ಟಾಂ ಟಾಂ! ಕನ್ನಂಬಾಡಿ ಅಣೆಕಟ್ಟೆ ತುಂಬಿತು
ಶ್ರೀರಂಗಪಟ್ಟಣ, ಜುಲೈ22: ಜೀವನದಿಯಾದ ಕಾವೇರಿ ನೀರಿಗೆ ಕಟ್ಟಲಾಗಿರುವ ಕನ್ನಂಬಾಡಿ ಅಣೆಕಟ್ಟೆ ತುಂಬಿತುಳುಕುತ್ತಿದೆ! ಸೋಮವಾರ ಬೆಳಗ್ಗೆ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿದ್ದು, ಕಾವೇರಿ ತುಳುಕುವ ಮುನ್ನ ಹೆಚ್ಚುವರಿ ನೀರನ್ನು ಕ್ರಸ್ಟ್ ಗೇಟು ತೆರೆದು ಹೊರಬಿಡಲಾಗಿದೆ.
ಸರ್ ಎಂ ವಿಶ್ವೇಶ್ವರಯ್ಯ ಸಾರಥ್ಯದಲ್ಲಿ ನಿರ್ಣಾಣವಾದ ಕೃಷ್ಣ ರಾಜ ಸಾಗರ ಡ್ಯಾಂ ಗರಿಷ್ಠ ನೀರಿನ ಮಟ್ಟ 124.80 ಅಡಿಯಾಗಿದ್ದು. ಅಣೆಕಟ್ಟು ತುಂಬಿದೆ ಎಂದು KRS Dam ಮುಖ್ಯ ಇಂಜಿನಿಯರ್ ತಿಳಿಸಿದ್ದಾರೆ. (ಇದನ್ನು ಓದಿ)

ಕಳೆದೆರಡು ವರ್ಷಗಳಿಂದ ಸರಿಯಾಗಿ ಮಳೆಯಾಗದೆ ಅಣೆಕಟ್ಟೆ ಭರ್ತಿಯಾಗಿರಲೇ ಇಲ್ಲ. ಈ ಬಾರಿ ಕಾವೇರಿ ತಟದಲ್ಲಿ ಮುಂಗಾರು ಭರ್ಜರಿಯಾಗಿದ್ದು, ಇದೀಗ ಅಣೆಕಟ್ಟೆ ತುಂಬಿರುವುದು ಮಂಡ್ಯ, ಮೈಸೂರು, ಬೆಂಗಳೂರು ಭಾಗದ ಜನತೆ ಮತ್ತು ರೈತಾಪಿ ವರ್ಗ ಅತೀವ ಸಂತಸ ಮಿಂದೆದ್ದಿದ್ದಾರೆ.
ಜತೆಗೆ, ಸಿಎಂ ಸಿದ್ದರಾಮಯ್ಯನವರ ಪುಣ್ಯವಾ ಎಂಬಂತೆ ಕಾವೇರಿ ನೀರಿಗಾಗಿ ಜಯಲಲಿತಾ ಕ್ಯಾತೆ ತೆಗೆಯುವುದೂ ತಪ್ಪಿದೆ. ಇದೇ ವೇಳೆ ಅಣೆಕಟ್ಟೆ ಭಾಗದ ಜನ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆಯೂ ಅಧಿಕಾರಿಗಳು ಎಚ್ಚರಿಸಿದ್ದಾರೆ.
KRS ದಾಖಲೆ: ಪಾತಾಳ ಕಚ್ಚಿದ ಕಾವೇರಿ ನೀರು
ಜೂನ್ 13- 2013 ವರದಿ: ಈ ದಾಖಲೆ ಖಂಡಿತ ನಮಗೆ ಬೇಡ; ನಮ್ಮ ಕಾವೇರಿ ಮಾತೆಗೂ ಇದು ಶ್ರೇಯಸ್ಕರವಲ್ಲ. ಬುಧವಾರ ಬೆಳಗ್ಗೆ 6 ಗಂಟೆಯ ವೇಳೆಯಲ್ಲಿ ಕೃಷ್ಣರಾಜ ಸಾಗರ ಅಣೆಕಟ್ಟೆಯಲ್ಲಿ ನೀರಿನ ಪ್ರಮಾಣ 62.92 ಅಡಿಗೆ ಕುಸಿದಿದೆ. ಇದು ಕಳೆದ 68 ವರ್ಷಗಳಲ್ಲೇ ಕನಿಷ್ಠ ಮಟ್ಟದ ನೀರು ಶೇಖರಣೆಯಾಗಿದೆ.
1945ರಲ್ಲಿ 63.28 ಅಡಿ ನೀರಿತ್ತು. 2003ರ ಮೇ 10ರಂದು ನೀರಿನ ಪ್ರಮಾಣ 65 ಅಡಿಯಿತ್ತು. ಇನ್ನು 2005ರಲ್ಲಿ 71.54 ಅಡಿಯಿತ್ತು. ಅಂದಹಾಗೆ ಕೆಆರ್ ಎಸ್ ಅಣೆಕಟ್ಟೆಯಲ್ಲಿ ನೀರು ಸಂಗ್ರಹ ಸಾಮರ್ಥ್ಯವಿರುವುದು 124.8 ಅಡಿ.
ಕರ್ನಾಟಕದ ಮಟ್ಟಿಗೆ ಬೆಂಗಳೂರು, ಮೈಸೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಜನರಿಗೆ ನೀರು ಪೂರೈಸುವ ಕೆಆರ್ ಎಸ್ ಅಣೆಕಟ್ಟೆಯಲ್ಲಿ ಬುಧವಾರ ಬೆಳಗ್ಗೆ ಸೆಕೆಂಡಿಗೆ 227 ಚದರ ಅಡಿ ಪ್ರಮಾಣದಲ್ಲಿ ನೀರಿನ ಒಳಹರಿವು ಇತ್ತು. ಹೊರಹರಿವು 764 ಕ್ಯುಸೆಕ್ಸ್ ದಾಟಿತ್ತು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications