ಪತ್ನಿಯ ಕಾಟ: 2 ಮಕ್ಕಳ ಕೆಎಎಸ್ ಅಧಿಕಾರಿ ಆತ್ಮಹತ್ಯೆ

ಶಿಡ್ಲಘಟ್ಟ ಉಪ ಖಜಾನೆ ಅಧಿಕಾರಿ ರವಿಕುಮಾರ್ (32) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಪತ್ನಿಯ ಸತತ ಕಿರುಕುಳವೇ ರವಿ ಅವರ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಕೋಲಾರ ನಗರ ಪೊಲೀಸರು ರವಿ ಪತ್ನಿ ಸುಕನ್ಯಾರನ್ನು ಬಂಧಿಸಿದ್ದಾರೆ.
ಡೆತ್ ನೋಟ್ ಬರೆದಿಟ್ಟಿರುವ ರವಿಕುಮಾರ್ ಅವರು ಪತ್ನಿಯ ಸತತ ಕಿರುಕುಳದ ಬಗ್ಗೆ ಅಪಾರ ದುಃಖ ತೋಡಿಕೊಂಡಿದ್ದಾರೆ. ರವಿಕುಮಾರ್, ಮೂಲತಃ ಚಿಂತಾಮಣಿ ತಾಲೂಕಿನ ಸಿಕಲ್ಲು ಗ್ರಾಮದವರು. ಇವರು ಕೋಲಾರದ ಕಾರಂಜಿಕಟ್ಟೆಯಲ್ಲಿ ಪತ್ನಿ ಸುಕನ್ಯಾ, ಮಗ ಧನುಷ್, ಮಗಳು ಸಿಂಚನಾಳೊಂದಿಗೆ ನೆಲೆಸಿದ್ದರು.
ಪತ್ನಿ ಸುಕನ್ಯಾ ಜತೆ ಚಿಂತಾಮಣಿಗೆ ತೆರಳಿದ್ದ ರವಿಕುಮಾರ್ ಮಂಗಳವಾರ ಕೋಲಾರಕ್ಕೆ ಹಿಂದುರಿಗಿದ್ದರು. ಸುಕನ್ಯಾ ಮಾತ್ರ ತವರು ಮನೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದರು.
ಮನೆಗೆ ಬಂದ ರವಿಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುಕನ್ಯಾ ಮನೆಗೆ ಹಿಂದಿರುಗಿದಾಗ ಮಕ್ಕಳು ಶಾಲೆಯಿಂದ ಬಂದು ಮನೆ ಮುಂದೆ ಕಾಯುತ್ತಿದ್ದರು. ಬಾಗಿಲು ಬಡಿದರೂ ತೆರೆಯದಾಗ, ಫೋನ್ ಮಾಡಿದರೂ ರಿಸೀವ್ ಮಾಡದ ರವಿಕುಮಾರ್ ಬಗ್ಗೆ ಅನುಮಾನಗೊಂಡು ಅಕ್ಕಪಕ್ಕದವರ ಸಹಾಯದಿಂದ ಬಾಗಿಲು ಹೊಡೆದು ನೋಡಿದಾಗ ಆತ್ಮಹತ್ಯೆ ಬೆಳಕಿಗೆ ಬಂದಿದೆ.
ಸುಕನ್ಯಾಗೆ ಅಕ್ರಮ ಸಂಬಂಧವಿತ್ತು. ಈ ಸಂಬಂಧ ಆಗಾಗ ಇಬ್ಬರ ಮಧ್ಯೆ ಜಗಳಗಳು ಆಗುತ್ತಿದ್ದವು. ಇದರಿಂದ ನಿರುಪದ್ರವಿ ರವಿ ಕುಡಿತದ ಚಟ ಅಂಟಿಸಿಕೊಂಡಿದ್ದ. ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ರವಿ ಅವರ ತಂದೆ ರಾಮಚಂದ್ರಪ್ಪ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಹಿಂದೆ ಇವರು ಕೋಲಾರದಲ್ಲಿ CARನಲ್ಲಿ 10 ವರ್ಷ ಕಾಲ ಪೊಲೀಸ್ ಪೇದೆಯಾಗಿ ಸೇವೆ ಸಲ್ಲಿಸಿದ್ದರು. 2010ರಲ್ಲಿ ಕೆಎಎಸ್ ಪರೀಕ್ಷೆ ಪಾಸು ಮಾಡಿ, ಶಿಡ್ಲಘಟ್ಟ ಉಪ ಖಜಾನೆಯಲ್ಲಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications