ಮೇಲುಕೋಟೆ : ಪೊಲೀಸರಿಗೆ ಹೆದರಿದ ಅರ್ಚಕರು ಪರಾರಿ

ವಿಧಾನಸಭೆ ಕಲಾಪದಲ್ಲಿ ದೇವಾಲಯದ ಅವ್ಯವಹಾರ ಪ್ರಕರಣದ ಬಗ್ಗೆ ಚರ್ಚೆ ನಡೆದಿತ್ತು. ಮುಜರಾಯಿ ಸಚಿವ ಪ್ರಕಾಶ್ ಹುಕ್ಕೇರಿ, ನರಸರಾಜ ಭಟ್ಟರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಸದನದಲ್ಲಿ ಹೇಳಿಕೆ ನೀಡಿದ್ದರು.
ಸಚಿವರ ಆದೇಶದಂತೆ ಮಂಡ್ಯ ಜಿಲ್ಲಾಧಿಕಾರಿ ಬಿ.ಎಸ್.ಕೃಷ್ಣಯ್ಯ, ದೇವಾಲಯದ ಕಾರ್ಯನಿರ್ವಹಣಾಧಿಕಾರಿಗೆ ಮೇಲುಕೋಟೆ ಠಾಣೆಯಲ್ಲಿ ನರಸರಾಜ ಭಟ್ಟ ವಿರುದ್ಧ ದೂರು ದಾಖಲಿಸುವಂತೆ ದೂರು ಸೂಚಿಸಿದ್ದರು. ಬುಧವಾರ ರಾತ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ.
ದೂರಿನ ಪ್ರತಿ ಹಿಡಿದು ನರಸರಾಜ ಭಟ್ಟರನ್ನು ಹುಡುಕಲು ಗುರುವಾರ ಹೊರಟ ಪೊಲೀಸರಿಗೆ ನಿರಾಸೆಯಾಗಿದೆ. ಭಟ್ಟರು ತಮ್ಮ ವಿರುದ್ಧ ದೂರು ದಾಖಲಾಗಿದ್ದು, ತಿಳಿಯುತ್ತಿದ್ದಂತೆಯೇ ಪರಾರಿಯಾಗಿದ್ದಾರೆ.
ಎಸ್ಐ ಅಶೋಕ್ ನೇತೃತ್ವದ ತಂಡ ಗುರುವಾರ ನರಸರಾಜ ಭಟ್ಟರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಆದರೆ, ಭಟ್ಟರ ಬಗ್ಗೆ ಯಾವುದೇ ಸುಳಿವು ದೊರೆತಿಲ್ಲ. ಅರ್ಚಕರನ್ನು ಬಂಧಿಸಲು ಎರಡು ತಂಡಗಳನ್ನು ರಚಿಸಲಾಗಿದೆ ಎಂದು ಅಶೋಕ್ ಹೇಳಿದ್ದಾರೆ.
ಯಾವ ಪ್ರಕರಣ : ನರಸರಾಜ ಭಟ್ಟರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 406 (ನಂಬಿಕೆ ದ್ರೋಹ), 408 (ಕರ್ತವ್ಯದಲ್ಲಿ ವಂಚನೆ), 420 (ಮೋಸ)ರ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆಡಳಿತಾಧಿಕಾರಿ ನೇಮಕಕ್ಕೂ ಚಿಂತನೆ : ದೇವಾಲಯದ ಅವ್ಯವಹಾರ ಪ್ರಕರಣಗಳು ಬೆಳಕಿಗೆ ಬಂದ ಹಿನ್ನಲೆಯಲ್ಲಿ ದೇವಾಲಯಕ್ಕೆ ಆಡಳಿತಾಧಿಕಾರಿ ನೇಮಕ ಮಾಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಮುಜರಾಯಿ ಖಾತೆ ಸಚಿವ ಪ್ರಕಾಶ್ ಹುಕ್ಕೇರಿ ಈ ಕುರಿತು ಸದನದಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ, ಈ ಕುರಿತು ಅಂತಿಮ ಆದೇಶ ಪ್ರಕಟವಾಗಿಲ್ಲ. (ದೇವಾಲಯದಲ್ಲಿ ನಡೆದ ಅಪಶಕುನಕ್ಕೆ ಬೆಚ್ಚಿಬಿದ್ದ ಜನತೆ)
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications