ನಿಡ್ಡೋಡಿ ಸ್ಥಾವರ ವಿರುದ್ಧ ಉಪವಾಸ ಸತ್ಯಾಗ್ರಹ
ಉಡುಪಿ, ಜು.29: ನಿಡ್ಡೋಡಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಉಷ್ಣ ವಿದ್ಯುತ್ ಸ್ಥಾವರ ಮುಂತಾದ ಬೃಹತ್ ಯೋಜನೆಗಳು ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಕಾಲಿಡದಂತೆ ಮಾಡಬೇಕು. ಸರ್ಕಾರ ಇಂಥ ಸಂಸ್ಥೆಗಳಿಗೆ ಪರವಾನಿಗೆ ನೀಡಬಾರದು ಎಂದು ಸಾಂದೀಪನಿ ಸಾಧಾನಾಶ್ರಮದ ಈಶ ವಿಠ್ಠಲದಾಸ ಹೇಳಿದ್ದಾರೆ.
ನಿಡ್ಡೋಡಿಯಲ್ಲಿ ಪ್ರಸ್ತಾವಿತ ಗೊಂಡಿರುವ 4,000 ಮೆಗಾವ್ಯಾಟ್ ನ ಉಷ್ಣ ವಿದ್ಯುತ್ ಸ್ಥಾವರದ ವಿರುದ್ಧ ನಿಡ್ಡೋಡಿ ಮಾತೃಭೂಮಿ ಸಂರಕ್ಷಣಾ ಹೋರಾಟ ಸಮಿತಿಯ ವತಿಯಿಂದ ಭಾನುವಾರ ಬೃಹತ್ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು.
ಪ್ರತಿಭಟನೆಯ ಹಿನ್ನೆಲೆಯಲ್ಲಿ ನಿಡ್ಡೋಡಿ ಪರಿಸರ ಮತ್ತು ಪುತ್ತಿಗೆಯಲ್ಲಿ ಅಂಗಡಿ ಮುಂಗ್ಗಟ್ಟುಗಳು ಬಂದ್ ಆಗಿದ್ದವು. ಹಲವು ಸಂಘ-ಸಂಸ್ಥೆಗಳು ಹೋರಾಟಕ್ಕೆ ಬೆಂಬಲ ನೀಡಿದ್ದವು. ಉಪವಾಸ ಸತ್ಯಾಗ್ರಹದ ಹಿನ್ನೆಲೆಯಲ್ಲಿ ಬಸ್ ಸಹಿತ ವಾಹನಗಳ ಓಡಾಟ ವಿರಳವಾಗಿದ್ದವು.
ಪುರುಷರು- ಮಹಿಳೆಯರು, ಹಿರಿಯರು, ಮತ್ತು ಕಿರಿಯರು ಸೇರಿ ಸುಮಾರು ಎರಡು ಸಾವಿರಕ್ಕಿಂತಲೂ ಹೆಚ್ಚು ಜನರು ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೆ ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಸ್ಥಾವರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ದೇಶದ ಮುಂದುವರಿದ ರಾಜ್ಯಗಳಲ್ಲಿ ಪರಿಸರ ವಿರೋಧಿ ಕಂಪೆನಿಗಳು ಬಂದಾಗ ಅಲ್ಲಿನ ಜನರು ಅದನ್ನು ವಿರೋಧಿಸಿ ಓಡಿಸಿದ್ದಾರೆ. ಅಂತಹ ಕಂಪೆನಿಗಳನ್ನೆಲ್ಲಾ ಬಳಿಕ ಕರಾವಳಿ ಜಿಲ್ಲೆಗಳಲ್ಲಿ ಸ್ಥಾಪಿಸಲಾಗುತ್ತಿದೆ. ಈ ಮೊದಲ ಜಿಲ್ಲೆಯಲ್ಲಿ ಎಸ್ ಇಝೆಡ್, ನಾಗಾರ್ಜುನದಂಥ ಕಂಪೆನಿಗಳು ಕಾಲಿಟ್ಟಾಗಲೂ ಗ್ರಾಪಂ ವ್ಯಾಪ್ತಿಗಳಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆದಿದ್ದರು ಆದರೆ ಪ್ರಯೋಜನಕಾರಿಯಾಗಲಿಲ್ಲ ಎಂದರು.
ಜನ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುವ ಹಾನಿಕಾರಕ ಕಂಪೆನಿಗಳ ಬಗ್ಗೆ ಜನತೆ ತೀವ್ರ ಹೋರಾಟಕ್ಕೆ ಮುಂದಾಗ ಬೇಕು. ನಿಡ್ಡೋಡಿ ಪವರ್ ಪ್ರಾಜೆಕ್ಟ್ ವಿರುದ್ಧ ತೀವ್ರವಾದ ಹೋರಾಟದ ಜತೆಗೆ ಗ್ರಾಪಂ ಕೂಡಾ ಅಧಿಸೂಚನೆ ಹಾಕಿ ನಿರ್ಣಯ ಮಾಡಿದರೆ ಕಂಪೆನಿ ಇಲ್ಲಿ ಕಾಲೂರಲು ಸಾಧ್ಯವಾಗದು ಎಂದು ಈಶ ವಿಠ್ಠಲದಾಸ ಸ್ವಾಮೀಜಿ ನುಡಿದರು.
ಸಚಿವರ ಅಭಯ: ರಾಜ್ಯ ಮೀನುಗಾರಿಕಾ ಸಚಿವ ಕೆ. ಅಭಯಚಂದ್ರ ಜೈನ್ ಪ್ರತಿಭಟನೆ ಆರಂಭಗೊಳ್ಳುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿ ಈ ಯೋಜನೆ ಇಲ್ಲಿಗೆ ಬರಲು ತಾನು ಬಿಡಲಾರೆ. ಮೊದಲಿನಿಂದಲೂ ಜನಪರ ಹೋರಾಟಕ್ಕೆ ಬೆಂಬಲಿಸುತ್ತಾ ಬಂದಿದ್ದೇನೆ. ಈಗಲೂ ಜನಪರವಾದ ಮಂಡಿಸುತ್ತೇನೆ ಎಂದು ಭರವಸೆ ನೀಡಿದರು. [ಅಭಯಚಂದ್ರ ಜೈನ್ ನೀಡಿದ್ದ ಭರವಸೆ ಏನು?]
ಕಟೀಲು ಕಾಲೇಜಿನ ಪ್ರಾಧ್ಯಾಪಕ ಸೋಂದಾ ಭಾಸ್ಕರ ಭಟ್, ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ನಾಯಕರಾದ ವಿಲಾಸ್ ನಾಯಕ್, ಸುಬೇಧರ್ ನಾಯಕ್ ಧರಣೇಂದ್ರ ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದರು.
ಬಿಜೆಪಿ ಮುಖಂಡರಾದ ಜಗದೀಶ ಅಧಿಕಾರಿ, ಉಮಾನಾಥ ಕೋಟ್ಯಾನ್, ರೈತ ಮುಖಂಡ ರೋಹಿತಾಕ್ಷ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಬಳಿಕ ಮಾತೃಭೂಮಿ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಅಲ್ಫೋನ್ಸ್ ಡಿಕೋಸ್ಟಾನಿಡ್ಡೋಡಿ ಉಷ್ಣ ವಿದ್ಯುತ್ ಸ್ಥಾವರದ ವಿರುದ್ಧ ಮೂಡುಬಿದಿರೆ ತಹಶೀಲ್ದಾರ್ ಶಿವಕುಮಾರ್ ರಿಗೆ ಮನವಿ ಸಲ್ಲಿಸಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications