲೇಜಿನ ಕಚೇರಿಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದರು. ವಿಜಯನಗರದಲ್ಲಿರುವುದು ಆದಿಚುಂನಗಿರಿ ಮಠದ ಶಾಖಾ ಕೇಂದ್ರವಾಗಿದ್ದು, ಅದರ ಮೇಲೆ ದಾಳಿ ನಡೆಸಿರುವುದು ಒಕ್ಕಲಿಗೆ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರಿನಲ್ಲಿರುವ ಅಂಬೇಡ್ಕರ್ ಮೆಡಿಕಲ್ ಕಾಲೇಜಿನ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ನಾಲ್ಕು ಮತ್ತು ಗುಲ್ಬರ್ಗಾದ ಮೂರು ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಶಶೀಲ್ ನಮೋಶಿ ನಿವಾಸದ ಮೇಲೆ ದಾಳಿ : ಗುಲ್ಬರ್ಗಾದಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಶಶೀಲ್ ನಮೋಶಿ ಮನೆ ಮೇಲೆಯೂ ದಾಳಿ ನಡೆಸಲಾಗಿದೆ. ಶಶೀಲ್ ನಮೋಶಿ ಮಾಜಿ ವಿಧಾನಪರಿಷತ್ ಸದಸ್ಯರಾಗಿದ್ದು, ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿದ್ದಾರೆ. ಹೈಕ ಶಿಕ್ಷಣ ಸಂಸ್ಥೆಗಳ ಹಲವು ಕೌನ್ಸಿಲರ್ ಗಳ ಮನೆಗಳ ಮೇಲೂ ದಾಳಿ ನಡೆಸಲಾಗಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. (ಮಠದ ಮೇಲಿನ ದಾಳಿಗೆ ವ್ಯಾಪಕ ಖಂಡನೆ)
ಡಿ.ಕೆ.ಶಿವಕುಮಾರ್ ಖಂಡನೆ : ಬಿಜಿಎಸ್ ಮೆಡಿಕಲ್ ಕಾಲೇಜಿನ ಕಚೇರಿ ಮಾಡಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಕ್ರಮವನ್ನು ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಖಂಡಿಸಿದ್ದಾರೆ. ಧಾರ್ಮಿಕ ಸಂಸ್ಥೆಗಳ ಮೇಲೆ ದಾಳಿ ನಡೆಸಿರುವುದು ಖಂಡನೀಯ. ಮಠಗಳು ಸಮಾಜಕ್ಕೆ ಕೊಡುಗೆ ನೀಡುವ ಕೆಲಸ ಮಾಡುತ್ತವೆ. ಅಂತಹ ಮಠಗಳು ನಡೆಸುವ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ಸಡೆಸುವ ಕ್ರಮ ಸರಿಯಲ್ಲ ಎಂದು ಹೇಳಿದ್ದಾರೆ.
ಸದಾನಂದ ಗೌಡರು ಗರಂ : ವಿಧಾನ ಪರಿಷತ್ ನಲ್ಲಿ ಆದಿಚುಂಚನಗಿರಿ ಮಠದ ಮೇಲಾಗಿರುವ ದಾಳಿಯನ್ನು ಖಂಡಿಸಿದ ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ಮಠ-ಮಂದಿರಗಳ ಮೇಲೆ ದಾಳಿ ನಡೆದೆ, ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಮಠದ ಮೇಲೆ ದಾಳಿ ನಡೆಸಿರುವುದು ಸರಿಯಲ್ಲ ಎಂದು ದಾಳಿಯನ್ನು ಖಂಡಿಸಿದರು.
ಸಚಿವರು ಹೊಣೆ : ಗೌರವದ ಪ್ರತೀಕವಾಗಿರುವ ಮಠದ ಮೇಲೆ ದಾಳಿ ನಡೆಸಿರುವುದು ಖಂಡನೀಯ. ಇದು ಒಂದು ಸಮುದಾಯದ ಸ್ವಾಭಿಮಾನವನ್ನು ಕೆಣಕುತ್ತದೆ. ಇಂತಹ ಬೆಳವಣಿಗೆಗಳಿಗೆ ಕೇಂದ್ರ ಸರ್ಕಾರದಲ್ಲಿರುವ ರಾಜ್ಯದ ಸಚಿವರೆ ಹೊಣೆ ಎಂದು ಮಾಜಿ ಸಚಿವ ಸಿ.ಟಿ.ರವಿ ಆರೋಪಿಸಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications