ಬೆಂಗಳೂರಿನ ಸ್ಥಿರಾಸ್ತಿ ದರ ಮತ್ತಷ್ಟು ಹೆಚ್ಚಳ

ಪ್ರಕಟವಾಗಿರುವ ಕರಡು ಮಾರ್ಗಸೂಚಿಯಲ್ಲಿ, ಸ್ಥಿರಾಸ್ತಿಯ ಹಾಲಿ ಮಾರುಕಟ್ಟೆ ದರ, ಸ್ಥಿರಾಸ್ತಿಯ ಸಂಪರ್ಕಕ್ಕೆ ಇರುವ ರಸ್ತೆಗಳು, ಅ ಪ್ರದೇಶದಲ್ಲಿ ನಡೆಯುವ ವಾಣಿಜ್ಯ ಚಟುವಟಿಕೆಗಳು, ಕೈಗಾರಿಕಾ ಬೆಳವಣಿಗೆ ಮುಂತಾದ ಅಶಂಗಳನ್ನು ಪರಿಗಣಿಸಲಾಗಿದೆ.
ಪರಿಷ್ಕೃತ ಮಾರ್ಗಸೂಚಿಯನ್ನು ಜುಲೈ 17ರಂದು ಪ್ರಕಟಿಸಲಾಗಿದ್ದು, ಆಕ್ಷೇಪಣೆ ಸಲ್ಲಿಸಲು ಮಾರ್ಗಸೂಚಿ ಪ್ರಕಟವಾದ ದಿನದಿಂದ ಒಟ್ಟು 15 ದಿನಗಳ ಕಾಲಾವಕಾಶ ನೀಡಲಾಗಿದೆ. ಆಕ್ಷೇಪಣೆಗಳು ಬಂದ ನಂತರ ಅದನ್ನು ಪರಿಶೀಲಿಸಿ, ಅಂತಿಮ ಮಾರ್ಗಸೂಚಿ ಪ್ರಕಟಗೊಳ್ಳಲಿದೆ.
ಮಾರ್ಗಸೂಚಿ ಏನು ಹೇಳುತ್ತದೆ : ಮಾರ್ಗಸೂಚಿಯ ಕರಡು ಪ್ರತಿಯನ್ನು ರಚಿಸುವಾಗ, ಅಪಾರ್ಟ್ಮೆಂಟ್ಗಳ ಬೆಲೆ ನಿಗದಿ ವಿಚಾರದಲ್ಲಿ ಹೊಸ ವಿಧಾನ ಅನುಸರಿಸಲಾಗಿದೆ. ಇದರ ಅನ್ವಯ ಅಪಾರ್ಟ್ಮೆಂಟ್ನ ಪ್ರತಿ ಮಹಡಿಗೂ ಒಂದೊಂದು ರೀತಿಯ ಬೆಲೆ ನಿಗದಿಪಡಿಸಲಾಗಿದೆ.
ಅಪಾರ್ಟ್ಮೆಂಟ್ಗಳು ಒದಗಿಸುವ ಸೌಲಭ್ಯವನ್ನೂ ಬೆಲೆ ನಿಗದಿ ಮಾಡುವ ವೇಳೆಗೆ ಪರಿಗಣಿಸಲಾಗಿದ್ದು, ಅಪಾರ್ಟ್ಮೆಂಟ್ಗಳಲ್ಲಿ ಐದನೆಯ ಮಹಡಿವರೆಗಿನ ಬೆಲೆಯಲ್ಲಿ ಯಾವುದೇ ಹೆಚ್ಚಳ ಮಾಡಲಾಗಿಲ್ಲ.
ಆರರಿಂದ 15ನೇ ಮಹಡಿವರೆಗೆ, ಪ್ರತಿ ಮಹಡಿಗೆ ಸ್ಥಿರಾಸ್ತಿ ಬೆಲೆ ಶೇಕಡ 0.5ರಷ್ಟು ಹೆಚ್ಚಳವಾಗಿದ್ದು, 15ನೇ ಮಹಡಿಗಿಂತ ಮೇಲಿರುವ ಸ್ಥಿರಾಸ್ತಿಯ ಮಾರ್ಗಸೂಚಿ ಬೆಲೆಯನ್ನು ಹೆಚ್ಚಿಸಿಲ್ಲ.
ಭಾರೀ ಹೆಚ್ಚಳ : ನಗರದ ಪ್ರಮುಖ ಪ್ರದೇಶಗಳಾದ ಮಹಾತ್ಮ ಗಾಂಧಿ ರಸ್ತೆ, ಜಯನಗರ, ಕೋರಮಂಗಲ, ಸದಾಶಿವನಗರ ಮುಂತಾದ ಪ್ರದೇಶಗಳ ಸ್ಥಿರಾಸ್ತಿ ಬೆಲೆಯಲ್ಲಿ ಭಾರೀ ಹೆಚ್ಚಳ ಮಾಡಲಾಗಿದೆ.
ಎಲ್ಲಿ ಎಷ್ಟು : ನಗರದ ಗಾಂಧಿ ಬಜಾರ್ ಪ್ರದೇಶದಲ್ಲಿ ನಿವೇಶನದ ಬೆಲೆ ಪ್ರತಿ ಚದರ ಅಡಿಗೆ 8,000 ರೂ.ನಿಗದಿಗೊಳಿಸಲಾಗಿದೆ. ಈ ಪ್ರದೇಶದ ಅಪಾರ್ಟ್ಮೆಂಟ್ ಬೆಲೆ ಪ್ರತಿ ಚದರ ಅಡಿಗೆ 6,890 ರೂಪಾಯಿಗೆ (ಮೊಸಾಯಿಕ್) ನಿಗದಿಪಡಿಸಲಾಗಿದೆ.
ಮಾಧವ ಪಾರ್ಕ್ ಪ್ರದೇಶದಲ್ಲಿ ನಿವೇಶನ ಬೆಲೆ ಪ್ರತಿ ಚದರ ಅಡಿಗೆ 8,000 ರೂಪಾಯಿಗೆ ಹೆಚ್ಚಿಸಲಾಗಿದೆ. ಜಯನಗರ 4 ಬ್ಲಾಕ್ನಲ್ಲಿ ನಿವೇಶನದ ಬೆಲೆ ಪ್ರತಿ ಚದರ ಅಡಿಗೆ 11,000 ರೂಪಾಯಿ ಹೆಚ್ಚಳವಾಗಲಿದೆ ಎಂದು ಕರಡಿನಲ್ಲಿ ಪ್ರಕಟಿಸಲಾಗಿದೆ.
ಕರಡು ಪ್ರತಿ ಎಲ್ಲಿ ದೊರೆಯುತ್ತದೆ : ಬೆಂಗಳೂರಿನ ಐದು ವಿಭಾಗಗಳ 42 ಉಪ ನೋಂದಣಾಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿ ಸ್ಥಿರಾಸ್ತಿಗೆ ನಿಗದಿಪಡಿಸಿರುವ ದರಗಳ ವಿವರವನ್ನು ಇಲಾಖೆಯ ವೆಬ್ ಸೈಟ್ http://www.karunadu.gov.in/karigr/ ಭೇಟಿ ನೀಡಿ ಪಡೆದುಕೊಳ್ಳಬಹುದಾಗಿದೆ.
ಸಾರ್ವಜನಿಕರು ಆಕ್ಷೇಪಣೆಗಳನ್ನು ನೋಂದಣಿ ಮಹಾಪರಿವೀಕ್ಷಕರು, ಮುದ್ರಾಂಕಗಳ ಆಯುಕ್ತರ ಕಚೇರಿ, ಕಂದಾಯ ಭವನ, 8ನೇ ಮಹಡಿ, ಕೆ.ಜಿ. ರಸ್ತೆ, ಬೆಂಗಳೂರು - 560009 ವಿಳಾಸಕ್ಕೆ ಕಳುಹಿಸಬಹುದಾಗಿದೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications