ಮಣಿಪಾಲ್ ವಿದ್ಯಾರ್ಥಿನಿ ಅಸಹಕಾರ, ಆರೋಪಿಗಳು ಬಚಾವ್?
ಉಡುಪಿ, ಜುಲೈ24: ತನ್ನ ನೆಲದಲ್ಲಿ ಕಳೆದ ತಿಂಗಳು ಮೂವರು ಕಾಮುಕರಿಂದ ಅಮಾನುಷ ರೀತಿಯಲ್ಲಿ ಅತ್ಯಾಚಾರಕ್ಕೀಡಾದ ಕೆಎಂಸಿ ವೈದ್ಯಕೀಯ ವಿದ್ಯಾರ್ಥಿನಿ ಪ್ರಕರಣದಲ್ಲಿ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಿ, ಬಾಧಿತಗಳಿಗೆ ಕೊಂಚ ಮಟ್ಟಿಗೆ ಸಮಾಧಾನ ತರುವ ಸ್ಥಳೀಯ ಪೊಲೀಸರ ಪ್ರಯತ್ನಕ್ಕೆ ಭಾರಿ ತೊಡಕುಂಟಾಗಿದೆ.
ಮೂಲತಃ ಕೇರಳದ ತಿರುವನಂತಪುರ ನಿವಾಸಿಯಾದ ಬಾಧಿತ ಯುವತಿ 'ನೀವೂ ಬೇಡ, ನಿಮ್ಮ ಊರೂ ಬೇಡ' ಎಂದು ಶಿಕ್ಷಣಕ್ಕೂ ತಿಲಾಂಜಲಿಯಿಟ್ಟು ತವರು ತಲುಪಿಕೊಂಡಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಹಾಗೆ ನೋಡಿದರೆ ಅನೇಕ ಅಡಚಣೆಗಳ ಮಧ್ಯೆಯೂ ಖಡಕ್ಕಾಗಿ ಕಾರ್ಯನಿರ್ವಹಿಸಿ ಸ್ಥಳೀಯ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ, ಜೈಲಿಗಟ್ಟಿದ್ದಾರೆ. ಆದರೆ...
ಪ್ರಕರಣ ನಡೆದು ಒಂದು ತಿಂಗಳಾದರೂ/ ಆರೋಪಿಗಳು ತಮ್ಮ ಹಿಡಿತದಲ್ಲೇ ಇದ್ದರೂ ಮಣಿಪಾಲ ಪೊಲೀಸರಿಗೆ ಅವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ (ಚಾರ್ಜ್ಶೀಟ್) ಸಲ್ಲಿಸುವುದಕ್ಕೆ ಇನ್ನೂ ಸಾಧ್ಯವಾಗುತ್ತಿಲ್ಲ. ಆರೋಪಿಗಳ ವಿರುದ್ಧ ಸಂಶಯಕ್ಕೆ ಎಡೆಯಿಲ್ಲದಂತೆ ನ್ಯಾಯಾಲಯದಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಲು ಪೊಲೀಸರೇನೋ ಸಿದ್ಧವಾಗಿದ್ದಾರೆ, ಆದರೆ...

ಗುರುತು ಪತ್ತೆ ಪರೇಡ್ ಇನ್ನೂ ನಡೆದಿಲ್ಲ:
ಅತ್ಯಾಚಾರದ ಆರೋಪಿಗಳು ಇವರೇ ಎಂದು ತಿಳಿದಿದ್ದರೂ (ಸ್ವತಃ ಅವರೂ ಒಪ್ಪಿಕೊಂಡಂತಿದೆ), ಅದನ್ನು ಜಾರ್ಚ್ಶೀಟ್ನಲ್ಲಿ ದಾಖಲಿಸುವುದಕ್ಕೆ ಪಕ್ಕಾ ಸಾಕ್ಷ್ಯಾಧಾರಗಳು ಬೇಕಾಗುತ್ತವೆ. ಕಾನೂನು ಪ್ರಕ್ರಿಯೆಗಳಿಗೆ ಅನುಸಾರವಾಗಿ, ಅತ್ಯಾಚಾರಕ್ಕೊಳಗಾದ ಯುವತಿ ಆರೋಪಿಗಳನ್ನು ನೋಡಿ ತನ್ನ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳು ಇವರೇ ಎಂದು ಗುರುತಿಸಬೇಕಾಗುತ್ತದೆ. ಆದರೆ, ಈ ಪರೇಡ್ನಲ್ಲಿ ಭಾಗವಹಿಸುವುದಕ್ಕೆ ಅತ್ಯಾಚಾರಕ್ಕೊಳಗಾದ ವೈದ್ಯ ವಿದ್ಯಾರ್ಥಿನಿ ನಿರಾಕರಿಸಿದ್ದಾಳೆ. ಆದ್ದರಿಂದ ಕಾನೂನಿನ ದೃಷ್ಟಿಯಲ್ಲಿ 'ಇವರೇ ಅತ್ಯಾಚಾರ ನಡೆಸಿದ್ದು' ಎಂದು ಆರೋಪಿಗಳನ್ನು ಜಾರ್ಚ್ಶೀಟ್ನಲ್ಲಿ ದಾಖಲಿಸುವುದಕ್ಕೆ ಪೊಲೀಸರಿಗೆ ತೊಡಕುಂಟಾಗುತ್ತಿದೆ.

ಅತ್ಯಂತ ಅಪರೂಪದ ಪ್ರಕರಣವಾಗಿ ಬದಲು?
ಅತ್ಯಾಚಾರಕ್ಕೊಳಗಾದ ಯುವತಿ ಪೊಲೀಸರಿಗೆ ಸಹಕರಿಸುವುದಕ್ಕೆ ನಿರಾಕರಿಸಿರುವುದರಿಂದ, ಪೊಲೀಸರು ಆರೋಪಿಗಳನ್ನು ವೈಜ್ಞಾನಿಕವಾಗಿ ಐಡೆಂಟಿಫಿಕೇಶನಿಗೆ (ಗುರುತಿಸುವ ಪ್ರಕ್ರಿಯೆ) ಒಳಪಡಿಸಬೇಕಾಗುತ್ತದೆ. ಇದರೊಂದಿಗೆ ಇದು ಅತ್ಯಂತ ಅಪರೂಪದ ಪ್ರಕರಣವಾಗಿ ಬದಲಾಗುತ್ತಿದೆ.

ವೈಜ್ಞಾನಿಕವಾಗಿ ಐಡೆಂಟಿಫಿಕೇಶನ್
ಅಂದರೆ, ಅತ್ಯಾಚಾರ ನಡೆಸಿದಾಗ ಯುವತಿ ಮೈಮೇಲೆ ಉಳಿದಿದ್ದ ಅತ್ಯಾಚಾರಿಗಳ ವೀರ್ಯ, ಕೂದಲು, ಎಂಜಲು, ರಕ್ತ, ಯುವತಿ ಮತ್ತು ಆರೋಪಿಗಳ ಒಳಉಡುಪು, ಬಟ್ಟೆ ಇತ್ಯಾದಿಗಳನ್ನು ಸಂಗ್ರಹಿಸಿ, ಬೆಂಗಳೂರಿನಲ್ಲಿರುವ ಸರ್ಕಾರಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಫೊರೆನ್ಸಿಕ್ ಸೈನ್ಸ್ ಲ್ಯಾಬ್) ಕಳುಹಿಸಲಾಗಿದೆ. ಜತೆಗೆ, ನ್ಯಾಯಾಲಯದ ಒಪ್ಪಿಗೆ ಮೇರೆಗೆ ಆರೋಪಿಗಳ ರಕ್ತದ ಮಾದರಿಗಳನ್ನು ಸಂಗ್ರಹಿಸಿ ಅದನ್ನೂ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಸಲ್ಲಿಸಲಾಗಿದೆ.

ಎಸ್ಪಿ ಬೋರಲಿಂಗಯ್ಯ ಉಲ್ಲೇಖಿಸಿ 'ಕನ್ನಡ ಪ್ರಭ' ವರದಿ
ಈ ಎರಡೂ ಪರೀಕ್ಷೆಗಳ ವರದಿಗಳು ಒಂದೇ ಆಗಿದ್ದಲ್ಲಿ, ಪೊಲೀಸರು ಬಂಧಿಸಿದ ಆರೋಪಿಗಳೇ ಅತ್ಯಾಚಾರ ನಡೆಸಿದ್ದು ಎಂದು ಗುರುತಿಸಿದಂತಾಗುತ್ತದೆ. ಮಾತ್ರವಲ್ಲ, ಮುಂದೆ ನ್ಯಾಯಾಲಯದಲ್ಲಿ ಆತ್ಯಾಚಾರದ ಆರೋಪ ಸಾಬೀತು ಮಾಡುವಲ್ಲಿಯೂ ಈ ವರದಿಗಳ ಮಹತ್ತರ ಸಾಕ್ಷಿಗಳಾಗುತ್ತವೆ. ಇದಾದ ನಂತರ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಲಿದ್ದಾರೆ ಎಂದು ಉಡುಪಿ ಎಸ್ಪಿ ಡಾ. ಬೋರಲಿಂಗಯ್ಯ ಅವರನ್ನು ಉಲ್ಲೇಖಿಸಿ 'ಕನ್ನಡ ಪ್ರಭ' ವರದಿ ಮಾಡಿದೆ.

ಜುಲೈ ಕೊನೆಗೆ ವರದಿ?:
ಆರೋಪಿಗಳ ರಕ್ತದ ಮಾದರಿಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ಈಗಾಗಲೇ 2 ವಾರ ಕಳೆದಿವೆ. ಈ ತಿಂಗಳ ಕೊನೆಗೆ ವರದಿ ಬರುವ ನಿರೀಕ್ಷೆ ಇದೆ. ನಂತರ ವಾರದೊಳಗೆ ಚಾರ್ಜ್ಶೀಟ್ ಸಲ್ಲಿಸುತ್ತೇವೆ ಎಂಬ ವಿಶ್ವಾಸವನ್ನು ಎಸ್ಪಿ ವ್ಯಕ್ತಪಡಿಸಿದ್ದಾರೆ. ಜು 29ಕ್ಕೆ ಆರೋಪಿಗಳ ನ್ಯಾಯಾಂಗ ಬಂಧನ ಮುಗಿಯಲಿದೆ. ಅಂದು ಆರೋಪಿಗಳನ್ನು ಪೊಲೀಸರು ಮತ್ತೊಮ್ಮೆ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications