ನಟ ರಜನಿಕಾಂತ್ ರಾಜಕೀಯ ಎಂಟ್ರಿ ಏನಾಯ್ತು?
ಬೆಂಗಳೂರು, ಆಗಸ್ಟ್ 6: ದಕ್ಷಿಣ ಭಾರತದ ಸೂಪರ್ ಸ್ಟಾರ್, ಕನ್ನಡಿಗ ರಜನಿಕಾಂತ್ ಅವರ ಇಬ್ಬರು ಅತ್ಯಾಪ್ತ ಮಿತ್ರರು ಇತ್ತೀಚೆಗೆ ನಮ್ಮ ಒನ್ಇಂಡಿಯಾ ಕಚೇರಿಗೆ ಭೇಟಿ ನೀಡಿದ್ದರು.
ಗೆಳೆಯರಾದ ಬಿಟಿಎಸ್ ಡ್ರೈವರ್ ರಾಜ್ ಬಹಾದ್ದೂರ್ ಮತ್ತು ಗೋಪಿನಾಥ್ ರಾವ್ ಅವರು ನಟ ರಜನಿಕಾಂತ್ ಅವರ ಬಗ್ಗೆ ಸಾಕಷ್ಟು ಮಾತನಾಡಿದರು. ಮುಖ್ಯವಾಗಿ ರಜನಿಕಾಂತ್ ರಾಜಕೀಯಕ್ಕೆ ಬರುವುದು ಯಾವಾಗ ಎಂಬ ಪ್ರಶ್ನೆ ಕೇಳೀದ್ದೇ ತಡ ರಾಜ್ ಬಹಾದ್ದೂರ್ ಅವರಂತೂ ತುಸು ಸಿಟ್ಟಿಗೆದ್ದರು. ಯಾಕೆ ಸ್ವಾಮಿ ಅವರು ಈಗ ಮಾನ/ಮರ್ಯಾದೆ/ ನೆಮ್ಮದಿಯಿಂದ ಬಾಳುತ್ತಿರುವುದು ಬೇಡವಾ.
ಸೂಪರ್ ಸ್ಟಾರ್ ರಜನಿಕಾಂತ್ ಅವರ ಅಪರೂಪದ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ...

ರಾಜಕೀಯಕ್ಕೆ ಬಂದು ಶಿವಾಜಿ (ರಜನಿಕಾಂತ್ ಅವರನ್ನು ಶಿವಾಜಿ ಅಂತಲೇ ಜೋಡಿ ಸಂಬೋಧಿಸುವುದು) ಅದನ್ನೆಲ್ಲಾ ಕಳೆದುಕೊಳ್ಳಬೇಕಾ? ಅಪರೂಪಕ್ಕೆ ಸಿಕ್ಕಿದಾಗಲೆಲ್ಲ ಅವನೇ ಕೇಳುತ್ತಿರುತ್ತಾನೆ? ಏನ್ರೋ ನಾನು ರಾಜಕೀಯಕ್ಕೆ ಸೇರಿಕೊಳ್ಳಲಾ ಅಂತ. ಆದರೆ ನಾವು ಕಡ್ಡಿಮುರಿದಂತೆ ಸ್ಪಷ್ಟವಾಗಿ ಹೇಳಿದ್ದೇವೆ. ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಬರಬಾರದು.
ಮತ್ತು ಜೀವನುದ್ದಕ್ಕೂ ಶ್ರಮಪಟ್ಟು ಗಳಿಸಿಕೊಂಡು ಬಂದಿರುವ ಮಾನ/ಮರ್ಯಾದೆ/ ನೆಮ್ಮದಿಯನ್ನು ಹಾಳು ಮಾಡಿಕೊಳ್ಳಬೇಡವೋ ಎಂದು ತಿಳಿಯಹೇಳುತ್ತೇವೆ. ಅದಕ್ಕೆ ರಜನಿ ಅವನದೇ ಸ್ಟೈಲಿನಲ್ಲಿ ಕುಹಕ ನಗೆ ನಕ್ಕು ಸುಮ್ಮನಾಗುತ್ತಾನೆ. ಆದರೂ ಅವನು ಯಾವಾಗ ಏನು ಮಾಡುತ್ತಾನೋ ಗೊತ್ತಾಗೋದೇ ಇಲ್ಲ ಎಂದು ಗೆಳೆಯನ ರಾಜಕೀಯ ಆರಂಗೇಟ್ರಂ ಬಗ್ಗೆ ರಾಜ್ ಬಹಾದ್ದೂರ್ ಮತ್ತು ಗೋಪಿನಾಥ್ ಹೇಳುತ್ತಾರೆ. ಕಾಲಾಯತಸ್ಮೈನಮಃ!
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications