ಸ್ಪಾಟ್ ಫಿಕ್ಸಿಂಗ್ : ಕುಂದ್ರಾ, ಮೇಯಪ್ಪನ್ ಗೆ ಕ್ಲೀನ್ ಚಿಟ್

ರಾಜ್ ಕುಂದ್ರಾ ಜೊತೆಗೆ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಬಿಸಿಸಿಐ ಅಧ್ಯಕ್ಷ ಎನ್.ಶ್ರೀನಿವಾಸನ್ ರ ಅಳಿಯ ಗುರುನಾಥ್ ಮೇಯಪ್ಪನ್ ಗೂ ಕ್ಲೀನ್ ಚಿಟ್ ಸಿಕ್ಕಿದೆ. ಮೇಯಪ್ಪನ್ ಮೇಲಿನ ಆರೋಪದ ಬಗ್ಗೆ ಎರಡು ಸದಸ್ಯರ ತಂಡ ತನಿಖೆ ನಡೆಸಿದ್ದು, ಅದರಲ್ಲಿ ಮೇಯಪ್ಪನ್ ಬೆಟ್ಟಿಂಗ್ ನಡೆಸಿರುವುದರ ಬಗ್ಗೆ ಸಾಕ್ಷ್ಯಾಧಾರಗಳು ಲಭಿಸಿವೆ ಎನ್ನಲಾಗಿತ್ತು. ಆದರೆ, ಬಿಸಿಸಿಐ ಸ್ವತಂತ್ರ ವರದಿಯಲ್ಲಿ ಮೇಯಪ್ಪನ್ ಗೆ ಕ್ಲೀನ್ ಚಿಟ್ ಸಿಕ್ಕಿದೆ.
ಅಳಿಯ ಮೇಯಪ್ಪನ್ ಗೆ ಕ್ಲೀನ್ ಚಿಟ್ ಲಭಿಸಿರುವ ಕಾರಣ ಬಿಸಿಸಿಐ ಅಧ್ಯಕ್ಷ ಎನ್.ಶ್ರೀನಿವಾಸನ್ ಮತ್ತೊಮ್ಮೆ ಅಧಿಕಾರಕ್ಕೇರುವ ಎಲ್ಲ ಸಾಧ್ಯತೆಗಳು ಕಂಡು ಬಂದಿದೆ. ಆಗಸ್ಟ್ ಮೊದಲ ವಾರ ಈ ಬಗ್ಗೆ ಬಿಸಿಸಿಐ ತೀರ್ಮಾನ ಪ್ರಕಟಿಸಲಿದೆ ಎಂದು ಹಂಗಾಮಿ ಅಧ್ಯಕ್ಷ ಜಗಮೋಹನ್ ದಾಲ್ಮ್ತಿಯಾ ಹೇಳಿದ್ದಾರೆ.
ರಾಜ್ ಕುಂದ್ರಾ, ರಾಜಸ್ತಾನ್ ರಾಯಲ್ಸ್ ಮತ್ತು ಇಂಡಿಯಾ ಸಿಮೆಂಟ್ಸ್ ಯಾವುದರ ವಿರುದ್ಧವೂ ಯಾವುದೇ ಸಾಕ್ಷ್ಯಾಧಾರಗಳು ಸಿಗದೇ ಇರುವ ಕಾರಣ ಕುಂದ್ರಾ ಸೇರಿ ಇತರರಿಗೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ನಿರಂಜನ್ ಷಾ ಹೇಳಿದ್ದಾರೆ.
ಬಿಸಿಸಿಐ ಕೈಗೊಂಡಿರುವ ಈ ಮಹತ್ವದ ನಿರ್ಧಾರವನ್ನು ಐಪಿಎಲ್ ಗವರ್ನಿಂಗ್ ಕೌನ್ಸಿಲ್ ಗೆ ಕಳುಹಿಸಿದ್ದು, ಈ ಬಗ್ಗೆ ಆಗಸ್ಟ್ 2ರಂದು ಅಂತಿಮ ನಿರ್ಧಾರ ಹೊರಬೀಳಲಿದೆ. ಬಹುಶಃ ಎನ್ ಶ್ರೀನಿವಾಸನ್ ಮರು ನೇಮಕಾತಿ ಬಗ್ಗೆ ಕೂಡಾ ಅಂದೇ ತೀರ್ಮಾನ ಹೊರಬೀಳಲಿದೆ.
ಬೆಟ್ಟಿಂಗ್, ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಬಂಧನವನ್ನು ದೆಹಲಿ ಪೊಲೀಸರು ತಳ್ಳಿ ಹಾಕಿದ್ದರು, ಬ್ರಿಟಿಷ್ ನಾಗರೀಕ ರಾಜ್ ಕುಂದ್ರಾ ಬಂಧನ ಕೂಡಾ ಅಷ್ಟು ಸುಲಭವಲ್ಲ ಎನ್ನಲಾಗಿತ್ತು. ಆದರೆ, ಪೊಲೀಸರಿಗೂ ಮುಂಚಿತವಾಗಿ ಜಗಮೋಹನ್ ದಾಲ್ಮಿಯಾ ನೇತೃತ್ವ ಬಿಸಿಸಿಐ ಅಧಿಕಾರಿಗಳು ರಾಜ್ ಕುಂದ್ರಾ ಅವರನ್ನು ಅಮಾನತುಗೊಳಿಸಿದ್ದರು.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications