ಡೆಕ್ಕನ್ ಕ್ರಾನಿಕಲ್ ಟ್ರೇಡ್ ಮಾರ್ಕ್ ಹರಾಜು!

ಡಿಸಿಎಚ್ ಎಲ್ ಪ್ರಕಟಣೆಯ ಡೆಕ್ಕನ್ ಕ್ರಾನಿಕಲ್, ದಿ ಏಷ್ಯನ್ ಏಜ್, ಆಂಧ್ರ ಭೂಮಿ ಹಾಗೂ ಫೈನಾನ್ಶಿಯಲ್ ಕ್ರಾನಿಕಲ್ ಟ್ರೇಡ್ ಮಾರ್ಕ್ ಗಳನ್ನು ಅಡಮಾನ ಇಟ್ಟಿರುವ ವಿಷಯ ಎಲ್ಲರಿಗೂ ತಿಳಿದಿದೆ. ಈಗ ಈ ಟ್ರೇಡ್ ಮಾರ್ಕ್ ಗಳು ಹರಾಜಿಗಿಡಲಾಗಿದ್ದು, ಅತಿ ಹೆಚ್ಚು ಬಿಡ್ ಮಾಡುವ ಸಂಸ್ಥೆ ಪಾಲಾಗಲಿದೆ.
ಐಡಿಬಿಐ ಬ್ಯಾಂಕ್ ನಿಂದ 250 ಕೋಟಿ ಸಾಲ ಪಡೆಯಲು ಟಿ. ವಿ. ವೆಂಕಟರಾಮ್ ರೆಡ್ಡಿ ಹಾಗೂ ಟಿ. ವಿನಾಯಕ್ ರವಿ ರೆಡ್ಡಿ ಅವರ ಜಂಟಿ ಮಾಲೀಕತ್ವದ ಡಿಸಿಎಚ್ ಎಲ್ ಟ್ರೇಡ್ ಮಾರ್ಕ್ ಅನ್ನು ಅಡವಿಟ್ಟಿದ್ದರು. ಇದು ಸೇರಿದಂತೆ ಸುಮಾರು 18 ಆರ್ಥಿಕ ಸಂಸ್ಥೆಗಳಿಗೆ ಸುಮಾರು 4000 ಕೋಟಿ ರು ಗೂ ಅಧಿಕ ಸಾಲವನ್ನು ಹಿಂತಿರುಗಿಸಲು ಆಗದೆ ಡಿಸಿಎಚ್ ಎಲ್ ಒದ್ದಾಡುತ್ತಿದೆ.
ಹೀಗಾಗಿ ಡಿಸಿಎಚ್ ಎಲ್ ನ ಮಾಧ್ಯಮ ಸಂಸ್ಥೆಗಳ ಟ್ರೇಡ್ ಮಾರ್ಕ್ ಗಳನ್ನು ಪತ್ಯೇಕವಾಗಿ ಅಥವಾ ಒಟ್ಟಾಗಿ ಯಾರಾದರೂ ಖರೀದಿಸಬಹುದಾಗಿದೆ ಎಂದು ಬಿಡ್ಡಿಂಗ್ ಗೆ ಆಹ್ವಾನ ನೀಡಲಾಗಿದೆ.
ಡೆಕ್ಕನ್ ಕ್ರಾನಿಕಲ್ ಹೋಲ್ಡಿಂಗ್ಸ್ ನ ಪರಿಸ್ಥಿತಿ ಈ ರೀತಿ ಇದ್ದರೂ ಷೇರುಪೇಟೆ ಮಾತ್ರ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಮಂಗಳವಾರ ಡಿಸಿಎಚ್ ಎಲ್ ಷೇರುಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದೆ. ಬಿಎಸ್ ಇನಲ್ಲಿ 2.34ರು ನಂತೆ ಶೇ 4 ರಷ್ಟು ಏರಿಕೆ ಕಂಡಿದೆ. ಎನ್ ಎಸ್ ಇನಲ್ಲಿ ಕಳೆದ 30 ದಿನಗಳಲ್ಲಿ ಸಂಸ್ಥೆ ಯಾವುದೇ ವಹಿವಾಟು ನಡೆಸಿಲ್ಲ.
ಐಪಿಎಲ್ ತಂಡ ಕೂಡಾ ಹರಾಜು : ಬಿಸಿಸಿಐನಿಂದ ಅನುಮತಿ ಪಡೆದ ನಂತರ ಡೆಕ್ಕನ್ ಕ್ರಾನಿಕಲ್ ಹೋಲ್ಡಿಂಗ್ಸ್ ಲಿ(DHCL) ಸಂಸ್ಥೆ ಡೆಕ್ಕನ್ ಚಾರ್ಜರ್ಸ್ ತಂಡದ ಮಾರಾಟಕ್ಕೆ ಟೆಂಡರ್ ಕರೆದು ಪತ್ರಿಕಾ ಪ್ರಕಟಣೆ ಹೊರಡಿಸಲಾಗಿತ್ತು. ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಮಾರಾಟಕ್ಕೆ ಸಿದ್ಧವಾಗಿರುವ ಡೆಕ್ಕನ್ ಚಾರ್ಜರ್ಸ್ ತಂಡವನ್ನು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಖರೀದಿಸಿದ್ದಾರೆ ಎಂಬ ಗಾಳಿ ಸುದ್ದಿ ಕೂಡಾ ಹಬ್ಬಿತ್ತು. ಆದರೆ, ಸುದ್ದಿಯನ್ನು ತಂಡದ ಒಡತಿ ಗಾಯತ್ರಿ ರೆಡ್ಡಿ ಅಲ್ಲಗೆಳೆದಿದ್ದರು.
ಡೆಕ್ಕನ್ ಚಾರ್ಜರ್ಸ್ ತಂಡ 2009ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಐಪಿಎಲ್ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿದ್ದು ಬಿಟ್ಟರೆ ಉಳಿದಂತೆ ಕಳಪೆ ಸಾಧನೆ ಮುಂದುವರೆಸಿತ್ತು. ನಂತರ ತಂಡವನ್ನು ಸನ್ ನೆಟ್ವರ್ಕ್ ಖರೀದಿಸಿ ಸನ್ ರೈಸರ್ಸ್ ಹೆಸರಿನಲ್ಲಿ ಐಪಿಎಲ್ ನಲ್ಲಿ ಕಣಕ್ಕಿಳಿಸಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications