ಮದನಿಯ ಬಿಡುಗಡೆ ಮಾಡದಿದ್ರೆ ಹಿಂದೂ ನಾಯಕರ ಹತ್ಯೆ

ಈ ಸಂಬಂಧ ಕೊಯಮತ್ತೂರಿನಲ್ಲಿರುವ ಬಿಜೆಪಿ ಕಚೇರಿಗೆ ಪತ್ರ ಬರೆದಿರುವ ಮದನಿ ಅಭಿಮಾನಿಗಳು 2008ರ ಬೆಂಗಳೂರು ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿ, ಕೇರಳ ಮೂಲದ ಪಿಡಿಪಿ ಪಕ್ಷದ ಅಧಿನಾಯಕ ಮದನಿಯನ್ನು ತಕ್ಷಣ ಜೈಲಿನಿಂದ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ಆರೆಸ್ಸೆಸ್ ನಾಯಕರ ಹತ್ಯೆ ಮಾಡುವುದು ಖಚಿತ ಎಂದು ಬೆದರಿಕೆ ಹಾಕಿರುವುದಾಗಿ ಕೇರಳ ಪೊಲೀಸರು ತಿಳಿಸಿದ್ದಾರೆ.
ಪತ್ರದಲ್ಲೇನಿದೆ?:
ಟೈಪ್ ಮಾಡಲಾದ ಪತ್ರವನ್ನು ಪಾಕ್ಕಾಡ್ ನಲ್ಲಿ ಪೋಸ್ಟ್ ಮಾಡಲಾಗಿದೆ. ತ5ಕ್ಷಣ ನಮ್ಮ ನಾಯಕ ಮದನಿಯನ್ನು ಬಿಡುಗಡೆ ಮಾಡಿ. ಆತನ ವಿರುದ್ಧವಿರುವ ಎಲ್ಲ ಪ್ರಕರಣಗಳನ್ನು ಹಿಂತೆಗೆದುಕೊಳ್ಳಿ. ಇಲ್ಲಾಂದ್ರೆ ನಿಮ್ಮ ನಾಯಕರ ಅಂತ್ಯಕ್ರಿಯೆಯನ್ನು ನೀವು ಕಾಣಬೇಕಾಗುತ್ತದೆ. ಕಮಲ ಟಿವಿ ಚಾನೆಲ್ ಅನ್ನು ತಕ್ಷಣ ಸ್ಥಗತಿಗೊಳಿಸಿ. ಸಾರ್ವಜನಿಕವಾಗಿ ಇಸ್ಲಾಂ ಸಮುದಾಯಕ್ಕೆ ಕ್ಷಮಾಪಣೆ ಕೋರಿಕೊಳ್ಳಿ' ಎಂದು ಪತ್ರದಲ್ಲಿ ಗೀಚಲಾಗಿದೆ.
ಅಡ್ವಾಣಿ ಭೇಟಿ: 'ಜುಲೈ 19ರಂದು ತಮಿಳುನಾಡು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ ರಮೇಶ್ ಅವರನ್ನು ಹತ್ಯೆ ಮಾಡಲಾಗಿದೆ. ಹತ ನಾಯಕನಿಗೆ ಶ್ರದ್ಧಾಂಜಲಿ ಅರ್ಪಿಸಲು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರು ನಾಳಿದ್ದು ಗುರುವಾರ ಆಗಸ್ಟ್ 1ರಂದು ಕೊಯಮತ್ತೂರಿಗೆ ಭೇಟಿ ನೀಡುವ ಕಾರ್ಯಕ್ರಮವಿದೆ.
ಬೆಂಗಳೂರಿನಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮದನಿ ಜಾಮೀನು ಕೋರಿ ಅನೇಕ ಬಾರಿ ಅಲವತ್ತುಕೊಂಡಿದ್ದಾರೆ. ಆದರೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ. ಈ ಮಧ್ಯೆ ಕೇಂದ್ರ ಮಟ್ಟದಿಂದ ರಾಜ್ಯ ರಾಜಕೀಯ ನಾಯಕರೂ ಮದನಿ ಬಿಡುಗಡೆಗೆ ಅಧಿಕೃತವಾಗಿ ಯತ್ನಿಸಿದ್ದಾರಾದರೂ ಕೋರ್ಟ್ ಅಸ್ತು ಅಂದಿಲ್ಲ.
ಇದರಿಂದ ನಿರಾಶೆಗೊಂಡಿರುವ ಮದನಿ ಬೆಂಬಲಿಗರು ಈಗ ಹಿಂದೂ ನಾಯಕರ ಹತ್ಯೆ ಮಾತನ್ನಾಡುತ್ತಿದ್ದಾರೆ. ಬಿಜೆಪಿ, ಹಿಂದೂ ಮುನ್ನಣಿ ಮತ್ತು ವಿಹಿಂಪ ನಾಯಕರನ್ನು ಗುರಿಯಾಗಿಸಿಕೊಂಡು ಈ ಪತ್ರ ಬರೆದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಪತ್ರದ ಹಿನ್ನೆಲೆಯಲ್ಲಿ ತಮಿಳುನಾಡು ಬಿಜೆಪಿ ಕಾರ್ಯದರ್ಶಿ ಜಿಕೆಎಸ್ ಸೆಲ್ವಕುಮಾರ್ ಅವರು ಪೊಲೀಸ್ ಆಯುಕ್ತ ಎಕೆ ವಿಶ್ವನಾಥನ್ ಅವರನ್ನು ಭೇಟಿ ಮಾಡಿ, ವರಿಷ್ಠ ನಾಯಕರಿಗೆ ಭದ್ರತೆ ಒದಗಿಸುವಂತೆ ಕೋರಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್












Click it and Unblock the Notifications