ಬೆಳಗಾವಿ : ಪಂಜರದಲ್ಲಿ ಬಂಧಿಯಾಗಿದ್ದ ವ್ಯಕ್ತಿ ರಕ್ಷಣೆ

ಸವದತ್ತಿ ತಾಲೂಕಿನ ಹಿರೇಕುಂಬಿ ಗ್ರಾಮದ ಪ್ರಕಾಶ್ ಬೆಳವಡಿ (60) ಎಂಬುವವರನ್ನು ಇಬ್ಬರು ಮಕ್ಕಳು ಕಳೆದ ಏಳು ವರ್ಷಗಳಿಂದ ಕಾಲಿಗೆ ಸರಪಳಿ ಹಾಕಿ, ಪಂಜರದಲ್ಲಿ ಕೂಡಿಹಾಕಿದ್ದರು. ಸ್ಥಳೀಯರಿಂದ ಮಾಹಿತಿ ಪಡೆದ ಸವದತ್ತಿ ಪೊಲೀಸರು ಬುಧವಾರ ಪ್ರಕಾಶ್ ಅವರನ್ನು ಬಂಧಮುಕ್ತಗೊಳಿಸಿದ್ದಾರೆ.
ಪಂಜರದಲ್ಲಿದ್ದ ಕಾರಣ ಪ್ರಕಾಶ್ ಅವರು ಮಾನಸಿಕವಾಗಿ ಖಿನ್ನರಾಗಿದ್ದಾರೆ. ಪೊಲೀಸರು ಅವರನ್ನು ಸವದತ್ತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. (ರಾಜ್ಯದ ಗೃಹ ಬಂಧನ ಪ್ರಕರಣಗಳು)
ಹುಟ್ಟು ಶ್ರೀಮಂತ : ಪ್ರಕಾಶ್ ಬೆಳವಡಿ ಅವರಿಗೆ ಸಾಕಷ್ಟು ಪಿರ್ತಾರ್ಜಿತವಾದ ಆಸ್ತಿ ಇದೆ. ಅವರು ಕುಡಿಯುವುದು, ಜೂಜಾಡುವುದು ಮುಂತಾದ ದುಶ್ಚಟಗಳನ್ನು ಬೆಳೆಸಿಕೊಂಡು, ಹಣವನ್ನು ಖರ್ಚು ಮಾಡುತ್ತಿದ್ದರು.
ಮಕ್ಕಳು ತಂದೆಗೆ ಹಲವಾರು ಬಾರಿ ಬುದ್ಧಿವಾದ ಹೇಳಿದ್ದರು. ಆದರೆ, ಅವರ ವರ್ತನೆಯಲ್ಲಿ ಬದಲಾವಣೆ ಮಾಡಿಕೊಂಡಿರಲಿಲ್ಲ. ಇದರಿಂದ ಬೇಸರಗೊಂಡ ಮಕ್ಕಳು ಏಳು ವರ್ಷಗಳಿಂದ ಪಂಜರದಲ್ಲಿ ಕೂಡಿ ಹಾಕಿದ್ದರು.
ಪ್ರಾಣಿಗಳಂತೆ ಇದ್ದರು : ಮೃಗಾಲಯದಲ್ಲಿ ಪ್ರಾಣಿಗಳನ್ನು ಕೂಡಿಹಾಕುಂತಹ ದೊಡ್ಡ ಪಂಜರದೊಳಗೆ ಪ್ರಕಾಶ್ ಅವರನ್ನು ಕೂಡಿ ಹಾಕಲಾಗಿತ್ತು. ಅವರ ಕಾಲಿಗೆ ಸರಪಳಿ ಬಿಗಿಯಲಾಗಿತ್ತು. ಊಟವನ್ನು ಪಂಜರದೊಳಗೆ ನೀಡಲಾಗುತ್ತಿತ್ತು.
ಪೊಲೀಸರು ಪ್ರಕಾಶ್ ಅವರ ಮನೆಗೆ ತೆರಳಿದಾಗಲೂ ಅವರು ಪಂಜರದಲ್ಲೇ ಬಂಧಿಯಾಗಿದ್ದರು. ಅವರನ್ನು ಹೊರಗೆ ಕರೆತಂದ ಪೊಲೀಸರು, ಸರಪಳಿ ಬಿಚ್ಚಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪಂಜರದಲ್ಲಿ ಬಂದಿಯಾಗಿದ್ದ ಕಾರಣ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು












Click it and Unblock the Notifications