ಆರೋಪ ಸಾಬೀತು: ಕುಮಾರಸ್ವಾಮಿಗೆ ಕೋರ್ಟ್ ಬುಲಾವ್

ಇದರೊಂದಿಗೆ ರಾಜಕಾರಣಿಗಳಿಗೆ ಮತ್ತೆ ಲೋಕಾ ಕೋರ್ಟ್ ಭೀತಿ ಶುರುವಾಗಿದೆ. ಬಿಜೆಪಿ ಆಡಳಿತ ಇದ್ದಾಗ ವಿಪರೀತ ಎನಿಸುವಷ್ಟು ಈ ನಾಯಕರುಗಳಿಗೆ ಕೋರ್ಟ್ ಬುಲಾವ್ ಗಳು ಬರುತ್ತಿದ್ದವು. ಮೊನ್ನೆ ಶನಿವಾರವಷ್ಟೇ ಮಾಜಿ ಸಿಎಂ ಯಡಿಯೂರಪ್ಪ ಲೋಕಾ ಕೋರ್ಟಿನಲ್ಲಿ ವಿಚಾರಣೆಗೆ ಖುದ್ದು ಹಾಜರಾಗಿ, ಎದ್ದು ಬಂದಿದ್ದರು. ಇದೀಗ ಕುಮಾರಸ್ವಾಮಿ ಅಂಡ್ ಟೀಂಗೂ ಕೋರ್ಟ್ ಕಾಟ ಶುರುವಾಗಿದೆ.
ಆರೋಪ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಬುಲಾವ್:
ಏನಪ್ಪಾ ಅಂದರೆ ಥಣಿಸಂದ್ರದ ಅರ್ಕಾವತಿ ಲೇಔಟಿನಲ್ಲಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಅಧಿಕಾರ ದುರ್ಬಳಕೆ ಮಾಡಿಕೊಂಡು ಡಿನೋಟಿಫಿಕೇಷನ್ ಮಾಡಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸರಿಯಾಗಿ ಒಂದು ತಿಂಗಳಿಗೆ ಆ 22ರಂದು ಗುರುವಾರ ಖುದ್ದಾಗಿ ಹಾಜರಾಗಿ ವಿವರಣೆ ನೀಡುವಂತೆ ಎಲ್ಲಾ ಆರೋಪಿಗಗಳಿಗೆ ಲೋಕಾಯುಕ್ತ ನ್ಯಾಯಾಧೀಶರಾದ ನ್ಯಾಯಾಧೀಶ ಎನ್ ಕೆ ಸುಧೀಂದ್ರರಾವ್ ಅವರು ಆದೇಶಿಸಿದ್ದಾರೆ.
ಪ್ರಕರಣವೇನು?: 2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅರ್ಕಾವತಿ ನಿರ್ಮಾಣಕ್ಕಾಗಿ ಬಿಡಿಎ ಸ್ವಾಧೀನಪಡಿಸಿಕೊಂಡ ಒಟ್ಟು ಜಾಗದಲ್ಲಿ 3 ಎಕರೆ 8 ಗುಂಟೆ ಜಾಗವನ್ನು ಶ್ರೀರಾಮ್ ಮತ್ತು ರವಿಪ್ರಕಾಶ್ ಎಂಬುವವರ ಹೆಸರಿಗೆ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿ ಎಂ ಎಸ್ ಮಹದೇವಸ್ವಾಮಿ ಲೋಕಾಯುಕ್ತ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಮಹದೇವಸ್ವಾಮಿ ಸಲ್ಲಿಸಿದ ಅರ್ಜಿಯ ಹಿನ್ನೆಲೆಯಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯವು 2012ರ ಜನವರಿ 2ರಂದು ತನಿಖೆಗೆ ಆದೇಶ ನೀಡಿತ್ತು. ನ್ಯಾಯಾಲಯದ ಸೂಚನೆ ಮೇರೆಗೆ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು 2012ರ ಏಪ್ರಿಲ್ 17ರಂದು 52 ಪುಟಗಳ ಆರೋಪಪಟ್ಟಿ ಸಲ್ಲಿಸಿದರು. ನಂತರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿಚಾರಣೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಪ್ರಕರಣವನ್ನು ಮರುಪರಿಶೀಲನೆ ನಡೆಸುವಂತೆ ಲೋಕಾಯುಕ್ತ ನ್ಯಾಯಾಲಯಕ್ಕೆ ಸೂಚನೆ ನೀಡಿತ್ತು. ಹೈಕೋರ್ಟಿನ ಆದೇಶದ ಮೇರೆಗೆ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಕಾನೂನು ಬಾಹಿರವಾಗಿ ಡಿನೊಟೀಫಿಕೇಷನ್ ಮಾಡಿರುವುದು ಮೇಲು ನೋಟಕ್ಕೆ ಖಚಿತವಾಗಿದೆ ಎಂದು ಅಭಿಪ್ರಾಯಪಟ್ಟಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications