ಶಿಕ್ಷಣ ತಜ್ಞ ಕುರುಂಜಿ ವೆಂಕಟರಮಣ ಗೌಡ ಇನ್ನಿಲ್ಲ

ಆಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಮೂಲಕ ಕೆವಿಜಿ ವಿದ್ಯಾಸಂಸ್ಥೆಗಳ ಸಮೂಹ ಹುಟ್ಟು ಹಾಕಿ ಶಿಕ್ಷಣ ಕ್ಷೇತ್ರದಲ್ಲಿ ವೆಂಕಟರಮಣ ಗೌಡ ಅವರು ಹೊಸ ಕ್ರಾಂತಿ ಮಾಡಿದರು. ಪ್ರಾಥಮಿಕ ಶಿಕ್ಷಣ, ತಾಂತ್ರಿಕ, ಆಯುರ್ವೇದ, ಡೆಂಟಲ್ ಹಾಗೂ ಮೆಡಿಕಲ್ ಕಾಲೇಜುಗಳನ್ನು ಸ್ಥಾಪಿಸಿದರು. ಶಿಕ್ಷಣದಿಂದ ಮಾನವ ಪರಿಪೂರ್ಣತೆ ಹೊಂದಲು ಸಾಧ್ಯ. 'ಜ್ಞಾನಂ ಸರ್ವತ್ರ ಸಾಧನಂ' ಎಂಬ ತತ್ತದಡಿಯಲ್ಲಿ ವಿದ್ಯಾಸಂಸ್ಥೆಗಳನ್ನು ಬೆಳೆಸಿಕೊಂಡು ಬಂದವರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಡಿಯಲಿ ಕೆವಿಜಿ ಕಾಲೇಜ್ ಆಫ್ ಇಂಜಿನಿಯರ್ ಈಗ ಮೆಕ್ಯಾನಿಕಲ್, ಕೆಮಿಕಲ್ ಸೇರಿದಂತೆ ಹಲವು ವಿಭಾಗಗಳಲ್ಲಿ ಸಂಶೋಧನಾ ಕೇಂದ್ರವಾಗಿ ಬೆಳೆದಿದೆ. ಸಾವಿರಾರು ವಿದ್ಯಾರ್ಥಿಗಳು ಕೆವಿಜಿ ವಿದ್ಯಾಸಂಸ್ಥೆಯಿಂದ ಪ್ರಗತಿ ಹೊಂದಿದ್ದಾರೆ. ನವದೆಹಲಿ ಹಾಗೂ ಬೆಂಗಳೂರು ಸೇರಿದಂತೆ 40ಕ್ಕೂ ಅಧಿಕ ವಿದ್ಯಾಸಂಸ್ಥೆಗಳನ್ನು ಸ್ಥಾಪಿಸಿದ್ದಾರೆ. ಅನೇಕ ಕಡೆ ಪ್ರತಿಭಾವಂತರನ್ನು ಗುರುತಿಸಿ ಉದ್ಯೋಗ ಒದಗಿಸಿದ್ದಾರೆ.
ತಾಲೂಕಿನಲ್ಲಿರುವ ನೂರಕ್ಕೂ ಅಧಿಕ ಮಹಿಳಾ ಕ್ಲಬ್ ಗಳಿಗೆ ಆರ್ಥಿಕ ನೆರವು ನೀಡುತ್ತಾ ಬಂದಿದ್ದಾರೆ. ದಿನಕ್ಕೆ ಸುಮಾರು 18 ಗಂಟೆಗಳ ಕಾಲ ಕಾರ್ಯ ನಿರತರಾಗಿದ ಕೆವಿಜಿ ಅವರು ಗಾಂಧೀಜಿ ಸಿದ್ಧಾಂತ ಪ್ರತಿಪಾದಕರಾಗಿದ್ದವರು. ಶಿಕ್ಷಣದ ಮೂಲಕ ಸುಳ್ಯದ ಚಿತ್ರಣವನ್ನೇ ಬದಲಾಯಿಸಿದವರು.
ಯುಎಸ್ಎನ ಫೋರಿಡಾ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್, ರಾಜೀವ್ ಗಾಂಧಿ ಏಕತಾ ಪ್ರಶಸ್ತಿ, ಪರಿಸರ ರತ್ನ ಪ್ರಶಸ್ತಿ, ವಿಕಾಸ್ ಜ್ಯೋತಿ ಪ್ರಶಸ್ತಿ, ಇಂದಿರಾಗಾಂಧಿ ಸದ್ಭಾವನಾ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಉಡುಪಿ ಮನುಕುಲ ಭೂಷಣ, ಅಂತಾರಾಷ್ಟ್ರೀಯ ಗೋಲ್ಡ್ ಸ್ಟಾರ್ ಮಿಲೇನಿಯಂ ಪ್ರಶಸ್ತಿ, ಮದರ್ ಎಕ್ಸ್ ಲೆನ್ಸ್, ನೇಪಾಳ್ ಫ್ರೆಂಡ್ ಶಿಪ್, ರಾಷ್ಟ್ರೀಯ ರತ್ನ ಸೇರಿದಂತೆ ಅನೇಕ ಪ್ರಶಸ್ತಿಗಳು ವೆಂಕಟರಮಣ ಗೌಡ ಅವರನ್ನು ಹುಡುಕಿಕೊಂಡು ಬಂದಿತ್ತು.
2012ರಲ್ಲಿ ಪತ್ನಿ ಜಾನಕಿ ಅವರನ್ನು ಕಳೆದುಕೊಂಡಿದ್ದ ಕುರುಂಜಿ ವೆಂಕಟರಮಣ ಗೌಡರು ಪುತ್ರರಾದ ಡಾ. ಕೆವಿ ಚಿದಾನಂದ, ಡಾ. ರೇಣುಕಾ ಪ್ರಸಾದ್, ಪುತ್ರಿ ಗೋವರ್ಧಿನಿ ಜಯಕುಮಾರ್ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications