ಮಣಿಪಾಲ್ ರೇಪ್: ಕೇರಳ ಸರಕಾರದಿಂದ 3 ಲಕ್ಷ ಪರಿಹಾರ

ಬಾಧಿತ ಯುವತಿ ಮೂಲತಃ ಕೇರಳದ ತಿರುವನಂತಪುರ ನಿವಾಸಿ. ಜೂನ್ 20ರ ರಾತ್ರಿ ಆಕೆಯನ್ನು ಅಪಹರಿಸಿದ ಮೂವರು ದುಷ್ಕರ್ಮಿಗಳು ನಿರ್ಜನ ಪ್ರದೇಶದಲ್ಲಿ ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿ, ಕೆಎಂಸಿ ಕಾಲೇಜು ಬಳಿ ಆಕೆಯನ್ನು ಬಿಸಾಡಿ ಹೋಗಿದ್ದರು. ಆ ನಂತರ ಇದೇ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆದ ಬಾಧಿತ ವಿದ್ಯಾರ್ಥಿನಿ, ಮೂರು ವಾರಗಳ ಬಳಿಕ ಡಿಸ್ ಚಾರ್ಜ್ ಆಗಿ, ತವರು ರಾಜ್ಯಕ್ಕೆ ವಾಪಸಾಗಿದ್ದರು.
ಕೇಂದ್ರ ಸರಕಾರದ ನಿರ್ಭಯಾ ನಿಧಿಯಡಿ ಬಾಧಿತ ವಿದ್ಯಾರ್ಥಿನಿಗೆ 3 ಲಕ್ಷ ರೂ ಪರಿಹಾರ ನೀಡುವುದಾಗಿ ಕೇರಳ ಸರಕಾರ ಮಂಗಳವಾರ ಘೋಷಿಸಿದೆ. ತನ್ನ ಮೇಲೆ ನಡೆದ ಪೈಶಾಚಿಕ ಕ್ರೂರತೆಯನ್ನು ಆಕೆ ಧೈರ್ಯವಾಗಿ ಮೆಟ್ಟಿ ನಿಂತಿದ್ದಾಳೆ. ದುರಂತವನ್ನು ಎದುರಿಸುವಲ್ಲಿ ಆಕೆ ನಿಜಕ್ಕೂ ಧೈರ್ಯ ಪ್ರದರ್ಶಿಸಿದ್ದಾಳೆ ಎಂದು ಕೇರಳ ಸರಕಾರ ಹೇಳಿದೆ.
ಕೇರಳದಲ್ಲಿ ನಿರ್ಭಯಾ ನಿಧಿ ಯೋಜನೆಯ ಸಲಹೆಗಾರ್ತಿಯಾಗಿರುವ ಸುನೀತಾ ಕೃಷ್ಣನ್ ಅವರು ಮಣಿಪಾಲ್ ರೇಪ್ ಬಾಧಿತ ವಿದ್ಯಾರ್ಥಿನಿಗೆ ಪರಿಹಾರ ಘೋಷಿಸುವಂತೆ ಕೇರಳ ಸರಕಾರಕ್ಕೆ ಸೂಚಿಸಿದ್ದರು. ಸುನೀತಾ ಅವರ ಸಲಹೆಯ ಮೇರೆಗೆ ರಾಜ್ಯ ಸರಕಾರವು ಬಾಧಿತ ವಿದ್ಯಾರ್ಥಿನಿಯ ಧೈರ್ಯ ಮೆಚ್ಚಿ, ಆಕೆಗೆ ಪರಿಹಾರ ನೀಡಲು ಮುಂದಾಗಿದೆ.
ಘಟನೆ ನಡೆದ ಒಂದೇ ವಾರದಲ್ಲಿ ಮಣಿಪಾಲ ಪೊಲೀಸರು ಜೂನ್ 27ರಂದು ಮೂವರೂ ಆರೋಪಿಗಳಾದ ಯೋಗೀಶ್, ಹರಿಪ್ರಸಾದ್ ಮತ್ತು ಆನಂದನನ್ನು ಬಂಧಿಸಿದ್ದರು. ತದನಂತರ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ ಆರೋಪದ ಮೇಲೆ ಆರೋಪಿಗಳ ಇಬ್ಬರು ಸಂಬಂಧಿಗಳನ್ನೂ ಪೊಲೀಸರು ಬಂಧಿಸಿದ್ದರು.
ಪ್ರಸ್ತುತ 3 ಪ್ರಮುಖ ಆರೋಪಿಗಳು ಶಿವಮೊಗ್ಗ ಜೈಲಿನಲ್ಲಿ ಜುಲೈ 29ರವರೆಗೂ ನ್ಯಾಯಾಂಗ ಬಂಧನಲ್ಲಿದ್ದರೆ ಯೋಗೀಶ ಮತ್ತು ಹರಪ್ರಸಾದನ ಸೋದರರಿಬ್ಬರೂ ಹಿರಿಯಡ್ಕ ಜೈಲಿನಲ್ಲಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications