ಮಳೆ ನೀರು ಕೊಯ್ಲು ಅಳವಡಿಕೆಗೆ ಆ.20ರ ಗಡುವು

2,400 ಚದರ ಅಡಿಗಳಿಗಿಂತ ಮೇಲ್ಪಟ್ಟು ವಿಸ್ತೀರ್ಣ ಹೊಂದಿರುವ ನಿವೇಶನಗಳಲ್ಲಿನ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ. ವ್ಯವಸ್ಥೆ ಆಳವಡಿಸಿಕೊಳ್ಳದ 5000 ಮನೆಗಳಿಗೆ ಜಲಮಂಡಳಿ ನೋಟಿಸ್ ನೀಡಿದೆ.
ಆ.20 ಅಂತಿಮ ಗಡುವಿನೊಳಗೆ ಮನೆಯ ಮಾಲೀಕರು ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಳ್ಳದಿದ್ದರೆ ನೀರು ಮತ್ತು ಒಳಚರಂಡಿ ಸಂಪರ್ಕ ಸ್ಥಗಿತಗೊಳಿಸುವುದಾಗಿ ಅಂತಿಮ ಗಡುವು ನೀಡಿದೆ.
ಜಲಮಂಡಳಿ ಮುಖ್ಯ ಇಂಜಿನಿಯರ್ ವೆಂಕಟರಾಜು ಅವರು ಈ ಕುರಿತು ಹೇಳಿಕೆ ನೀಡಿದ್ದು, ಸಾರ್ವಜನಿಕರಿಗೆ ನಾವು ಪದ್ಧತಿ ಅಳವಡಿಸಿಕೊಳ್ಳಲು ಅಗತ್ಯ ಕಾಲಾವಕಾಶ ನೀಡಿದೆವು. ಆದರೆ, ಮಳೆ ಕೊಯ್ಲು ಪದ್ಧತಿ ನಗರದಲ್ಲಿ ಜಾರಿಗೆ ತರಲು ಸಾಧ್ಯವಾಗಿಲ್ಲ. ಆದ್ದರಿಂದ ಕಠಿಣ ಕ್ರಮ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.
2009ರಲ್ಲಿ ಮಳೆ ನೀರು ಕೊಯ್ಲು ಪದ್ಧತಿಯನ್ನು ಬೆಂಗಳೂರಿನಲ್ಲಿ ಕಡ್ಡಾಯಗೊಳಿಸಿದಾಗ, 55,000 ಮನೆಗಳನ್ನು ಗುರುತಿಸಲಾಗಿತ್ತು. ಸದ್ಯ 13,000 ಮನೆಗಳು ಹೆಚ್ಚಾಗಿ ಸೇರ್ಪಡೆಗೊಂಡಿದ್ದು, ಅವುಗಳಿಗೂ ವ್ಯವಸ್ಥೆ ಆಳವಡಿಸುವುದು ಕಡ್ಡಾಯವಾಗಿದೆ. (ಮಳೆ ಕೊಯ್ಲು ಇಲ್ಲದ ಮನೆಗಳಿಗೆ ಬಂತು ನೋಟಿಸ್)
ಆದರೆ, ನಗರದಲ್ಲಿ ಇನ್ನೂ 5000 ಮನೆಗಳಿಗೆ ಮಳೆ ನೀರು ಕೊಯ್ಲು ವ್ಯವಸ್ಥೆ ಆಳವಡಿಸಿಲ್ಲ. ಆದ್ದರಿಂದ ಅಂತಹ ಮನೆಗಳಿಗೆ ನೋಟಿಸ್ ಜಾರಿಗೊಳಿಸಿ ಜಲಮಂಡಳಿ ಕಾಲಾವಕಾಶ ನೀಡಿದೆ. ಆ.20ರೊಳಗೆ ಅಳವಡಿಸಿಕೊಳ್ಳದಿದ್ದರೆ ನೀರು ಸರಬರಾಜು ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದೆ.
(67ನೇ ಸ್ವಾತಂತ್ರ್ಯ ದಿನಾಚರಣೆ : ಈ ಪುಟ ನಿಮ್ಮ ಸ್ನೇಹಿತರಿಗೆ ಕಳಿಸಿ)
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications