ಸೀರೆ ಕದ್ದ ಲಕ್ಷ್ಮಿದೇವಿ ಸಾವಿನ ಹೊಣೆ ಯಾರದ್ದು?
ಬೆಂಗಳೂರು, ಜು.18 : ನಗರದ ಹತ್ತು ರೇಷ್ಮೆ ಸೀರೆ ಕಳ್ಳತನ ಪ್ರಕರಣ ದುರಂತವಾಗಿ ಅಂತ್ಯಗೊಂಡಿದೆ. ಪೊಲೀಸರಿಗೆ ಹೆದರಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ, ಆರೋಪಿ ಲಕ್ಷ್ಮಿದೇವಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದಾರೆ.
ಹತ್ತು ರೇಷ್ಮೆ ಸೀರೆ ಕದ್ದ ಆರೋಪ ಎದುರಿಸುತ್ತಿದ್ದ ಲಕ್ಷ್ಮಿದೇವಿ, ಭಾನುವಾರ ದೊಡ್ಡಬೊಮ್ಮಸಂದ್ರದ ಮನೆಯಲ್ಲಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿದ್ದರು. ಶೇ 75ರಷ್ಟು ಸುಟ್ಟಗಾಯದಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸತತವಾಗಿ ಮೂರು ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ ಲಕ್ಷ್ಮಿದೇವಿ ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದರಿಂದ ರೇಷ್ಮೆ ಸೀರೆ ಕದ್ದ ಪ್ರಕರಣದ ದುರಂತ ಅಂತ್ಯ ಕಂಡಿದೆ.
ಘಟನೆ ಏನು : ಮೂಲತಃ ಆಂಧ್ರ ಪ್ರದೇಶ ಮೂಲದ ಲಕ್ಷ್ಮಿದೇವಿ (28) ದೊಡ್ಡಬೊಮ್ಮಸಂದ್ರದ ಡಾ.ಅಜಯ್ ಎಂಬುವವರ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರ ಮನೆಯಲ್ಲಿ ಕೆಲವು ದಿನಗಳ ಹಿಂದೆ 10 ರೇಷ್ಮೆ ಸೀರೆ ಕಳುವಾಗಿತ್ತು.
ಇದಕ್ಕೆ ಸಂಬಂಧಿಸಿದಂತೆ ಅಜಯ್ ಮನೆ ಕೆಲಸ ಮಾಡುತ್ತಿದ್ದ ಲಕ್ಷ್ಮಿದೇವಿ ವಿರುದ್ಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಲಕ್ಷ್ಮಿದೇವಿಯನ್ನು ಕರೆದು ವಿಚಾರಣೆ ಮಾಡಿದಾಗ, ಆಕೆ ತಪ್ಪೊಪ್ಪಿಕೊಂಡಿದ್ದಳು.
ಆದರೆ, ಶನಿವಾರ ಪೊಲೀಸರಿಂದ ತಪ್ಪಿಸಿಕೊಂಡು ಓಡಿಬಂದಿದ್ದ ಲಕ್ಷ್ಮಿದೇವಿ ತನ್ನ ಮನೆಯಲ್ಲಿ ಪೊಲೀಸರಿಗೆ ಹೆದರಿ, ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ಆಕೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಲಕ್ಷ್ಮಿದೇವಿ ಹೇಳಿಕೆಯೇ ಬೇರೆ : ಆತ್ಮಹತ್ಯೆಗೆ ಯತ್ನಿಸುವ ಮೊದಲು ಲಕ್ಷ್ಮಿದೇವಿ ತನ್ನ ಪರ ವಕೀಲರಿಗೆ ಡಾ.ಅಜಯ್ ನನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಅದನ್ನು ಪ್ರಶ್ನಿಸಿದಾಗ ಸೀರೆ ಕದ್ದ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಹೇಳಿಕೆ ನೀಡಿದ್ದಳು.
ನನಗೆ ಮತ್ತು ಚಿಕ್ಕಪ್ಪನಿಗೆ ಪೊಲೀಸರು ಅನಗತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಳು. ವಕೀಲರು ಪೊಲೀಸ್ ಆಯುಕ್ತರಿಗೆ ಈ ಪ್ರಕರಣದ ವಿವರ ನೀಡಿದ್ದರು. ಅವರು, ಇನ್ಸ್ಪೆಕ್ಟರ್ ಪ್ರಸಾದ್ ಹಾಗೂ ಸಬ್ಇನ್ಸ್ಪೆಕ್ಟರ್ ಸುದರ್ಶನ್ಸಿಂಗ್ ಅವರನ್ನು ಅಮಾನತು ಮಾಡಿದ್ದರು.
ಆದರೆ, ಪ್ರಕರಣದ ಸತ್ಯಾಂಶ ಹೊರಗೆ ಬರುವ ಮುನ್ನವೇ ಲಕ್ಷ್ಮಿದೇವಿ ಸಾವಿಗೆ ಶರಣಾಗಿದ್ದಾಳೆ. ಇದರಿಂದಾಗಿ ಪ್ರಕರಣ ಅಂತ್ಯಗೊಂಡಿದೆ. ಹಾಗಾದರೆ ಲಕ್ಷ್ಮಿದೇವಿ ಸಾವಿನ ಹೊಣೆ ಯಾರದ್ದು? ಎಂಬ ಪ್ರಶ್ನೆ ನಿಗೂಢವಾಗಿಯೇ ಉಳಿದಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications