ಜಿಕೆಟಗರಿ ನಿವೇಶನ: ಸಿಎಂ ಸಿದ್ದರಾಮಯ್ಯ ಖಡಕ್ ನಿರ್ಧಾರ

ಏನಪ್ಪಾ ಅಂದರೆ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಿಡಿಎನಿಂದ ಯಾವುದೇ ಜಿ ಕೆಟಗರಿ ನಿವೇಶನ ಕೊಟ್ಟಿಲ್ಲ. ನ್ಯಾಯಾಲಯದ ತೀರ್ಮಾನ ಬರುವವರೆಗೆ ಕೊಡೋದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಧಾನಸಭೆಯಲ್ಲಿ ಮಂಗಳವಾರ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಶಾಸಕ ಅಪ್ಪಚ್ಚುರಂಜನ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಮೂರು ವರ್ಷಗಳ ಅವಧಿಯಲ್ಲಿ 15 ವಿಧಾನಸಭೆ ಸದಸ್ಯರು, 8 ವಿಧಾನಪರಿಷತ್ ಸದಸ್ಯರು ಮತ್ತು ಒಬ್ಬರು ಮಾಜಿ ಎಂಪಿಗೆ ಜಿ ಕೆಟಗರಿ ನಿವೇಶನ ಕೊಡಲಾಗಿದೆ. ನಾವು ಅಧಿಕಾರಕ್ಕೆ ಬಂದ ಮೇಲೆ ಯಾರಿಗೂ ಜಿ ಕೆಟಗರಿ ನಿವೇಶನ ಕೊಟ್ಟಿಲ್ಲ. ಕೊಡಬಾರದು ಎಂಬುದೂ ತಮ್ಮ ನಿರ್ಧಾರವಾಗಿದೆ ಎಂದು ಸಿಎಂ ಸಿದ್ದು ಸ್ಪಷ್ಟಡಿಸಿದರು.
ಈ ಸಂಬಂಧ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದಾಗ 2013ರಲ್ಲಿ ಹೈಕೋರ್ಟ್ ಜಿ ಕ್ಯಾಟಗರಿ ನಿವೇಶನ ಹಂಚಿಕೆಗೆ ಸಂಬಂಧಪಟ್ಟಂತೆ ನ್ಯಾಯಮೂರ್ತಿ ಪದ್ಮರಾಜ್, ರಂಗವಿಠಲ ಚಾರ್, ಪಿಬಿ ಮಹಿಷಿ ಅವರ ಸಮಿತಿಯನ್ನು ನೇಮಕ ಮಾಡಿದೆ. ಈ ಸಮಿತಿ ಆ. 26ಕ್ಕೆ ವರದಿ ನೀಡಲಿದ್ದು, ಆನಂತರ ಸರ್ಕಾರ ಈ ವಿಚಾರದಲ್ಲಿ ಜಿ ಕೆಟಗರಿ ನಿವೇಶನ ಕೊಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಸಿಎಂ ಸಿದ್ದು ವಿವರಿಸಿದ್ದಾರೆ.
1985ರಿಂದ ಬಿಜೆಪಿ ಸರ್ಕಾರದ ಆಡಳಿತ ಕೊನೆಯಾಗುವವರೆಗೆ 1930 ಜಿ ಕೆಟಗರಿ ನಿವೇಶನಗಳನ್ನು ಹಂಚಲಾಗಿದೆ. ನಾವುಗಳ್ಯಾರೂ ಜಿ ಕೆಟಗರಿ ನಿವೇಶನ ಪಡೆದು ಕೊಂಡಿಲ್ಲ. ನಿಮ್ಮ ಸರ್ಕಾರವೇ ಇತ್ತು. ನೀವೇ ಕೊಟ್ಟಿದ್ದೀರಿ ಎಂದು ಸಿಎಂ ಹೇಳಿದರು. ನನ್ನ ಪ್ರಶ್ನೆಯನ್ನು ಕೇವಲ ಮೂರು ವರ್ಷಕ್ಕೆ ಸೀಮಿತ ಮಾಡಿದ್ದಾರೆ. ಜಿ ಕೆಟಗರಿ ಕೋಟಾದಡಿ ಶಾಸಕರು ಮಾತ್ರವಲ್ಲ. ಕಾರು ಚಾಲಕರು ಕೂಡ ನಿವೇಶನ ಪಡೆದಿದ್ದಾರೆ ಎಂದು ಅಪ್ಪಚ್ಚುರಂಜನ್ ತಿಳಿಸಿದರು.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ












Click it and Unblock the Notifications