ಕಾಗೆ ಅಪಶಕುನಕ್ಕೆ ಹೆದರಿ ಇಂಜಿನಿಯರ್ ಆತ್ಮಹತ್ಯೆ!

ಬಸವೇಶ್ವರ ನಗರದ ನಿವಾಸಿಯಾಗಿರುವ ವಿ.ಆನಂದ್ (23) ಬುಧವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಂಪನಿಗೆ ತೆರಳುವಾಗ ಕಾಗೆ ಆನಂದ್ ಅವರಿಗೆ ಎರಡು ಬಾರಿ ಸ್ಪರ್ಶಿಸಿದ್ದೆ ಆತ್ಮಹತ್ಯೆಗೆ ಕಾರಣ ಎಂದು ತಿಳಿದು ಬಂದಿದೆ.
ಕಾಗೆ ಸ್ಪರ್ಶಿಸಿದರೆ ಅಪಶಕುನವಲ್ಲ ಎಂಬ ತಾಯಿಯ ಮಾತಿಗೂ ಬೆಲೆ ಕೊಡದ ಆನಂದ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುರುವಾರ ಆನಂದ್ ಸಹೋದರ, ಅವರ ಮನೆಗೆ ಭೇಟಿ ನೀಡಿದಾಗ, ಸಾವನ್ನಪ್ಪಿರುವ ವಿಷಯ ಬೆಳಕಿಗೆ ಬಂದಿದೆ.
ಘಟನೆ ಏನು : ಎಚ್ಎಎಲ್ ನಲ್ಲಿ ಕೆಲಸ ಮಾಡುತ್ತಿರುವ ಆನಂದ್ ಬುಧವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ಹೊರಟಿದ್ದರು. ಆದರೆ, ರಸ್ತೆಯಲ್ಲಿ ಕಾಗೆ ಅವರ ತಲೆಗೆ ಎರಡು ಬಾರಿ ತಾಗಿಕೊಂಡು ಹಾರಿಹೋಗಿದೆ. ಇದನ್ನು ದೊಡ್ಡ ಅಪಶಕುನ ಎಂದು ಅವರು ಭಾವಿಸಿದ್ದಾರೆ.
ತಕ್ಷಣ ಗದಗದಲ್ಲಿರುವ ತಾಯಿ ಪಾರ್ವತಿ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ದೊಡ್ಡ ಅಪಶಕುನ ನಡೆದಿದೆ ಎಂದು ಆತಂಕ ಹೇಳಿಕೊಂಡಿದ್ದಾರೆ. ಆನಂದ್ ಸಮಾಧಾನಪಡಿಸಿದ ತಾಯಿ, ಏನೂ ಆಗುವುದಿಲ್ಲ. ಇದು ಅಪಶಕುನವಲ್ಲ ಧೈರ್ಯವಾಗಿರುವಂತೆ ಹೇಳಿದ್ದಾರೆ.
ಆಂಜನೇಯ ಮತ್ತು ಶನಿಮಹಾತ್ಮ ದೇವಾಲಯದಲ್ಲಿ ಪೂಜೆ ಮಾಡಿಸು ಸರಿಹೋಗುತ್ತದೆ ಎಂಬ ಸಲಹೆಯನ್ನು ನೀಡಿದ್ದಾರೆ. ಆದರೆ, ತಾಯಿಯ ಮಾತಿನಿಂದ ಸಮಾಧಾನಗೊಳ್ಳದ ಆನಂದ್ ಬುಧವಾರ ರಾತ್ರಿ ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾರೆ.
ಗದಗ ಜಿಲ್ಲೆಯವರು : ಆನಂದ್ ಮೂಲತಃ ಗದಗ ಜಿಲ್ಲೆ ಲಕ್ಷ್ಮೇಶ್ವರದವರು. ಸಹೋದರ ವಿ.ಹಂಪಣ್ಣ ಮತ್ತು ಆನಂದ್ ಎರಡು ವರ್ಷಗಳಿಂದ ಬಸವೇಶ್ವರನಗರದಲ್ಲಿ ವಾಸಿಸುತ್ತಿದ್ದಾರೆ. ಇಂಜಿನಿಯರಿಂಗ್ ಪದವೀಧರರಾದ ಆನಂದ್ ಎಚ್ಎಎಲ್ ನಲ್ಲಿ ತರಬೇತಿ ನಿರತ ನೌಕರರಾಗಿ ಕೆಲಸ ಮಾಡುತ್ತಿದ್ದರು.
ಆನಂದ್ ತಂದೆ ಅನಾರೋಗ್ಯ ಪೀಡಿತರಾಗಿದ್ದರಿಂದ ಹಂಪಣ್ಣ ಊರಿಗೆ ತೆರಳಿದ್ದರು. ಇದೇ ವೇಳೆ ಬುಧವಾರ ಆನಂದ್ ತಲೆಗೆ ಕಾಗೆ ಸ್ಪರ್ಶಿಸಿದೆ. ತಂದೆಯ ಆನಾರೋಗ್ಯ, ತನ್ನ ತಲೆಗೆ ಕಾಗೆ ತಾಗಿರುವುದು ಎಲ್ಲವನ್ನು ಅಪಶಕುನದ ಸೂಚನೆ ಎಂದು ಅರಿತ ಆನಂದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾಗೆ ಸ್ಪರ್ಶಿಸಿದೆ ಎಂದು ಆತ್ಮಹತ್ಯೆ ಮಾಡಿಕೊಳ್ಳುವುದು ನಂಬಿಕೆಯೋ? ಅಥವ ಮೂಢನಂಬಿಕೆಯ ಪರಮಾವಧಿಯೋ? ಆದರೆ, ಒಂದು ಜೀವ ಮಾತ್ರ ಇದಕ್ಕೆ ಬಲಿಯಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications