ತೆಲಂಗಾಣ ಪ್ರತಿಭಟನೆ, ಕೆಎಸ್ಆರ್ ಟಿಸಿಗೆ ನಷ್ಟ

ಆಂಧ್ರಪ್ರದೇಶದಲ್ಲಿ ತೆಲಂಗಾಣ ರಾಜ್ಯ ರಚನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ ತಕ್ಷಣ ಪ್ರತಿಭಟನೆಗಳು ಪ್ರಾರಂಭವಾಗಿವೆ. ರಾಯಲಸೀಮೆ ಮತ್ತು ಇತರ ಪ್ರದೇಶಗಳಿಗೆ ತೆರಳುವ ಬಸ್ ಸಂಪರ್ಕವನ್ನು ಕೆಎಸ್ಆರ್ ಟಿಸಿ ಸ್ಥಗಿತಗೊಳಿಸಿದೆ. ಇದರಿಂದ ನಷ್ಟ ಉಂಟಾಗುತ್ತಿದೆ.
ನೆರೆಯ ಆಂಧ್ರಪ್ರದೇಶದ ಹೈದರಾಬಾದ್, ತಿರುಪತಿ, ವಿಶಾಖಪಟ್ಟಣ ಸೇರಿದಂತೆ ಪ್ರಮಖ ನಗರಗಳಿಗೆ ತೆರಳುವ ವೋಲ್ವೋ ಸೇರಿದಂತೆ ಕೆಎಸ್ಆರ್ ಟಿಸಿಯ ಹೈಟೆಕ್ ಬಸ್ ಗಳ ಸಂಚಾರ ಸ್ಥಗಿತಗೊಂಡಿದೆ. ಇದರಿಂದಾಗಿ ದಿನಕ್ಕೆ ಸುಮಾರು 40 ಲಕ್ಷ ರೂ.ಗಳ ನಷ್ಟ ಉಂಟಾಗುತ್ತಿದೆ.
ಜು.31ರಂದು ಆಂಧ್ರಪ್ರದೇಶದಲ್ಲಿ ಪ್ರತಿಭಟನೆಗಳು ಪ್ರಾರಂಭವಾದ ತಕ್ಷಣ ಎಲ್ಲಾ ಬಸ್ ಸೇವೆಗಳನ್ನು ಕೆಎಸ್ಆರ್ ಟಿಸಿ ಸ್ಥಗಿತಗೊಳಿಸಿತ್ತು. ಸದ್ಯ ಪ್ರತಿಭಟನೆ ಕಡಿಮೆ ಇರುವ ಪ್ರದೇಶಗಳಿಗೆ ಬಸ್ ಸಂಚಾರ ಪ್ರಾರಂಭಿಸಲಾಗಿದೆ. ಆದರೆ, ಹೈಟೆಕ್ ಬಸ್ ಗಳ ಸಂಚಾರ ಪ್ರಾರಂಭಿಸಿಲ್ಲ.
ಕೆಎಸ್ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಮಂಜುನಾಥ್ ಪ್ರಸಾದ್ ಹೇಳುವಂತೆ, ದಿನದಿಂದ ದಿನಕ್ಕೆ ಸಂಸ್ಥೆಗೆ ನಷ್ಟ ಹೆಚ್ಚಾಗುತ್ತಿದೆ. ಜು.31ರಿಂದ ಇದುವರೆಗೂ ಸಂಸ್ಥೆ ಸುಮಾರು 2 ಕೋಟಿ ರೂ.ಗಳ ನಷ್ಟ ಅನುಭವಿಸಿದೆ ಎಂದು ಮಾಹಿತಿ ನೀಡುತ್ತಾರೆ. (ತೆಲಂಗಾಣ ರಾಜ್ಯ ರಚನೆಗೆ ಯುಪಿಎ ಒಪ್ಪಿಗೆ)
ಆಂಧ್ರಪ್ರದೇಶದಲ್ಲಿ ಪರಿಸ್ಥಿತಿ ತಿಳಿಗೊಳ್ಳವ ತನಕ ಬಸ್ ಸಂಚಾರ ಆರಂಭಿಸಬಾರದು ಎಂದು ಸಂಸ್ಥೆ ತೀರ್ಮಾನಿಸಿದೆ. ಆಂಧ್ರದಲ್ಲಿ ಪ್ರತಿಭಟನೆ ಕಾವು ಇನ್ನೂ ಇಳಿದಿಲ್ಲ. ಆದ್ದರಿಂದ ಸಂಸ್ಥೆಗೆ ನಷ್ಟವಾಗುತ್ತಿದೆ.
ಬಸ್ ಸಂಚಾರ ಪ್ರಾರಂಭಿಸಿದರೆ ಪ್ರತಿಭಟನೆಯಲ್ಲಿ ಪ್ರಯಾಣಿಕರು ಸಿಲುಕಬಹುದು ಮತ್ತು ಬಸ್ ಗಳಿಗೆ ಹಾನಿ ಉಂಟಾಗಬಹುದು ಎಂಬುದು ಸಂಸ್ಥೆಯ ಕಾಳಜಿ. ಆದ್ದರಿಂದ ಬಸ್ ಗಳ ಸಂಚಾರ ಆರಂಭಿಸಿಲ್ಲ. ಇದರಿಂದ ಸಾಕಷ್ಟು ನಷ್ಟ ಉಂಟಾಗುತ್ತಿದೆ.
ಮಂತ್ರಾಲಯ ಭಕ್ತರ ಪರದಾಟ : ರಾಯಚೂರು ಜಿಲ್ಲೆಯ 7 ಡಿಪೋಗಳಿಂದ ಮಂತ್ರಾಲಯಕ್ಕೆ ಹೋಗುವ 19 ಬಸ್ ಗಳ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಮಂತ್ರಾಲಯಕ್ಕೆ ಹೋಗುವ ಭಕ್ತರು ದುಬಾರಿ ಬೆಲೆ ತೆತ್ತು ಖಾಸಗಿ ವಾಹನಗಳಲ್ಲಿ ಪ್ರಯಾಣಿಸಬೇಕಾಗಿದೆ.
ಕರ್ನೂಲ್, ಮಂತ್ರಾಲಯ, ಆದೋನಿ, ಎಮ್ಮಿಗನೂರು, ಉರುಕುಂದ, ಶ್ರೀಶೈಲಂ ಮುಂತಾದ ಸ್ಥಳಗಳಿಗೆ ತೆರಳುವ 60 ಬಸ್ ಗಳು ರಾಯಚೂರು ಡಿಪೋದಲ್ಲಿ 6 ದಿನಗಳಿಂದ ನಿಂತಿವೆ ಇದರಿಂದಲೂ ಕೆಎಸ್ಆರ್ ಟಿಸಿಗೆ ಸುಮಾರು 2 ಲಕ್ಷ ರೂ. ನಷ್ಟವಾಗುತ್ತಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications