ಉಗುಳಿದ್ರೆ ಜೈಲು ವಾಟಾಳ್ ವ್ಯಂಗ್ಯ!

ಬೆಂಗಳೂರಿನಲ್ಲಿ ಪ್ರತಿಕಾಗೋಷ್ಠಿ ನಡೆಸಿದ ವಾಟಾಳ್ ನಾಗರಾಜ್, ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರ ಮೊದಲು ಶೌಚಾಲಯ ನಿರ್ಮಿಸಿ ನಂತರ ಕಾಯ್ದೆ ಜಾರಿಗೆ ತರಬೇಕು ಎಂದು ಆಗ್ರಹಿಸಿದರು. ಶೌಚಾಲಯವಿಲ್ಲದಿದ್ದರೆ ಎಲ್ಲಿ ಮಲ, ಮೂತ್ರ ವಿಸರ್ಜಿಸಬೇಕು ಎಂದು ವಾಟಾಳ್ ಸರ್ಕಾರವನ್ನು ಪ್ರಶ್ನಿಸಿದರು.
ಸಾರ್ವಜನಿಕರು ಕೆಮ್ಮಿದರೆ, ಉಗುಳಿದರೆ ದಂಡ ಹಾಕಿ ಜೈಲಿಗೆ ಕಳುಹಿಸುವ ಸರ್ಕಾರ, ಇದಕ್ಕಾಗಿ ಎಷ್ಟು ಜೈಲುಗಳನ್ನು ಕಟ್ಟುತ್ತದೆ? ಎಂದು ಸರ್ಕಾರವ ವಿರುದ್ಧ ವಾಟಾಳ್ ಗುಡುಗಿದ್ದಾರೆ. ಸರ್ಕಾರ ಮೊದಲು ಸಾರ್ವಜನಿಕ ಸ್ಥಳಗಳಲ್ಲಿ ಶೌಚಾಲಯ ನಿರ್ಮಿಸಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಶೌಚಾಲಯ ನಿರ್ಮಿಸುವಂತೆ ಕಳೆದ 15 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇನೆ. ಇದನ್ನು ಗಮನಿಸಿದ ಸರ್ಕಾರ ಅವೈಜ್ಞಾನಿಕ ಕಾಯ್ದೆ ಜಾರಿಗೆ ತರಲು ಹೊರಟಿದೆ ಎಂದು ವಾಟಾಳ್ ದೂರಿದ್ದಾರೆ. (ಎಲ್ಲೆಂದರಲ್ಲಿ ಕಸ ಹಾಕಿದರೆ ದಂಡ ಹಾಕ್ತಾರೆ)
ಬಿಬಿಎಂಪಿ ಏನು ಮಾಡುತ್ತದೆ : ಒಣ ಮತ್ತು ಹಸಿ ಕಸವನ್ನು ಸಾರ್ವಜನಿಕರೇ ಪ್ರತ್ಯೇಕಿಸಿ ಕೊಡುವುದಾದದರೆ ಬಿಬಿಎಂಪಿ ಏನು ಕೆಲಸ ಮಾಡುತ್ತದೆ. ಕಸ ವಿಂಗಡನೆ ಮಾಡಿಕೊಟ್ಟರು ಪೌರ ಕಾರ್ಮಿಕರು ಅದನ್ನು ಮತ್ತೆ ಒಟ್ಟಾಗಿ ತೆಗೆದುಕೊಂಡು ಹೋಗುತ್ತಾರೆ ಎಂದು ವಾಟಾಳ್ ಆರೋಪಿಸಿದ್ದಾರೆ.
ಕರ್ನಾಟಕ ಪೌರ ನಿಗಮಗಳ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲುರು ಸಹಿ ಹಾಕಬಾರದು ಎಂದು ಒತ್ತಾಯಿಸಿದ ವಾಟಾಳ್ ನಾಗರಾಜ್, ರಾಜ್ಯದ ಬುದ್ಧಿ ಜೀವಿಗಳು, ಸಾರ್ವಜನಿಕರು ಕಾಯ್ದೆಯನ್ನು ವಿರೋಧಿಸಬೇಕೆಂದು ವಾಟಾಳ್ ಕರೆ ನೀಡಿದರು.
ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಶೌಚಾಲಯ ನಿರ್ಮಿಸಿ ನಂತರ ಕಾಯ್ದೆ ಜಾರಿಗೆ ತರಬೇಕು. ಇಲ್ಲವಾದಲ್ಲಿ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ.
-
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ











Click it and Unblock the Notifications