ಕಟ್ಟಡದಿಂದ ಬಿದ್ದು ಡಿವಿಎಸ್ ಭದ್ರತಾ ಸಿಬ್ಬಂದಿ ಸಾವು

ಮೃತರನ್ನು ಎಂ.ನಾಗರಾಜು (51) ಎಂದು ಗುರುತಿಸಲಾಗಿದೆ. ನಾಗರಾಜು ಚಂದ್ರಾ ಲೇಔಟ್ ಕಲ್ಯಾಣ ನಗರದಲ್ಲಿ, ಹೊಸದಾಗಿ ಮನೆ ಕಟ್ಟಿಸುತ್ತಿದ್ದರು. 2ನೇ ಮಹಡಿಯ ಮೇಲೆ ನೀರಿನ ಟ್ಯಾಂಕ್ ಇಡುವ ಜಾಗ ಪರಿಶೀಲಿಸಲು ಹೋದಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು, ಸಾವನ್ನಪ್ಪಿದ್ದಾರೆ
ಮೈಸೂರು ರಸ್ತೆಯ ಸಿರ್ಸಿ ವೃತ್ತದ ಬಳಿಯ ಪೊಲೀಸ್ ವಸತಿ ಗೃಹದಲ್ಲಿ ನಾಗರಾಜು ವಾಸಿಸುತ್ತಿದ್ದರು. ಭಾನುವಾರ ರಜೆ ಇದ್ದ ಕಾರಣ ತಮ್ಮ ಮನೆ ನಿರ್ಮಾಣದ ಕಾಮಗಾರಿ ನೋಡಲು ತೆರಳಿದ್ದರು, ಮನೆಯ ಕಾಮಗಾರಿ ಪೂರ್ಣಗೊಂಡಿದ್ದು, ಕೆಲವು ಕೆಲಸಗಳು ಮಾತ್ರ ಬಾಕಿ ಇತ್ತು, ನೀರಿನ ಟ್ಯಾಂಕ್ ಇಡುವ ಜಾಗ ನೋಡಲು ಹೋದಾಗ ದುರ್ಘಟನೆ ನಡೆದಿದೆ.
ನಾಗರಾಜು ಅವರು ಕೆಳಗೆ ಬಿದ್ದ ತಕ್ಷಣ ಕಟ್ಟಡ ನಿರ್ಮಾಣ ಮಾಡುತ್ತಿದ್ದ ಕಾರ್ಮಿಕರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ, ವೈದ್ಯರು ನಾಗರಾಜು ಆಸ್ಪತ್ರೆಗೆ ಬರುವ ಮೊದಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಸಿಎಂ ಎಸ್ಕಾರ್ಟ್ ಸಿಬ್ಬಂದಿ : ಸಿಆರ್ ಎ ಮುಖ್ಯ ಪೇದೆಯಾಗಿದ್ದ ನಾಗರಾಜು ಅವರನ್ನು ಡಿ.ವಿ.ಸದಾನಂದ ಗೌಡರು ಮುಖ್ಯಮಂತ್ರಿಯಾದ ನಂತರ ಅವರ ಭದ್ರತೆ ನೋಡಿಕೊಳ್ಳುವ ಎಸ್ಕಾರ್ಟ್ ಸಿಬ್ಬಂದಿಯಾಗಿ ನೇಮಿಸಲಾಗಿತ್ತು.
ಸದಾನಂದಗೌಡರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರವೂ ನಾಗರಾಜು ಅವರು, ಎಸ್ಕಾರ್ಟ್ ಸಿಬ್ಬಂದಿಯಾಗಿ ಸೇವೆ ಮುಂದುವರೆಸಿದ್ದರು. ನಾಗರಾಜು, ಇಬ್ಬರು ಗಂಡು ಮಕ್ಕಳು ಹಾಗೂ ಪತ್ನಿ ಗಂಗಲಕ್ಷ್ಮಮ್ಮ ಅವರನ್ನು ಅಗಲಿದ್ದಾರೆ. ಚಂದ್ರಾ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications