ಡಾ.ರಾಜ್ ನಂತರ ಯಾರು?ಹೈಕೋರ್ಟ್ ಕೆಂಡಾಮಂಡಲ
ಬೆಂಗಳೂರು, ಜು 24: ಡಾ. ರಾಜಕುಮಾರ್ ಚಿತ್ರವನ್ನು ಜನ ಮುಗಿಬಿದ್ದು ನೋಡುತ್ತಿದ್ದರು. ಅವರ ಚಿತ್ರದಲ್ಲಿ ಸಮಾಜಕ್ಕೆ ಮತ್ತು ನಮ್ಮ ಸಂಸ್ಕೃತಿಗೆ ಉತ್ತಮ ಸಂದೇಶವಿರುತ್ತಿತ್ತು. ಈಗಿನ ಕನ್ನಡ ಚಿತ್ರಗಳ ಗುಣಮಟ್ಟ ತೀರಾ ಕಳಪೆ ಮಟ್ಟದ್ದು ಎಂದು ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ.
ಈಗಿನ ಚಿತ್ರೋದ್ಯಮ ಬರೀ ಲಾಭ, ನಷ್ಟದ ಚಿಂತನೆಯಲ್ಲಿ ಮುಳುಗಿದೆ. ದಿನಕ್ಕೊಬ್ಬರು ಹೀರೋಗಳು ಹುಟ್ಟುತ್ತಿದ್ದಾರೆ. ರಾಜ್ ನಂತರ ವಿಷ್ಣುವರ್ಧನ್ ಉತ್ತಮ ಚಿತ್ರಗಳನ್ನು ನೀಡಿದ್ದಾರೆ. ಇವರಿಬ್ಬರ ನಂತರ ಉತ್ತಮ ಸಾಮಾಜಿಕ ಕಳಕಳಿಯ ಚಿತ್ರಗಳು ಅಂತ್ಯ ಕಂಡಿವೆ ಎಂದು ನ್ಯಾಯಮೂರ್ತಿ ರಾಮಮೋಹನ ರೆಡ್ಡಿ ಅಭಿಪ್ರಾಯ ಪಟ್ಟಿದ್ದಾರೆ.
ಬ್ಲಾಕ್ ಬಸ್ಟರ್ ಚಿತ್ರ ಮುಂಗಾರು ಮಳೆ ಚಿತ್ರವನ್ನು ಉಲ್ಲೇಖಿಸಿ ಮಾತನಾಡಿದ ನ್ಯಾಯಮೂರ್ತಿಗಳು, ಆ ಚಿತ್ರದಲ್ಲಿ ಸಮಾಜಕ್ಕೆ ಏನು ಸಂದೇಶ ದೊರಕಿತು? ಬರೀ ಮನೋರಂಜನೆ ಬಿಟ್ಟರೆ ಆ ಚಿತ್ರದಲ್ಲಿ ಬೇರೇನಿತ್ತು?

ಮುನ್ನಾಭಾಯಿ ಎಂಬಿಬಿಎಸ್ ಹಿಂದಿ ಚಿತ್ರದಲ್ಲಿ ಪರೀಕ್ಷೆಯಲ್ಲಿ ನಕಲು ಮಾಡುವುದು ಹೇಗೆಂದು ತೋರಿಸಲಾಯಿತು. ಅದು ಕನ್ನಡ ಸಹಿತ ಇತರ ಭಾಷೆಗಳಲ್ಲೂ ರಿಮೇಕ್ ಆಯಿತು. ಎತ್ತ ಸಾಗುತಿದೆ ನಮ್ಮ ಚಿತ್ರರಂಗ ಎಂದು ನ್ಯಾ. ರಾಮಮೋಹನ ರೆಡ್ಡಿ ವಿಷಾದ ವ್ಯಕ್ತ ಪಡಿಸಿದ್ದಾರೆ.
ರಾಜ್ಯ ಚಲನಚಿತ್ರ ಆಯ್ಕೆ ಪ್ರಕ್ರಿಯೆಯಲ್ಲಿ ಲೋಪ ದೋಷವಿರುವುದು ಎದ್ದು ಕಾಣುತ್ತಿದೆ. ಇದರಲ್ಲಿ ಸಚಿವರೂ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ, ಇದನ್ನು ಸಿಬಿಐ ತನಿಖೆಗೆ ಒಪ್ಪಿಸುವುದೇ ಸೂಕ್ತ ಎಂದು ನ್ಯಾ. ರಾಮಮೋಹನ ರೆಡ್ಡಿವಿರುವ ಏಕ ಸದಸ್ಯ ಪೀಠ ಅಭಿಪ್ರಾಯ ಪಟ್ಟಿದೆ.
ಚುನಾವಣೆಯಲ್ಲಿ ಆಯ್ಕೆಯಾಗುವ ರಾಜಕೀಯ ಮುಖಂಡರ ಕೆಲಸ ಜನಸೇವೆ ಮಾಡುವುದು. ಚಲನಚಿತ್ರಗಳ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯಲ್ಲಿ ಮೂಗು ತೂರಿಸುವುದಲ್ಲ. ಈ ಅವ್ಯವಹಾರದ ಬಗ್ಗೆ ಸತ್ಯಾಂಶ ಹೊರಬೀಳ ಬೇಕಾದರೆ ಸಿಬಿಐ ತನಿಖೆಯೇ ಸೂಕ್ತ. ಸದ್ಯದಲ್ಲೇ ಪೀಠ ಸೂಕ್ತ ಆದೇಶ ಹೊರಡಲಿಸಲಿದೆ ಎಂದು ನ್ಯಾ.ರಾಮಮೋಹನ ರೆಡ್ಡಿ ಹೇಳಿದ್ದಾರೆ.
ಕೋರ್ಟ್ ಕೆಂಗಣ್ಣಿಗೆ ಗುರಿಯಾಗಿ 2010-11ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪಟ್ಟಿಯನ್ನು ರಾಜ್ಯ ವಾರ್ತಾ ಇಲಾಖೆ ಹಿಂದಕ್ಕೆ ಪಡೆದಿದ್ದನ್ನು ಇಲ್ಲಿ ನಾವು ಸ್ಮರಿಸಿ ಕೊಳ್ಳಬಹುದು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications