Get Updates
Get notified of breaking news, exclusive insights, and must-see stories!

ಸಮಾಜವಾದಕ್ಕೆ ಅಂಕಿತ ಬಿದರಿ ಕಾಂಗೈ ವಿರುದ್ಧ ವಾಗ್ದಾಳಿ

ಬೆಂಗಳೂರು, ಅಗಸ್ಟ್ 13: ಮಾಜಿ ಪೊಲೀಸ್ ಅಧಿಕಾರಿ ಶಂಕರ್ ಮಹಾದೇವ ಬಿದರಿ ಅವರು ಅಧಿಕೃತವಾಗಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರ ಸಮ್ಮುಖದಲ್ಲಿ ದೆಹಲಿಯಲ್ಲಿ ಇಂದು ಮಂಗಳವಾರ ಬಿದರಿ ಸೈಕಲ್ ಏರಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕದ ಮಾಜಿ ಡಿಐಜಿ ಶಂಕರ್ ಬಿದರಿ ಅವರು ಕಾಂಗ್ರೆಸ್ ಪಕ್ಷ ತನಗೆ ಅನ್ಯಾಯ ಮಾಡಿದೆ. ಮೋದ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಐಎಎಸ್ ಅಧಿಕಾರಿ ದುರ್ಗಾಶಕ್ತಿ ಅವರನ್ನು ಎತ್ತಂಗಡಿ ಮಾಡಿ ವಿವಾದಕ್ಕೆ ಗುರಿಯಾಗಿರುವ ಸಮಾಜವಾದಿ ಪಕ್ಷಕ್ಕೆ ಮಾಜಿ ಐಪಿಎಸ್ ಬಿದರಿ ಅವರು ಸೇರ್ಪಡೆಯಾಗಿರುವುದು ಹಲವರ ಹುಬ್ಬೇರಿಸಿದೆ.

shankar-mahadev-bidari-joins-samajwadi-party-in-delhi-mulayam-singh

'ಐದು ವರ್ಷಗಳ ಕಾಲ ನನಗೆ ಯಾವುದೇ ಸ್ಥಾನಮಾನ ನೀಡದಿರಲು ರಾಜ್ಯ ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದರು. ಮುಂದಿನ ಲೋಕಸಭೆಗಾದರೂ ಟಿಕೆಟ್ ನೀಡಿ ಎಂದು ಕೇಳಿದ್ದೆ. ಅದಕ್ಕೂ ಅವರು ಸ್ಪಂದಿಸಲಿಲ್ಲ. ಇದರಿಂದ ನಾನು ನನ್ನ ರಾಜಕೀಯ ಜೀವನವನ್ನು ಹಾಳು ಮಾಡಿಕೊಳ್ಳಲು ಸಿದ್ಧವಾಗಿಲ್ಲ. ಹಾಗಾಗಿ ಅನಿವಾರ್ಯವಾಗಿ ಸಮಾಜವಾದಿ ಪಕ್ಷ ಸೇರಿಕೊಂಡಿದ್ದೇನೆ. ಯಾರ ವಿರುದ್ಧವೂ ವೈಯಕ್ತಿಕ ನಿಂದನೆಯಲ್ಲಿ ತೊಡಗಲಾರೆ' ಎಂದು ಮುಲಾಯಂ ಸಮ್ಮುಖದಲ್ಲಿ ಬಿದರಿ ಹೇಳಿದರು.

ಇದೇ ವೇಳೆ ಶಂಕರ್ ಬಿದರಿ ಅವರನ್ನು ಸಮಾಜವಾದಿ ಪಕ್ಷದ ಕರ್ನಾಟಕ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಮುಲಾಯಂ ಸಿಂಗ್ ಪ್ರಕಟಿಸಿದರು.

ಇನ್ನು ಚನ್ನಪಟ್ಟಣ ಶಾಸಕ, ಎಸ್ಪಿ ಪಕ್ಷದ ಹಾಲಿ ರಾಜ್ಯಾಧ್ಯಕ್ಷ ಸಿಪಿ ಯೋಗೀಶ್ವರ್ ಅವರಿಗೆ ಪಕ್ಷದ ದಕ್ಷಿಣ ಭಾರತದ ಉಸ್ತುವಾರಿ ವಹಿಸಲಾಗಿದೆ ಎಂದು ತಿಳಿದುಬಂದಿದೆ. ನಿನ್ನೆಯೇ ಲಖ್ನೋ ತಲುಪಿದ್ದ ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಶಂಕರ್ ಬಿದರಿ ಅವರು ಎಸ್ಪಿ ಪಕ್ಷದ ಮುಖಂಡರನ್ನು ಭೇಟಿ ಮಾಡಿದ್ದರು. ಅವರೊಂದಿಗೆ ಯೋಗೀಶ್ವರ್ ಮತ್ತು ಮಾಜಿ ಸಚಿವ ಗೂಳಿಹಟ್ಟಿ ಶೇಖರ್‌ ಅವರೂ ಸಹ ಇದ್ದರು.
67ನೇ ಸ್ವಾತಂತ್ರ್ಯ ದಿನಾಚರಣೆ : ಈ ಪುಟ ನಿಮ್ಮ ಸ್ನೇಹಿತರಿಗೆ ಕಳಿಸಿ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+