ಹೊಸ ಕಚೇರಿಯಲ್ಲಿ ಅಡಗಿದೆಯೇ ಶ್ರೀರಾಮುಲು ಅದೃಷ್ಟ?

ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಸ್ಆರ್ ಕಾಂಗ್ರೆಸ್, ಪಕ್ಷದ ಕಚೇರಿಯನ್ನು ಬಸವೇಶ್ವರ ನಗರದ ಶಂಕರಮಠ ಬಳಿಗೆ ಶೀಘ್ರದಲ್ಲೇ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದೆ. ಇದರಿಂದ ಕುಮಾರಕೃಪ ರಸ್ತೆಯ ಶುಭೋದಯದಲ್ಲಿ ಇನ್ನು ಪಕ್ಷದ ಕಚೇರಿ ಇರುವುದಿಲ್ಲ.
ಬಿಎಸ್ಆರ್ ಕಾಂಗ್ರೆಸ್ ಪಕ್ಷ ಪ್ರಾರಂಭವಾದ ದಿನದಿಂದ ಕುಮಾರಕೃಪ ರಸ್ತೆಯ ಶುಭೋದಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಕಾರ್ಪೊರೇಟ್ ಶೈಲಿಯಂತೆ ಸುಸಜ್ಜಿತವಾದ ಈ ಕಟ್ಟಡಕ್ಕೆ, ತಿಂಗಳಿಗೆ ಸುಮಾರು 12 ಲಕ್ಷ ಬಾಡಿಗೆಯನ್ನು ಪಾವತಿಸುತ್ತಿತ್ತು.
ಸದ್ಯ ಬಿಎಸ್ಆರ್ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಪ್ರಯತ್ನ ನಡೆಸಿದೆ. ಇಂತಹ ಸಮಯದಲ್ಲಿ ಲಕ್ಷಾಂತರ ರೂ ಬಾಡಿಗೆ ಪಾವತಿಸುವುದಕ್ಕಿಂತ, ಕಚೇರಿ ಸ್ಥಳಾಂತರ ಮಾಡಲು ಪಕ್ಷದ ಅಧ್ಯಕ್ಷ ಬಿ.ಶ್ರೀರಾಮುಲು ತೀರ್ಮಾನಿಸಿದ್ದಾರೆ.
ಕಾರ್ಯಕರ್ತರು ಬರೋಲ್ಲ : ಪಕ್ಷದ ಕಚೇರಿ ಎಷ್ಟು ಹೈಟೆಕ್ ಆಗಿದ್ದರೂ ಅಲ್ಲಿ ಜನರ ಓಡಾಟವಿರಬೇಕು. ಪಕ್ಷದ ಆರಂಭವಾದ ದಿನದಲ್ಲಿ ಕಚೇರಿ ಕಾರ್ಯಕರ್ತರಿಂದ ತುಂಬಿ ಹೋಗಿತ್ತು. ಆದರೆ, ಸ್ಥಳೀಯ ಸಂಸ್ಥೆ ಮತ್ತು ವಿಧಾನಸಭೆ ಚುನಾವಣೆ ನಂತರ ಕಾರ್ಯಕರ್ತರು ಪಕ್ಷದ ಕಚೇರಿಗೆ ಬರುವುದು ಕಡಿಮೆ ಆಗಿದೆ.
ಪಕ್ಷದ ಅಧ್ಯಕ್ಷ ಬಿ.ಶ್ರೀರಾಮುಲು ಸಹ ಪತ್ರಿಕಾಗೋಷ್ಠಿಗಳನ್ನು ಬಳ್ಳಾರಿಯ ಪಕ್ಷದ ಕಚೇರಿಯಿಂದ ಮಾಡುತ್ತಿದ್ದಾರೆ. ಆದ್ದರಿಂದ ಬೆಂಗಳೂರಿನ ಕಚೇರಿಗೆ ದುಬಾರಿ ಬಾಡಿಗೆಕೊಟ್ಟು ಮುಂದುವರೆಸುವುದು ಬೇಡ ಎಂದು ತೀರ್ಮಾನಿಸಲಾಗಿದ್ದು, ಕಚೇರಿ ಸ್ಥಳಾಂತರಕ್ಕೆ ಮುಂದಾಗಿದ್ದಾರೆ.
ಲೋಕಸಭೆ ಚುನಾವಣೆ ವೇಳೆಗೆ ಪಕ್ಷದ ಕಚೇರಿ ಬಸವೇಶ್ವರ ನಗರಕ್ಕೆ ಸ್ಥಳಾಂತರವಾಗುವುದು ಖಚಿತವಾಗಿದೆ. ಹೊಸ ಕಚೇರಿಯ ಶ್ರೀರಾಮುಲು ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಬಲ ತಂದುಕೊಡಲಿದೆಯೋ ಕಾದು ನೋಡಬೇಕು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications