ನೈಸ್ ಖೇಣಿಗೆ ಹೈಕೋರ್ಟಿನಿಂದ ನೋಟಿಸ್

ಅಶೋಕ್ ಖೇಣಿ ಅವರು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ, ಜಯ ಗಳಿಸಿದ್ದಾರೆ. ಹೀಗಾಗಿ ಅವರ ಶಾಸಕತ್ವವನ್ನು ರದ್ದುಗೊಳಿಸಿಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಜಸ್ಟ್ವೀಸ್ ಕೆನ್ ಕೇಶವನಾರಾಯಣ ಅವರು ಈ ಸಂಬಂಧ ಖೇಣಿ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಖೇಣಿ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ ಮಕ್ಕಳ ಪಕ್ಷದಿಂದ ಸ್ಪರ್ಧಿಸಿ ಜಯ ಗಳಿಸಿದ್ದರು.
ಖೇಣಿ ಸ್ಪರ್ಧೆ ಸಂವಿಧಾನ ಬಾಹಿರ ಎಂದು ಟೆಜೆ ಅಬ್ರಹಾಂ ವಾದಿಸಿದ್ದಾರೆ.
ಸಂವಿಧಾನದ ಪ್ರಕಾರ ಶಾಸಕ ಸ್ಥಾನಕ್ಕೆ ಸ್ಪರ್ಧಿಸಲು ಮತ್ತು ಆಯ್ಕೆಯಾಗ ಬಯಸುವವರು ಮತ್ತೊಂದು ದೇಶದ ಪೌರತ್ವ ಹೊಂದಿರುವಂತಿಲ್ಲ. ಇದಲ್ಲದೆ ಆಯಾ ರಾಜ್ಯದ ಯಾವುದೇ ರೀತಿಯ ಗುತ್ತಿಗೆದಾರಿಕೆ, ಪೂರೈಕೆದಾರಿಕೆ ಮತ್ತು ನೇರವಾಗಿ ಅಥವಾ ಪರೋಕ್ಷವಾಗಿ ಸರ್ಕಾರದಿಂದ ಲಾಭದ ಹುದ್ದೆಯಲ್ಲಿರುವಂತಿಲ್ಲ.
ಹೀಗಾಗಿ ಈ ಎಲ್ಲ ವಿಷಯಗಳತ್ತ ಗಂಭೀರವಾಗಿ ಚಿಂತಿಸಿದರೆ ಖೇಣಿಯ ಸ್ಪರ್ಧೆ ಸಂವಿಧಾನ ಬಾಹಿರ ಎಂದು ವಾದಿಸಿದ್ದಾರೆ.
ಅಮೆರಿಕದಲ್ಲಿ ಅಲ್ಲಿನ ಮೂಲದವರು ಅಥವಾ ಅಮೆರಿಕ ಪೌರತ್ವ ಪಡೆದವರು ಮಾತ್ರ ಗುತ್ತಿಗೆದಾರಿಕೆ ಮತ್ತು ಸರ್ಕಾರಿ ಯೋಜನೆಗಳಲ್ಲಿ ಪಾಲುದಾರಿಕೆ ಪಡೆಯಬಹುದು. ಹಾಗಾಗಿ ಅಶೋಕ ಖೇಣಿ ನೇತೃತ್ವದ ಸ್ಯಾಬ್ ಎಂಜಿನಿಯರಿಂಗ್ ಕಂಪನಿ ಅಲ್ಲಿನ ಗುತ್ತಿಗೆದಾರಿಕೆ ಮತ್ತು ಸರ್ಕಾರಿ ಯೋಜನೆಗಳಲ್ಲಿ ಸೆಪ್ಟಾ ಕಂಪನಿಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು ಅಮೆರಿಕ ಪೌರತ್ವ ಪಡೆದಿದ್ದನ್ನು ಸ್ಪಷ್ಟಪಡಿಸುತ್ತದೆ ಎಂದು ಅಬ್ರಹಾಂ ಅರ್ಜಿಯಲ್ಲಿ ತಿಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications