ಕಟ್ಟಡದಿಂದ ಬಿದ್ದು ಡಿವಿಎಸ್ ಭದ್ರತಾ ಸಿಬ್ಬಂದಿ ಸಾವು

ಮೃತರನ್ನು ಎಂ.ನಾಗರಾಜು (51) ಎಂದು ಗುರುತಿಸಲಾಗಿದೆ. ನಾಗರಾಜು ಚಂದ್ರಾ ಲೇಔಟ್ ಕಲ್ಯಾಣ ನಗರದಲ್ಲಿ, ಹೊಸದಾಗಿ ಮನೆ ಕಟ್ಟಿಸುತ್ತಿದ್ದರು. 2ನೇ ಮಹಡಿಯ ಮೇಲೆ ನೀರಿನ ಟ್ಯಾಂಕ್ ಇಡುವ ಜಾಗ ಪರಿಶೀಲಿಸಲು ಹೋದಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು, ಸಾವನ್ನಪ್ಪಿದ್ದಾರೆ
ಮೈಸೂರು ರಸ್ತೆಯ ಸಿರ್ಸಿ ವೃತ್ತದ ಬಳಿಯ ಪೊಲೀಸ್ ವಸತಿ ಗೃಹದಲ್ಲಿ ನಾಗರಾಜು ವಾಸಿಸುತ್ತಿದ್ದರು. ಭಾನುವಾರ ರಜೆ ಇದ್ದ ಕಾರಣ ತಮ್ಮ ಮನೆ ನಿರ್ಮಾಣದ ಕಾಮಗಾರಿ ನೋಡಲು ತೆರಳಿದ್ದರು, ಮನೆಯ ಕಾಮಗಾರಿ ಪೂರ್ಣಗೊಂಡಿದ್ದು, ಕೆಲವು ಕೆಲಸಗಳು ಮಾತ್ರ ಬಾಕಿ ಇತ್ತು, ನೀರಿನ ಟ್ಯಾಂಕ್ ಇಡುವ ಜಾಗ ನೋಡಲು ಹೋದಾಗ ದುರ್ಘಟನೆ ನಡೆದಿದೆ.
ನಾಗರಾಜು ಅವರು ಕೆಳಗೆ ಬಿದ್ದ ತಕ್ಷಣ ಕಟ್ಟಡ ನಿರ್ಮಾಣ ಮಾಡುತ್ತಿದ್ದ ಕಾರ್ಮಿಕರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ, ವೈದ್ಯರು ನಾಗರಾಜು ಆಸ್ಪತ್ರೆಗೆ ಬರುವ ಮೊದಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಸಿಎಂ ಎಸ್ಕಾರ್ಟ್ ಸಿಬ್ಬಂದಿ : ಸಿಆರ್ ಎ ಮುಖ್ಯ ಪೇದೆಯಾಗಿದ್ದ ನಾಗರಾಜು ಅವರನ್ನು ಡಿ.ವಿ.ಸದಾನಂದ ಗೌಡರು ಮುಖ್ಯಮಂತ್ರಿಯಾದ ನಂತರ ಅವರ ಭದ್ರತೆ ನೋಡಿಕೊಳ್ಳುವ ಎಸ್ಕಾರ್ಟ್ ಸಿಬ್ಬಂದಿಯಾಗಿ ನೇಮಿಸಲಾಗಿತ್ತು.
ಸದಾನಂದಗೌಡರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರವೂ ನಾಗರಾಜು ಅವರು, ಎಸ್ಕಾರ್ಟ್ ಸಿಬ್ಬಂದಿಯಾಗಿ ಸೇವೆ ಮುಂದುವರೆಸಿದ್ದರು. ನಾಗರಾಜು, ಇಬ್ಬರು ಗಂಡು ಮಕ್ಕಳು ಹಾಗೂ ಪತ್ನಿ ಗಂಗಲಕ್ಷ್ಮಮ್ಮ ಅವರನ್ನು ಅಗಲಿದ್ದಾರೆ. ಚಂದ್ರಾ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications