ಮೇಯಪ್ಪನ್ ಗೆ ಕ್ಲೀನ್ ಚೀಟ್ ಏಕೆ? : ಕೋರ್ಟ್

ಹಗರಣದ ತನಿಖೆ ನಡೆಸಲು ಬಿಸಿಸಿಐ ನಿಯೋಜಿಸಿದ್ದ ತನಿಖಾ ತಂಡವೇ ಅಸಾಂವಿಧಾನಿಕವಾಗಿದ್ದು ಪ್ರಕರಣದ ಸಂಪೂರ್ಣ ಮರುತನಿಖೆಯಾಗಬೇಕು ಎಂದು ಹೇಳಿದೆ.
ಅಳಿಯನಿಗೆ ತನಿಖಾ ತಂಡ ಕ್ಲೀನ್ಚಿಟ್ ನೀಡಿದ್ದ ಹಿನ್ನೆಲೆಯಲ್ಲಿ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಮರಳಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಬರುವುದು ನಿಶ್ಚಿತವಾಗಿತ್ತು. ಮೇಯಪ್ಪನ್, ರಾಜಕುಂದ್ರಾ ಎಲ್ಲರಿಗೂ ತನಿಖಾ ತಂಡ ಕ್ಲೀನ್ ಚಿಟ್ ನೀಡಿ, ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಇವರನ್ನು ಆರೋಪಿಗಳೆಂದು ಪರಿಗಣಿಸಲು ಯಾವುದೇ ಸಾಕ್ಷಿ ಪುರಾವೆಗಳಿಲ್ಲ ಎಂದು ಹೇಳಿತ್ತು.
ಆದರೆ ಇಂದು ದಿಲ್ಲಿ ಪೊಲೀಸರು ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿರಾರು ಪುಟಗಳ ವರದಿ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಶ್ರೀನಿವಾಸನ್ ಅವರ ಅಳಿಯ ಗುರುನಾಥ್ ಮೇಯಪ್ಪನ್ ಐಪಿಎಲ್ ನ ರಾಜಸ್ಥಾನ್ ರಾಯಲ್ಸ್ ತಂಡದ ಮಾಲೀಕ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ಕುಂದ್ರಾ ಸಹ ಮಾಲೀಕ ಆಗಿದ್ದಾರೆ.
ರಾಜ್ ಕುಂದ್ರಾ ಜೊತೆಗೆ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಬಿಸಿಸಿಐ ಅಧ್ಯಕ್ಷ ಎನ್. ಶ್ರೀನಿವಾಸನ್ ರ ಅಳಿಯ ಗುರುನಾಥ್ ಮೇಯಪ್ಪನ್ ಗೂ ಕ್ಲೀನ್ ಚಿಟ್ ಸಿಕ್ಕಿದೆ. ಮೇಯಪ್ಪನ್ ಮೇಲಿನ ಆರೋಪದ ಬಗ್ಗೆ ಎರಡು ಸದಸ್ಯರ ತಂಡ ತನಿಖೆ ನಡೆಸಿದ್ದು, ಅದರಲ್ಲಿ ಮೇಯಪ್ಪನ್ ಬೆಟ್ಟಿಂಗ್ ನಡೆಸಿರುವುದರ ಬಗ್ಗೆ ಸಾಕ್ಷ್ಯಾಧಾರಗಳು ಲಭಿಸಿವೆ ಎನ್ನಲಾಗಿತ್ತು. ಆದರೆ, ಬಿಸಿಸಿಐ ಸ್ವತಂತ್ರ ವರದಿಯಲ್ಲಿ ಮೇಯಪ್ಪನ್ ಗೆ ಕ್ಲೀನ್ ಚಿಟ್ ಸಿಕ್ಕಿತ್ತು.
ರಾಜ್ ಕುಂದ್ರಾ, ರಾಜಸ್ಥಾನ್ ರಾಯಲ್ಸ್ ಮತ್ತು ಇಂಡಿಯಾ ಸಿಮೆಂಟ್ಸ್ ಯಾವುದರ ವಿರುದ್ಧವೂ ಯಾವುದೇ ಸಾಕ್ಷ್ಯಾಧಾರಗಳು ಸಿಗದೇ ಇರುವ ಕಾರಣ ಕುಂದ್ರಾ ಸೇರಿ ಇತರರಿಗೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ನಿರಂಜನ್ ಷಾ ಹೇಳಿದ್ದಾರೆ. ಬಿಸಿಸಿಐ ಕೈಗೊಂಡಿರುವ ಈ ಮಹತ್ವದ ನಿರ್ಧಾರವನ್ನು ಐಪಿಎಲ್ ಗವರ್ನಿಂಗ್ ಕೌನ್ಸಿಲ್ ಗೆ ಕಳುಹಿಸಿದ್ದು, ಈ ಬಗ್ಗೆ ಆಗಸ್ಟ್ 2ರಂದು ಅಂತಿಮ ನಿರ್ಧಾರ ಹೊರಬೀಳಲಿದೆ.
ಬಹುಶಃ ಎನ್ ಶ್ರೀನಿವಾಸನ್ ಮರು ನೇಮಕಾತಿ ಬಗ್ಗೆ ಕೂಡಾ ಅಂದೇ ತೀರ್ಮಾನ ಹೊರಬೀಳಲಿದೆ. ಬೆಟ್ಟಿಂಗ್, ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಬಂಧನವನ್ನು ದೆಹಲಿ ಪೊಲೀಸರು ತಳ್ಳಿ ಹಾಕಿದ್ದರು, ಬ್ರಿಟಿಷ್ ನಾಗರೀಕ ರಾಜ್ ಕುಂದ್ರಾ ಬಂಧನ ಕೂಡಾ ಅಷ್ಟು ಸುಲಭವಲ್ಲ ಎನ್ನಲಾಗಿತ್ತು. ಆದರೆ, ಪೊಲೀಸರಿಗೂ ಮುಂಚಿತವಾಗಿ ಜಗಮೋಹನ್ ದಾಲ್ಮಿಯಾ ನೇತೃತ್ವ ಬಿಸಿಸಿಐ ಅಧಿಕಾರಿಗಳು ರಾಜ್ ಕುಂದ್ರಾ ಅವರನ್ನು ಅಮಾನತುಗೊಳಿಸಿದ್ದರು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications