ಬೇಹುಗಾರಿಕೆ ಎಚ್ಚರಿಕೆ, ವಿ.ನಿಲ್ದಾಣದಲ್ಲಿ ಹೆಚ್ಚಿದ ಭದ್ರತೆ

ದೇಶದಲ್ಲಿ 3ನೇ ಅತ್ಯಂತ ಚಟುವಟಿಕೆಯ ವಿಮಾನ ನಿಲ್ದಾಣವಾಗಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಗಮನ ಮತ್ತು ನಿರ್ಗಮನದಲ್ಲಿ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ (CISF) ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಎಲ್ಲ ಪ್ರಯಾಣಿಕರ ಮೇಲೆ ನಿಗಾವಹಿಸಲಾಗಿದೆ ಎಂದು ಬೆಂಗಳೂರಿನ ಹೆಚ್ಚುವರಿ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರು ಸೋಮವಾರ ತಿಳಿಸಿದರು.
ದಿನಕ್ಕೆ 400 ವಿಮಾನಗಳು ಬಂದಿಳಿಯುವ ದೇವನಹಳ್ಳಿ ಬಳಿಯ ಏರ್ಪೋರ್ಟ್ ಮತ್ತು ಸುತ್ತಮುತ್ತ 200ರಿಂದ 250 ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ನಗರದಾದ್ಯಂತ ಪೊಲೀಸ್ ಗಸ್ತನ್ನು ಚುರುಕುಗೊಳಿಸಲಾಗಿದೆ ಎಂದು ಪಂತ್ ಅವರು ಮಾಧ್ಯಮದವರಿಗೆ ವಿವರಿಸಿದರು.
ವಿವಿಐಪಿಗಳಿರುವ ಪ್ರದೇಶ, ಎಲ್ಲ ಸೆಟಲೈಟ್ ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣ, ಪ್ರಮುಖ ಮಾಲ್ ಗಳು, ವಾಣಿಜ್ಯ ಸಂಕಿರ್ಣಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದ್ದು, ಯಾವುದೇ ಶಂಕಿತ ವ್ಯಕ್ತಿಯನ್ನು ವಿಚಾರಣೆಗೆ ಗುರಿಪಡಿಸಬೇಕೆಂದು ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಲ್ಲ ಸಾಮಾನುಗಳನ್ನು ಅತ್ಯಂತ ಕೂಲಂಕಷವಾಗಿ ಪರೀಕ್ಷೆಗೊಳಪಡಿಸಲಾಗುತ್ತಿದೆ. ಎಲ್ಲ ಬ್ಯಾಗುಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ. ಸಂಶಯಾಸ್ಪದ ಪ್ರಯಾಣಿಕರನ್ನು ಕೂಡ ವಿಚಾರಣೆಗೆ ಗುರಿಪಡಿಸಲಾಗುತ್ತಿದೆ. ಭದ್ರತೆಗೆ ಬೇಕಾದ ಎಲ್ಲ ಕ್ರಮಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ತೆಗೆದುಕೊಳ್ಳಲಾಗುತ್ತಿದೆ ಎಂದು ಸಿಐಎಸ್ಎಫ್ ಸಿಬ್ಬಂದಿ ತಿಳಿಸಿದರು.
ಪ್ರಯಾಣಿಕರು ಮಾತ್ರವಲ್ಲ ಕಾರ್ಗೋ ವಾಹನ, ವಿಮಾನ ನಿಲ್ದಾಣಕ್ಕೆ ಬರುವ ವಾಹನಗಳು, ಪ್ರಯಾಣಿಕರನ್ನು ನಿಲ್ದಾಣಕ್ಕೆ ಕರೆತರುವ ವಾಯುವಜ್ರ ವಿಶೇಷ ಬಸ್ಸುಗಳನ್ನು ಕೂಡ ತಪಾಸಣೆಗೆ ಗುರಿಪಡಿಸಲಾಗುತ್ತಿದೆ ಎಂದು ಪಂತ್ ಅವರು ತಿಳಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications