ಮುಜರಾಯಿ ವ್ಯಾಪ್ತಿಗೆ ಮತ್ತೊಂದು ಪುರಾತನ ದೇವಾಲಯ
ಬೆಂಗಳೂರು, ಜು 25: ರಾಜ್ಯದ ಮತ್ತೊಂದು ಪುರಾಣ ಪ್ರಸಿದ್ದ ದೇವಾಲಯ ಮುಜರಾಯಿ ವ್ಯಾಪ್ತಿಗೆ ಒಳಪಟ್ಟಿದೆ. ದೇವಾಲಯವನ್ನು ತನ್ನ ವಶಕ್ಕೆ ತೆಗೆದುಕೊಂಡಿದ್ದ ರಾಜ್ಯ ಸರಕಾರದ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ನಿಮಿಷಾಂಬ ದೇವಾಲಯ ಮುಜರಾಯಿ ವ್ಯಾಪ್ತಿಗೆ ಒಳಪಟ್ಟ ಮತ್ತೊಂದು ದೇವಾಲಯವಾಗಿದೆ.
ಕಾವೇರಿ ನದಿ ತಟದಲ್ಲಿರುವ ಸುಮಾರು 400 ವರ್ಷಗಳ ಇತಿಹಾಸವಿರುವ ಈ ದೇವಾಲಯದ ಆಡಳಿತ ಮಂಡಳಿಯ ಟ್ರಸ್ಟಿಗಳು ನಡೆಸಿದ ಹಣಕಾಸು ದುರುಪಯೋಗದಿಂದಾಗಿ ಸರಕಾರ ದೇವಾಲಯವನ್ನು ಮುಜರಾಯಿ ವ್ಯಾಪ್ತಿಗೆ ತಂದಿತ್ತು.

ದೇವಾಲಯದ ಟ್ರಸ್ಟಿಗಳು ಹಣ ಮತ್ತು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದರಿಂದ ಕಂದಾಯ ಇಲಾಖೆ 30.04.2003ರಂದು ಧಾರ್ಮಿಕ ಮತ್ತು ದತ್ತಿ ಕಾಯಿದೆಯನ್ವಯ ದೇವಾಲಯವನ್ನು ಮುಜರಾಯಿ ವ್ಯಾಪ್ತಿಗೆ ತಂದಿತ್ತು.
ಇದನ್ನು ಪ್ರಶ್ನಿಸಿ ಟ್ರಸ್ಟ್ ಸದಸ್ಯರು ಹೈಕೋರ್ಟಿನಲ್ಲಿ ದಾವೆ ಹೂಡಿದ್ದರು ಮತ್ತು ಏಕ ಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಮತ್ತೆ ಟ್ರಸ್ಟ್ ಸದಸ್ಯರು ಮೇಲ್ಮನವಿ ಸಲ್ಲಿಸಿದ್ದರು. ಈಗ ಮತ್ತೆ ಘನ ನ್ಯಾಯಾಲಯ ಅವರ ಅರ್ಜಿಯನ್ನು ತಿರಸ್ಕರಿಸಿದೆ.
ದೇವಾಲಯದ ನಿರ್ವಹಣೆಗೆ ಸರಕಾರ ಶೀಘ್ರದಲ್ಲೇ ಸಮಿತಿ ರಚಿಸಿ, ಆಡಳಿತ ಅಧಿಕಾರಿ ನೇಮಿಸಿ ದೇವಾಲಯದ ಅಭಿವೃದ್ದಿಗೆ ಸೂಕ್ತ ಕ್ರಮ ಕೈಗೊಳ್ಳ ಬೇಕೆಂದು ನ್ಯಾಯಲಯ ಸರಕಾರಕ್ಕೆ ಆದೇಶ ನೀಡಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications