Air India ಆರ್ಥಿಕ ಸಂಕಷ್ಟ: 400 ಗಗನಸಖಿಯರು ನಾಪತ್ತೆ!

ಆರ್ಥಿಕ ಶಿಸ್ತು ಕಾಪಾಡಿಕೊಳ್ಳಲು 2 ವರ್ಷಗಳ ಹಿಂದೆ 3600 ಮಹಿಳಾ ಉದ್ಯೋಗಿಗಳನ್ನು ತಾತ್ಕಾಲಿಕವಾಗಿ ಮನೆಗೆ ಕಳುಹಿಸಿತ್ತು. ಪರಿಸ್ಥಿತಿ ಸುಧಾರಿಸಿದ ನಂತರ ಕೆಲಸಕ್ಕೆ ವಾಪಸ್ ಕರೆಸಿಕೊಳ್ಳುವುದಾಗಿ ಸರಕಾರಿ ವಿಮಾನಯಾನ ಸಂಸ್ಥೆ ಭರವಸೆ ನೀಡಿ, ಹೆಣ್ಣುಮಕ್ಕಳನ್ನು ಮನೆಗೆ ಕಳುಹಿಸಿಕೊಟ್ಟಿತ್ತು.
ಆದರೆ ಉಹುಃ. ಹಾಗೆ ಮನೆಗೆ ತೆರಳಿದ ಉದ್ಯೋಗಿಗಳ ಪೈಕಿ 400 ಮಹಿಳೆಯರು ಸಂಸ್ಥೆಯತ್ತ ಮುಖ ಮಾಡಿಲ್ಲ. ಇದರಿಂದ Air India ಆಡಳಿತ ಮಂಡಳಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಮುಂದಾಗಿದೆ.
ಇವರ ಪೈಕಿ 300 ಮಂದಿ ದೆಹಲಿಯ ಗಗನಸಖಿಯರಾಗಿದ್ದಾರೆ. ಇವರಿಗೆಲ್ಲ ತಕ್ಷಣವೇ show cause notice ಜಾರಿಗೊಳಿಸುವುದಾಗಿ Air India ಆಡಳಿತ ಮಂಡಳಿ ಮೂಲಗಳು ತಿಳಿಸಿವೆ.
ನಿನ್ನೆಯಷ್ಟೇ ಏರ್ ಇಂಡಿಯಾ ಪೈಲಟುಗಳು ಅವಾಂತರ ಸೃಷ್ಟಿಸಿದ್ದರು:
ಕನ್ನಡ ಸಿನಿಮಾ ತಾರೆಯೊಬ್ಬರು ಕಾಕ್ ಪಿಟ್ ಪ್ರವೇಶಿಸಿದ ಆರೋಪದ ಮೇಲೆ ಇಬ್ಬರು ಏರ್ ಇಂಡಿಯಾ ಪೈಲಟ್ ಗಳನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಈ ವಿಮಾನ ಬೆಂಗಳೂರಿನಿಂದ ಹೈದರಾಬಾದಿಗೆ ಪ್ರಯಾಣಿಸುತ್ತಿತ್ತು.
ವಿಮಾನದ ಕಾಕ್ ಪಿಟ್ ಗೆ ನಟಿಯೊಬ್ಬರಿಗೆ ಪ್ರವೇಶ ನೀಡುವ ಮೂಲಕ ವಿಮಾನಯಾನದ ಎಲ್ಲಾ ನಿಯಮಗಳನ್ನು ಉಲ್ಲಂಘಿಸಿರುವ ಹಾಗೂ ಕರ್ತವ್ಯಲೋಪ ಎಸಗಿರುವ ಆರೋಪದ ಮೇರೆಗೆ ಇವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ನಟಿಯೊಬ್ಬರು (ನಿತ್ಯಾ ಮೆನನ್) ಕಾಕ್ ಪಿಟ್ ಪ್ರವೇಶಿಸಿ ಅಬ್ಸರ್ವರ್ ಸೀಟ್ ನಲ್ಲಿ ಕುಳಿತಿದ್ದರು. ಈ ಸೀಟಿನಲ್ಲಿ ಕುಳಿತುಕೊಳ್ಳಬೇಕಾದರೆ ಡಿಜಿಸಿಎ ಅನುಮತಿ ಇರಬೇಕು. ನಿಯಮಗಳನ್ನು ಉಲ್ಲಂಘಿಸಿರುವ ಇಬ್ಬರು ಪೈಲಟ್ ಗಳನ್ನು ಅಮಾನತುಗೊಳಿಸಿ ತನಿಖೆಗೆ ಆದೇಶಿಸಲಾಗಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.
ತುರ್ತು ಸಂದರ್ಭಗಳನ್ನು ಹೊರಪಡಿಸಿದರೆ ನಿಯಮಗಳ ಪ್ರಕಾರ ಯಾವುದೇ ಪ್ರಯಾಣಿಕರು ಕಾಕ್ ಪಿಟ್ ಗೆ ಪ್ರವೇಶಿಸುವಂತಿಲ್ಲ. ಆದರೆ ಈ ಇಬ್ಬರು ಪೈಲಟ್ ಗಳು ಕರ್ತವ್ಯಪ್ರಜ್ಞೆ ಮರೆತು ನಡೆದುಕೊಂಡಿದ್ದಾರೆ ಎಂಬ ಆರೋಪಗಳನ್ನು ಮಾಡಲಾಗಿದೆ.
ಇಷ್ಟಕ್ಕೂ ಕಾಕ್ ಪಿಟ್ ಪ್ರವೇಶಿಸಿದ್ದ ನಟಿ ಯಾರು ಎಂಬ ಬಗ್ಗೆ ನಿಖರವಾದ ಮಾಹಿತಿ ಇಲ್ಲ. ಮೂಲಗಳ ಪ್ರಕಾರ ಆ ನಟಿ ಕನ್ನಡದ 'ಮೈನಾ' ಚಿತ್ರದ ನಾಯಕಿ ನಿತ್ಯಾ ಮೆನನ್ ಎನ್ನಲಾಗಿದೆ. ಆದರೆ ಈ ಸುದ್ದಿಯನ್ನು ನಿತ್ಯಾ ಮೆನನ್ ಸಂಪೂರ್ಣ ಅಲ್ಲಗಳೆದಿದ್ದಾರೆ.
ಸದ್ಯಕ್ಕೆ ನಿತ್ಯಾ ಮೆನನ್ ಅವರು ತೆಲುಗು ಚಿತ್ರವೊಂದರಲ್ಲಿ ಅಭಿನಯಿಸಲು ಹೈದರಾಬಾದ್ ಗೆ ತೆರಳಿದ್ದಾರೆ. ಅವರು ಯಾವುದೇ ವಿಮಾನದ ಕಾಕ್ ಪಿಟ್ ಗೆ ಪ್ರವೇಶಿಸಿಲ್ಲ. ಇಷ್ಟಕ್ಕೂ ಕಾಕ್ ಪಿಟ್ ಪ್ರವೇಶಿಸಿರುವವರು ಯಾರು ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದಿದ್ದಾರೆ ಅವರ ಮ್ಯಾನೇಜರ್.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications