ವಿಧಾನ ಪರಿಷತ್ ಚುನಾವಣಾ ಅಖಾಡಕ್ಕೆ ಕೆಜೆಪಿ?

ಆಗಸ್ಟ್ 22ರಂದು ನಡೆಯಲಿರುವ ಧಾರವಾಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪ ಚುನಾವಣೆಯಲ್ಲಿ ಮಾಜಿ ಸಚಿವ ಸಿ.ಎಂ.ಉದಾಸಿ ಅವರು ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಈ ಮೂಲಕ ಕೆಜೆಪಿ ಪಕ್ಷ ಮತ್ತೊಂದು ಚುನಾವಣೆ ಎದುರಿಸಲಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹಾನಗಲ್ ಕ್ಷೇತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿ.ಎಂ.ಉದಾಸಿ ಸೋಲು ಅನುಭವಿಸಿದ್ದರು. ಆದ್ದರಿಂದ ಅವರನ್ನು ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಲು ಪಕ್ಷ ತೀರ್ಮಾನಿಸಿದೆ.
ಧಾರವಾಡ ಕ್ಷೇತ್ರದಿಂದ ಆಯ್ಕೆಯಾಗಿದ್ದ ಬಿಜೆಪಿಯ ಶಿವರಾಜ್ ಸಜ್ಜನ್ ಏಪ್ರಿಲ್ 4 ರಂದು ರಾಜೀನಾಮೆ ನೀಡಿ ಕೆಜೆಪಿ ಸೇರಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಆದ್ದರಿಂದ ಈ ಚುನಾವಣೆ ಗೆದ್ದು, ಕ್ಷೇತ್ರವನ್ನು ವಶಪಡಿಸಿಕೊಳ್ಳಲು ಉದಾಸಿ ಅವರನ್ನು ಕಣಕ್ಕಿಳಿಸಲು ಕೆಜೆಪಿ ತೀರ್ಮಾನಿಸಿದೆ.
ಸಭೆಯಲ್ಲಿ ಅಂತಿಮ : ಎರಡು ಲೋಕಸಭಾ ಮತ್ತು ಮೂರು ವಿಧಾನಪರಿಷತ್ ಕ್ಷೇತ್ರಗಳ ಉಪಚುನಾವಣೆ ಸಂಬಂಧ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಂಬಂಧ ಚರ್ಚಿಸಲು ಗುರುವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಕ್ಷದ ಪ್ರಮುಖ ನಾಯಕರ ಸಭೆಯ ಕರೆದಿದ್ದಾರೆ.
ಲೋಕಸಭಾ ಉಪ ಚುನಾವಣೆ ಬಗ್ಗೆ ಪಕ್ಷ ಹೆಚ್ಚು ಗಮನ ವಹಿಸದಿದ್ದರೂ, ವಿಧಾನಪರಿಷತ್ ಉಪ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪಕ್ಷ ತೀರ್ಮಾನಿಸಿದೆ. ಅಭ್ಯರ್ಥಿಗಳಾರು ಎಂಬುದು ಇಂದಿನ ಸಭೆಯಲ್ಲಿ ಅಂತಿಮಗೊಳ್ಳುವ ನಿರೀಕ್ಷೆ ಇದೆ.
ಎಲ್ಲೆಲ್ಲಿ ಚುನಾವಣೆ : ಧಾರವಾಡ, ಮೈಸೂರು ಮತ್ತು ಚಿತ್ರದುರ್ಗದಿಂದ ತೆರವಾಗಿರುವ ವಿಧಾನಪರಿಷತ್ ಸ್ಥಾನಗಳಿಗಾಗಿ ಆ.22ರಂದು ಚುನಾವಣೆ ನಡೆಯಲಿದೆ. ಪರಿಷತ್ ನಲ್ಲಿ ಸದ್ಯ ಬಿಜೆಪಿ ಪ್ರಾಬಲ್ಯ ಸಾಧಿಸಿದೆ. ಮೂರು ಕ್ಷೇತ್ರಗಳನ್ನು ಗೆದ್ದು, ಕಾಂಗ್ರೆಸ್ ಪರಿಷತ್ ನಲ್ಲಿ ತನ್ನ ಬಲ ಹೆಚ್ಚಿಸಿಕೊಳ್ಳುಲು ನಿರ್ಧರಿಸಿತ್ತು. ಕೆಜೆಪಿಯು ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಕಾಂಗ್ರೆಸ್ ಪಕ್ಷಕ್ಕೆ ಕೊಂಚ ಹಿನ್ನಡೆ ಉಂಟಾಗಲಿದೆ.( ಚುನಾವಣೆ ವೇಳಾಪಟ್ಟಿ)
ಅಂತೂ ಕೆಜೆಪಿ ಪಕ್ಷ ಎಲ್ಲಾ ಚುನಾವಣೆಯನ್ನು ಎದುರಿಸುತ್ತಿದೆ. ವಿಧಾನಪರಿಷತ್ ಚುನಾವಣೆ ಮುಗಿದ ನಂತರ ಪಕ್ಷ ಲೋಕಸಭೆ ಚುನಾವಣೆಗೆ ಇತರ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುದೇ ಎಂದು ಕಾದು ನೋಡಬೇಕು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications