ನಮ್ಮ ಕುಟುಂಬದಿಂದ ಯಾರು ಸ್ಪರ್ಧಿಸುತ್ತಿಲ್ಲ: ಗೌಡ್ರು
ಚನ್ನಪಟ್ಟಣ, ಜು.31: ಈಗ ಬಂದಿರುವ ಲೋಕಸಭೆ ಮರು ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕೆ ಅಥವಾ ಬೇಡವೇ ಎನ್ನುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎನ್ನುವ ಮೂಲಕ ಜೆಡಿಎಸ್ ವರಿಷ್ಟ ಎಚ್.ಡಿ. ದೇವೇಗೌಡ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದರು.
ಈಗ ಚುನಾವಣೆ ನಡೆದರೂ ಮುಂದಿನ 120-130 ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ ಎಂದು ಭವಿಷ್ಯ ನುಡಿದ ಗೌಡರು, ಈ ಮರು ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಿ, ಚುನಾವಣೆ ಎದುರಿಸುವ ಆರ್ಥಿಕ ಶಕ್ತಿ ನಮ್ಮ ಪಕ್ಷಕ್ಕಿಲ್ಲವೆಂದರು.
ಅದರೂ ಎರಡನೇ ಹಂತದ ನಾಯಕರು ಈ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಹಾಕದಿದ್ದರೇ ಕಾರ್ಯಕರ್ತರು ಮತ್ತು ಮುಖಂಡರಲ್ಲಿ ಗೊಂದಲ ಮೂಡುತ್ತದೆ ಎನ್ನುವ ದೃಷ್ಟಿಯಿಂದ ಅಭ್ಯರ್ಥಿ ಕಣಕ್ಕಿಳಿಸಿ ಎಂದು ಹೇಳುತ್ತಿದ್ದಾರೆ, ಅವರ ಆತಂಕದ ಬಗ್ಗೆಯೂ ನಾವು ಸಮಲೋಚನೆ ಮಾಡಬೇಕಿದೆ ಎಂದು ಅತ್ಯಂತ ಮಂದಸ್ಮಿತರಾಗಿದ್ದ ಗೌಡರು ಲೋಕಾವಿರಾಮವಾಗಿ ಕಾರ್ಯಕರ್ತರೊಂದಿಗೆ ಚರ್ಚಿಸಿದರು.

"ನಾನು ದುಡ್ಡುಕೊಟ್ಟು ರಾಜಕಾರಣ ಮಾಡಿದವನಲ್ಲ. ನಾನು ನನ್ನ ಸಮಕಾಲೀನ ರಾಜಕಾರಣಿಗಳು ಕಾರ್ಯಕರ್ತರ ನೋವುಗಳಿಗೆ ಸ್ಪಂದಿಸಿ, ಆಯ್ಕೆಯಾಗುತ್ತಿದ್ದೆವು. ಆದರೆ, ಇಂದು ಹಣದ ವಹಿವಾಟಿನ ಚುನಾವಣೆ ನಡೆಯುತ್ತಿದ್ದು, ಹಣ ಕೊಟ್ಟು ಚುನಾವಣೆ ಗೆಲ್ಲಬೇಕಾಗಿ ಬಂದಿದೆ. ಇಂಥ ಚುನಾವಣೆಯಲ್ಲಿ ನಾವು ನಿಲ್ಲಬೇಕೆ ಎನ್ನುವ ಪ್ರಶ್ನೆ ಕಾಡುತ್ತದೆ" ಎಂದು ವ್ಯಾಖ್ಯಾನಿಸಿದರು.
ನಮ್ಮ ಕುಟುಂಬದಿಂದ ಯಾರು ಚುನಾವಣಾ ಕಣದಲ್ಲಿ ಇರುವುದಿಲ್ಲ. ಕಾರ್ಯಕರ್ತರು ಒಪ್ಪುವ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಎಲ್ಲಾ ತಾಲೂಕುಗಳಲ್ಲೂ ಚರ್ಚಿಸುತ್ತಿದ್ದೇನೆ ಎಂದರು.
ಗೌಡರ ಜತೆಯಲಿದ್ದ ಪಿಜಿಆರ್ ಸಿಂಧ್ಯ ಮತ್ತು ಡಿ.ಎಂ. ವಿಶ್ವನಾಥ್ ಅವರನ್ನು ಕಣಕ್ಕಿಳಿಸುವಂತೆ ಕಾರ್ಯಕರ್ತರು ಒತ್ತಡ ತಂದರು. ಇದಕ್ಕೆ ಪ್ರತಿಕ್ರಿಸಿದ ಸಿಂಧ್ಯಾ ನನಗೆ ಇನ್ನು ಚುನಾವಣೆ ಬೇಡ ಎಂದು ನುಣುಚಿಕೊಂಡರೆ, ಡಿ.ಎಂ.ವಿಶ್ವನಾಥ್ ನಾನು ಸಾಯುವವರೆಗೂ ಜೆಡಿಎಸ್ ನಲ್ಲಿ ಇರುತ್ತೇನೆ. ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವೆಂದು ಘೋಷಿಸಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications