ಕೋಟಿಗಟ್ಟಲೆ ಇನ್ಫಿ ಷೇರು ಮಾರಿದ ರೋಹಿಣಿ
ಬೆಂಗಳೂರು, ಆ.4: ಇನ್ಫೋಸಿಸ್ ನ ಸಹ ಸಂಸ್ಥಾಪಕ ನಂದನ್ ನೀಲೇಕಣಿ ಅವರ ಪತ್ನಿ ರೋಹಿಣಿ ನಿಲೇಕಣಿ ಅವರು ದಾನ ಧರ್ಮಗಳಿಗಾಗಿ ತಮ್ಮ ಬಳಿ ಇದ್ದ 5.77 ಲಕ್ಷ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಈ ಮೂಲಕ ಸಂಗ್ರಹಿಸಿದ 163.58 ಕೋಟಿಯನ್ನು ಸಮಾಜಸೇವೆಗಾಗಿ ವಿನಿಯೋಗಿಸುವುದಾಗಿ ಹೇಳಿದ್ದಾರೆ.
ರೋಹಿಣಿ ನೀಲೇಕಣಿ ಜು.16ರಿಂದ 19ರ ನಡುವೆ ಷೇರುಗಳನ್ನು [ಒಟ್ಟು ಮೊತ್ತ 163,51,83,925 ರು] ಮಾರಾಟ ಮಾಡಿದ್ದಾರೆ. ಇದರಿಂದಾಗಿ ಇನ್ನು ಮುಂದೆ ಇನ್ಫೋಸಿಸ್ ನಲ್ಲಿ ರೋಹಿಣಿ ಅವರು ಹೊಂದಿರುವ ಷೇರುಗಳ ಪ್ರಮಾಣ ಶೇ. 1.31ಕ್ಕೆ ಕುಸಿದಿದೆ.

ಕಳೆದ ಹಲವು ವರ್ಷಗಳಿಂದ ಶಿಕ್ಷಣ, ನೀರು, ಪರಿಸರ ಮತ್ತು ಆಡಳಿತ ಕ್ಷೇತ್ರದ ಬೆಳವಣಿಗೆಗೆ ದಾನ ನೀಡುತ್ತಿದ್ದೇನೆ. ಈ ಹಿನ್ನೆಲೆಯಲ್ಲಿ ಈ ಷೇರುಗಳನ್ನು ಮಾರಾಟ ಮಾಡುತ್ತಿರುವುದಾಗಿ ರೋಹಿಣಿ ನೀಲೇಕಣಿ ಅವರು ಬಿಎಸ್ ಇಗೆ ತಿಳಿಸಿದ್ದಾರೆ.
ಷೇರುಗಳ ಮಾರಾಟ ನಂತರ ರೋಹಿಣಿ ಅವರ ಬಳಿ ಇರುವ ಷೇರುಗಳ ಪ್ರಮಾಣ ಶೇ 1.31ರಷ್ಟು ಅಥವಾ 75,01,174 ಷೇರುಗಳಿಗೆ ಕುಸಿದಿದೆ. ಜೂ .30ರ ಗಣತಿಯಂತೆ ರೋಹಿಣಿ ಅವರ ಬಳಿ 80,78,174 ಷೇರುಗಳಿತ್ತು.
1981ರಲ್ಲಿ ಎನ್ಆರ್ ನಾರಾಯಣ ಮೂರ್ತಿ ಜೊತೆ ನಂದನ್ ನಿಲೇಕಣಿ ಸೇರಿ 7 ಜನ ಇಂಜಿನಿಯರ್ ಗಳು ಇನ್ಫೋಸಿಸ್ ಸ್ಥಾಪಿಸಿದರು. ರೋಹಿಣಿ ಅವರು ನಂದನ್ ಅವರ ಪತ್ನಿ. ಜೂ .30ರ ಗಣತಿಯಂತೆ ನಂದನ್ ಅವರ ಬಳಿ 83.45,870 ಷೇರುಗಳಿದೆ.
ಐಐಟಿ ಕ್ವಿಜ್ ಕಾರ್ಯಕ್ರಮವೊಂದರಲ್ಲಿ ರೋಹಿಣಿ ಅವರನ್ನು ಕಂಡು ಮೆಚ್ಚಿ ನಂದನ್ ನಿಲೇಕಣಿ ಮದುವೆಯಾಗಿದ್ದರು. ದಂಪತಿಗೆ ನಿಹಾರ್ ಹಾಗೂ ಜಾಹ್ನವಿ ಎಂಬ ಮಕ್ಕಳಿದ್ದಾರೆ. ರೋಹಿಣಿ ಅವರು 'ಆರ್ಘ್ಯಂ' ಎಂಬ ಸಾರ್ವಜನಿಕ ದತ್ತಿ ಸಂಸ್ಥೆಯ ಸ್ಥಾಪಕರಾಗಿದ್ದಾರೆ. ಈ ಸಂಸ್ಥೆ ಜಲ ನಿರ್ವಹಣೆ ಹಾಗೂ ಬಡ ಶೋಷಿತ ವರ್ಗಗಳಿಗೆ ಕುಡಿಯುವ ನೀರು ಒದಗಿಸುವ ಕಾರ್ಯ ನಿರ್ವಹಿಸುತ್ತಿದೆ.
ರೋಹಿಣಿ ನಿಲೇಕಣಿ ಅವರಂತೆ ವಿಪ್ರೋ ಚೇರ್ಮನ್ ಅಜೀಂ ಪ್ರೇಮ್ ಜಿ ಅವರು ಕೂಡಾ ಇತ್ತೀಚೆಗೆ ತಮ್ಮ ಪಾಲಿನ ಆಸ್ತಿಯ ಹೆಚ್ಚು ಭಾಗ ದಾನ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications