ಕೋಟಿಗಟ್ಟಲೆ ಇನ್ಫಿ ಷೇರು ಮಾರಿದ ರೋಹಿಣಿ
ಬೆಂಗಳೂರು, ಆ.4: ಇನ್ಫೋಸಿಸ್ ನ ಸಹ ಸಂಸ್ಥಾಪಕ ನಂದನ್ ನೀಲೇಕಣಿ ಅವರ ಪತ್ನಿ ರೋಹಿಣಿ ನಿಲೇಕಣಿ ಅವರು ದಾನ ಧರ್ಮಗಳಿಗಾಗಿ ತಮ್ಮ ಬಳಿ ಇದ್ದ 5.77 ಲಕ್ಷ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಈ ಮೂಲಕ ಸಂಗ್ರಹಿಸಿದ 163.58 ಕೋಟಿಯನ್ನು ಸಮಾಜಸೇವೆಗಾಗಿ ವಿನಿಯೋಗಿಸುವುದಾಗಿ ಹೇಳಿದ್ದಾರೆ.
ರೋಹಿಣಿ ನೀಲೇಕಣಿ ಜು.16ರಿಂದ 19ರ ನಡುವೆ ಷೇರುಗಳನ್ನು [ಒಟ್ಟು ಮೊತ್ತ 163,51,83,925 ರು] ಮಾರಾಟ ಮಾಡಿದ್ದಾರೆ. ಇದರಿಂದಾಗಿ ಇನ್ನು ಮುಂದೆ ಇನ್ಫೋಸಿಸ್ ನಲ್ಲಿ ರೋಹಿಣಿ ಅವರು ಹೊಂದಿರುವ ಷೇರುಗಳ ಪ್ರಮಾಣ ಶೇ. 1.31ಕ್ಕೆ ಕುಸಿದಿದೆ.

ಕಳೆದ ಹಲವು ವರ್ಷಗಳಿಂದ ಶಿಕ್ಷಣ, ನೀರು, ಪರಿಸರ ಮತ್ತು ಆಡಳಿತ ಕ್ಷೇತ್ರದ ಬೆಳವಣಿಗೆಗೆ ದಾನ ನೀಡುತ್ತಿದ್ದೇನೆ. ಈ ಹಿನ್ನೆಲೆಯಲ್ಲಿ ಈ ಷೇರುಗಳನ್ನು ಮಾರಾಟ ಮಾಡುತ್ತಿರುವುದಾಗಿ ರೋಹಿಣಿ ನೀಲೇಕಣಿ ಅವರು ಬಿಎಸ್ ಇಗೆ ತಿಳಿಸಿದ್ದಾರೆ.
ಷೇರುಗಳ ಮಾರಾಟ ನಂತರ ರೋಹಿಣಿ ಅವರ ಬಳಿ ಇರುವ ಷೇರುಗಳ ಪ್ರಮಾಣ ಶೇ 1.31ರಷ್ಟು ಅಥವಾ 75,01,174 ಷೇರುಗಳಿಗೆ ಕುಸಿದಿದೆ. ಜೂ .30ರ ಗಣತಿಯಂತೆ ರೋಹಿಣಿ ಅವರ ಬಳಿ 80,78,174 ಷೇರುಗಳಿತ್ತು.
1981ರಲ್ಲಿ ಎನ್ಆರ್ ನಾರಾಯಣ ಮೂರ್ತಿ ಜೊತೆ ನಂದನ್ ನಿಲೇಕಣಿ ಸೇರಿ 7 ಜನ ಇಂಜಿನಿಯರ್ ಗಳು ಇನ್ಫೋಸಿಸ್ ಸ್ಥಾಪಿಸಿದರು. ರೋಹಿಣಿ ಅವರು ನಂದನ್ ಅವರ ಪತ್ನಿ. ಜೂ .30ರ ಗಣತಿಯಂತೆ ನಂದನ್ ಅವರ ಬಳಿ 83.45,870 ಷೇರುಗಳಿದೆ.
ಐಐಟಿ ಕ್ವಿಜ್ ಕಾರ್ಯಕ್ರಮವೊಂದರಲ್ಲಿ ರೋಹಿಣಿ ಅವರನ್ನು ಕಂಡು ಮೆಚ್ಚಿ ನಂದನ್ ನಿಲೇಕಣಿ ಮದುವೆಯಾಗಿದ್ದರು. ದಂಪತಿಗೆ ನಿಹಾರ್ ಹಾಗೂ ಜಾಹ್ನವಿ ಎಂಬ ಮಕ್ಕಳಿದ್ದಾರೆ. ರೋಹಿಣಿ ಅವರು 'ಆರ್ಘ್ಯಂ' ಎಂಬ ಸಾರ್ವಜನಿಕ ದತ್ತಿ ಸಂಸ್ಥೆಯ ಸ್ಥಾಪಕರಾಗಿದ್ದಾರೆ. ಈ ಸಂಸ್ಥೆ ಜಲ ನಿರ್ವಹಣೆ ಹಾಗೂ ಬಡ ಶೋಷಿತ ವರ್ಗಗಳಿಗೆ ಕುಡಿಯುವ ನೀರು ಒದಗಿಸುವ ಕಾರ್ಯ ನಿರ್ವಹಿಸುತ್ತಿದೆ.
ರೋಹಿಣಿ ನಿಲೇಕಣಿ ಅವರಂತೆ ವಿಪ್ರೋ ಚೇರ್ಮನ್ ಅಜೀಂ ಪ್ರೇಮ್ ಜಿ ಅವರು ಕೂಡಾ ಇತ್ತೀಚೆಗೆ ತಮ್ಮ ಪಾಲಿನ ಆಸ್ತಿಯ ಹೆಚ್ಚು ಭಾಗ ದಾನ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications