ಕೈಬಿಟ್ಟು ಸೈಕಲ್ ತುಳಿಯುತ್ತಿರುವ ಬಿದರಿ: ಒಂದು ಝಲಕ್
ಬೆಂಗಳೂರು, ಅಗಸ್ಟ್ 12: ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಮಾಜಿ ಪೊಲೀಸ್ ಅಧಿಕಾರಿ, ಸಾಕಷ್ಟು ಅಳೆದೂ ಸುರಿದೂ ಇತ್ತೀಚೆಗಷ್ಟೇ ಕಾಂಗ್ರೆಸ್ ಕೈಹಿಡಿದಿದ್ದ ಶಂಕರ್ ಮಹಾದೇವ ಬಿದರಿ ಅವರು ಕಾಂಗ್ರೆಸ್ ಕೈ ಬಿಟ್ಟು ಇಂದೇ ಸಮಾಜವಾದಿ ಪಕ್ಷ ಸೇರ್ಪಡೆಯಾಗಲು ಇದೀಗತಾನೆ ಲಖ್ನೋ ವಿಮಾನವೇರಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ಜತೆಗಿನ ಅವರ 5 ತಿಂಗಳ ಸಖ್ಯ ಕೊನೆಗೊಂಡಿದೆ.

ಇದೇ ವೇಳೆ ಸಮಾಜವಾದಿ ಪಕ್ಷದ ಹಾಲಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಸಿಪಿ ಯೋಗೀಶ್ವರ್ ಅವರು ಕಾಂಗ್ರೆಸ್ ಸೇರುತ್ತಾರೆಂಬ ಊಹಾಪೋಹಕ್ಕೆ ತೆರೆ ಎಳೆದಿದ್ದು, ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಅವರನ್ನು ಖುದ್ದು ತಾವೇ ಲಖ್ನೋಗೆ ಕರೆದುಕೊಂಡು ಹೋಗುತ್ತಿದ್ದಾರೆ. ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅವರೂ ಸಹ ಇವರಿಬ್ಬರಿಗೂ ಸಾಥ್ ನೀಡಿದ್ದಾರೆ.
'ಪುಟಗೋಸಿ ಮಂತ್ರಿಯಾಗಲು ನಾನು ಕಾಂಗ್ರೆಸ್ ಸೇರಿಲ್ಲ. ರಾಜ್ಯ ಕಾಂಗ್ರೆಸ್ ತನಗೆ ತೃಣಕ್ಕೆ ಸಮಾನ. ನನ್ನದೇನಿದ್ದರೂ ದೆಹಲಿಮಟ್ಟದ ರಾಜಕೀಯ' ಎಂದು ಬೀಗುತ್ತಿದ್ದ ಶಂಕರ್ ಬಿದರಿ ಅವರಿಗೆ ಕಾಂಗ್ರೆಸ್ ಯಾವುದೇ ಸ್ಥಾನಮಾನ ನೀಡದೆ ಬೆಂಚ್ ಕಾಯಿಸುತ್ತಿತ್ತು. ಇದರಿಂದ ತೀವ್ರವಾಗಿ ಅಸಮಾಧಾನಗೊಂಡಿದ್ದ ಶಂಕರ್ ಬಿದರಿ ಅಂತಿಮವಾಗಿ ಕಾಂಗ್ರೆಸ್ಸಿಗೆ ಗುಡ್ ಬೈ ಹೇಳಿದ್ದಾರೆ.
'ನಾನು ಕಾಂಗ್ರೆಸ್ ಪಕ್ಷದಿಂದ ಯಾವುದೇ ಅಧಿಕಾರ ಕೇಳಿರಲಿಲ್ಲ. ಕಾಂಗ್ರೆಸ್ ಮುಖಂಡರು ನನ್ನ ಮನೆಗೇ ಬಂದು ಪಕ್ಷಕ್ಕೆ ಕರೆದುಕೊಂಡರು. ಯಾರು ಹೇಳದಿದ್ದರೂ ಐದು ಜಿಲ್ಲೆಗಳಲ್ಲಿ ಪ್ರಚಾರ ನಡೆಸಿದ್ದೇನೆ. ಅಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದಾರೆ. ಆದರೆ, ಇಷ್ಟು ದಿನಗಳಾದರೂ ನನಗೆ ಯಾವುದೇ ಜವಾಬ್ದಾರಿ ನೀಡದೆ ದೂರವಿಡಲಾಗಿತ್ತು' ಎಂದು ಬಿದರಿ ನೊಂದು ನುಡಿದಿದ್ದಾರೆ.
ಪ್ರಬಲ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಸಾರ್ವಜನಿಕ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರುವ ಬಿದರಿ ಅವರನ್ನು ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಕೆಜೆಪಿ, ಬಿಎಸ್ಸಾರ್ ಕಾಂಗ್ರೆಸ್ ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ತೀವ್ರ ಪ್ರಯತ್ನ ನಡೆಸಿದ್ದವು.
ಲೋಕಸಭಾ ಚುನಾವಣೆಗಾದರೂ ಒಂದು ನೆಲೆಗಾಣಲು ಬಯಸಿರುವ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಅವರು ಸಮಾಜವಾದಿ ಪಕ್ಷದ 'ಸೈಕಲ್' ತುಳಿಯಲು ಮುಂದಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಬಿದರಿ ಅವರು ಸೋಮವಾರ ಸಮಾಜವಾದಿ ಪಕ್ಷದ (ಎಸ್ಪಿ) ವರಿಷ್ಠ ನಾಯಕರಾದ ಮುಲಾಯಂ ಸಿಂಗ್ ಯಾದವ್, ಅಖಿಲೇಶ್ ಯಾದವ್ ಜತೆ ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಇದೇ ತಿಂಗಳ 15 ರಂದು ಚನ್ನಪಟ್ಟಣದಲ್ಲಿ ನಡೆಯುವ ಸಮಾವೇಶದಲ್ಲಿ ಬಿದರಿ ಸೇರ್ಪಡೆಯಾಗಲಿದ್ದಾರೆ ಎಂದೂ ವಿಶ್ವಸನೀಯ ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಪಕ್ಷದಲ್ಲಿ ಬಿದರಿ ತೃಪ್ತಿಯಿಂದ ಇಲ್ಲ ಎಂಬ ವಾಸನೆಯನ್ನು ಗ್ರಹಿಸಿದ ಯೋಗೇಶ್ವರ್ ಕಳೆದ ತಿಂಗಳಿಂದಲೇ ಅವರನ್ನು ಪಕ್ಷಕ್ಕೆ ಸೆಳೆಯುವ ಪ್ರಯತ್ನ ನಡೆಸಿದ್ದರು. ಜುಲೈ ಅಂತ್ಯದಲ್ಲಿ ಸಮಾಜವಾದಿ ಪಕ್ಷದ ನಾಯಕರಾದ ಮುಲಾಯಂ ಮತ್ತು ಅಖಿಲೇಶ್ ಅವರು ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲೇ ಬಿದರಿ ಕರೆತರುವ ಕುರಿತು ವೇದಿಕೆ ಸಿದ್ಧಗೊಂಡಿತು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications