ಅನಂತ ಪದ್ಮನಾಭನ ಸಂಪತ್ತಿಗೆ ಶಿವಸೇನೆಯಿಂದ ಬೆದರಿಕೆ!
ತಿರುವನಂತಪುರ, ಆ 3: ಐತಿಹಾಸಿಕ ಅನಂತ ಪದ್ಮನಾಭನ ಕೋಟಿ ಕೋಟಿ ಬೆಲೆಬಾಳುವ ಆಭರಣಕ್ಕೂ ಶಿವಸೇನೆಗೂ ಎಲ್ಲಿಂದ ಸಂಬಂಧ ಎಂದು ಆಶ್ಚರ್ಯ ಪಟ್ಟರೆ, ಅದಕ್ಕೆ ಇಲ್ಲಿದೆ ಉತ್ತರ.
ಅನಂತ ಪದ್ಮನಾಭ ದೇವಾಲಯದ ಸಮೀಪದಲ್ಲಿ ಶಿವಸೇನೆಯ ಕಚೇರಿ ಇದೆ. ಇದರಿಂದಾಗಿ ದೇವಾಲಯದ ಭದ್ರತೆಗೆ ಅಪಾಯವಿದೆ. ಶಿವಸೇನೆ ತನ್ನ ಈ ಕಚೇರಿಯನ್ನು ಸೂಕ್ತವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ನ್ಯಾಯಾಲಯದ ಸಲಹೆಗಾರ ಗೋಪಾಲ್ ಸುಬ್ರಮಣ್ಯಂ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದ್ದಾರೆ.
ಶಿವಸೇನೆ ಪಕ್ಷದ ಕಾರ್ಯಕರ್ತರು ಕಚೇರಿಯಲ್ಲಿ ಪೆಟ್ರೋಲ್ ಬಾಂಬ್, ಮಚ್ಚು, ಲಾಂಗು, ನಾಡಬಾಂಬಿನಂತಹ ಸಮಾಜ ವಿರೋಧಿ ವಸ್ತುಗಳನ್ನು ಸಂಗ್ರಹಿಸಿಟ್ಟು ಕೊಂಡಿದ್ದಾರೆ. ದೇಗುಲದ ನೆಲಮಾಳಿಗೆಯಲ್ಲಿ ಅಪಾರ ಸಂಪತ್ತುಗಳು ಇರುವುದರಿಂದ ದೇಗುಲದ ಭದ್ರತೆಗೆ ಅಪಾಯವಿದೆ.

ದೇಗುಲದ ಆಡಳಿತ ಅಧಿಕಾರಿಯಾಗಿರುವ ಜಯಶೇಖರನ್ ಅನೇಕ ಅವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ. ಸಮೀಪದ ಪೋಲೀಸ್ ಠಾಣೆಯಲ್ಲಿ ಅವರ ಮೇಲೆ ಹಲವು ದೂರುಗಳು ದಾಖಲಾಗಿವೆ.
1.5 ಲಕ್ಷ ಕೋಟಿ ರೂಪಾಯಿ ಸಂಪತ್ತನ್ನು ಹೊಂದಿರುವ ಅನಂತ ಪದ್ಮನಾಭ ದೇವಾಲಯ ವಿಶ್ವದ ಶ್ರೀಮಂತ ದೇವಾಲಯಗಳಲ್ಲೊಂದು. ಈ ದೇವಾಲಯಕ್ಕೆ ಸಾಕಷ್ಟು ಭದ್ರತೆ ಒದಗಿಸಿದ್ದರೂ ಭದ್ರತೆಯ ವಿಚಾರದಲ್ಲಿ ಸಾಕಷ್ಟು ಲೋಪದೋಷಗಳಿವೆ.
ಶಿವಸೇನೆಯ ಕಚೇರಿ ಸಹಿತ ದೇವಾಲಯದ ಆಸುಪಾಸಿನಲ್ಲಿರುವ ಸುಮಾರು 36 ಕಟ್ಟಡಗಳನ್ನು ತೆರವುಗೊಳಿಸುವುದು ಸೂಕ್ತ ಎಂದು ಗೋಪಾಲ್ ಸುಬ್ರಮಣ್ಯಂ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications