ನಾಯಂಡಹಳ್ಳಿಯಲ್ಲಿ ಭೀಕರ ಅಪಘಾತ, ನಾಲ್ಕು ಸಾವು

ಬೈಕ್ ಸವಾರನನ್ನು ಸಿದ್ದರಾಜು ಎಂದು ಗುರುತಿಸಲಾಗಿದ್ದು, ಅವರ ಪತ್ನಿ ಮತ್ತು ಇಬ್ಬರು ಮಕ್ಕಳು ಸಾವಿಗೀಡಾಗಿದ್ದಾರೆ. ಸಿದ್ದರಾಜು, ಅವರ ಹೆಂಡತಿ ಮತ್ತು ಒಬ್ಬ ಮಗ ಸ್ಥಳದಲ್ಲೇ ಮೃತರಾಗಿದ್ದರೆ, ಮತ್ತೊಬ್ಬ ಮಗ ಆಸ್ಪತ್ರೆಗೆ ಸಾಗಿಸುವಾಗ ಸಾವಿಗೀಡಾಗಿದ್ದಾನೆ. ಸಿದ್ದರಾಜು ಅವರು ಕೆ.ಎಂ. ದೊಡ್ಡಿಯ ಮೂಲದವರು ಎಂದು ತಿಳಿದುಬಂದಿದೆ.
ಸಿಗ್ನಲ್ ಇಲ್ಲದ ನಾಯಂಡಹಳ್ಳಿ ಜಂಕ್ಷನ್ ನಲ್ಲಿ ಪೊಲೀಸರ ಅಣತಿಗಾಗಿ, ಜ್ಞಾನಭಾರತಿ ಕಡೆಯಿಂದ ಬರುತ್ತಿದ್ದ ಸಿದ್ದರಾಜು ತಮ್ಮ ಬೈಕ್ ನಿಲ್ಲಿಸಿದಾಗ, ಹಿಂದಿನಿಂದ ವೇಗವಾಗಿ ಬಂದ ಕ್ಯಾಂಟರ್ ಬೈಕ್ ಮೇಲೆ ಏರಿಸಿಬಿಟ್ಟಿದ್ದಾನೆ. ನಂತರ ಕ್ಯಾಂಟರ್ ಮಾರುತಿ ಓಮ್ನಿಗೂ ಡಿಕ್ಕಿ ಹೊಡೆದಿದೆ. ನೂರು ಅಡಿಗಳಷ್ಟು ಸಾಗಿದ ಕ್ಯಾಂಟರ್ ಮುಗುಚಿಬಿದ್ದಿದೆ. ಅಪಘಾತ ಸಂಭವಿಸುತ್ತಿದ್ದಂತೆ ಬಿದ್ದ ಕ್ಯಾಂಟರ್ ನಿಂದ ಚಾಲಕ ಪರಾರಿಯಾಗಿದ್ದಾನೆ.
ಅಪಘಾತದ ದೃಶ್ಯ ಎಷ್ಟು ಭೀಕರವಾಗಿತ್ತೆಂದರೆ, ಅಪಘಾತಕ್ಕೀಡಾದವರ ಅವಯವಗಳು, ಹೆಲ್ಮೆಟ್ ಮತ್ತಿತರ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಅದೃಷ್ಟವಶಾತ್ ವ್ಯಾನ್ ನಲ್ಲಿ ಇದ್ದವರಿಗೆ ಯಾವುದೇ ಗಾಯವಾಗಿಲ್ಲ. ಅಪಘಾತ ಸಂಭವಿಸಿದ ನಂತರ ಮೈಸೂರು ರಸ್ತೆಯಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಅಪಘಾತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಹೆಚ್ಚುವರಿ ಆಯುಕ್ತ ದಯಾನಂದ್ ಅವರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಕ್ಯಾಂಟರ್ ಬ್ರೇಕ್ ಫೇಲ್ ಆಗಿರಬಹುದು ಎಂದು ಶಂಕಿಸಲಾಗಿದೆ. ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮೃತರ ದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಸಂಬಂಧಿಕರ ಆಗಮನಕ್ಕಾಗಿ ಪೊಲೀಸರು ಕಾಯುತ್ತಿದ್ದಾರೆ. [ಮೈಸೂರು ರಸ್ತೆಯಲ್ಲಿನ ಕಿತ್ತುಹೋದ ರಸ್ತೆ]
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications