ಸಬ್ ಮರಿನ್ ಬೆಂಕಿ ಅನಾಹುತದಲ್ಲಿ 18 ಮಂದಿ ಹತ
ಮುಂಬೈ, ಆ.14 : ಮುಂಬೈನಲ್ಲಿ ಭಾರತೀಯ ನೌಕಾಪಡೆಗೆ ಸೇರಿದ ಸಿಂಧು ರಕ್ಷಕ್ ಸಬ್ ಮೆರಿನ್ ನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ. ಘಟನೆಯಲ್ಲಿ 18 ಜನರು ಸಾವನ್ನಪ್ಪಿದ್ದು, ಇದರಲ್ಲಿ ಮೂವರು ಹಿರಿಯ ಅಧಿಕಾರಗಳು ಸೇರಿದ್ದಾರೆ.
ಐಎನ್ ಎಸ್ ಸಿಂಧು ರಕ್ಷಕ್ ಸಬ್ ಮೆರಿನ್ ನಲ್ಲಿ ಬುಧವಾರ ಮಧ್ಯರಾತ್ರಿ ಭಾರೀ ಸ್ಫೋಟ ಸಂಭವಿಸಿ, ನಂತರ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ಅಕ್ಕಪಕ್ಕದಲ್ಲಿದ್ದ ಎರಡು ಹಡಗುಗಳಿಗೂ ವ್ಯಾಪಿಸಿತ್ತು. ಬೆಳಗ್ಗೆ 3 ಗಂಟೆಯವರೆಗೂ ಕಾರ್ಯಾಚರಣೆ ನಡೆಸಿದ ನೌಕಾಪಡೆ ಮತ್ತು ಮುಂಬೈ ಅಗ್ನಿಶಾಮಕ ದಳದ 16 ವಾಹನಗಳು ಬೆಂಕಿಯನ್ನು ನಂದಿಸಿದವು.

ಅಗ್ನಿ ಅವಘಡ ಸಂಭವಿಸುವಾಗ 18 ಸಿಬ್ಬಂದಿ ಸಬ್ ಮೆರಿನ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅವರೆಲ್ಲರೂ ಮೃತಪಟ್ಟಿದ್ದಾರೆ ಎಂದು ರಕ್ಷಣಾ ಸಚಿವ ಎ.ಕೆ.ಆಂಟನಿ ಹೇಳಿದ್ದಾರೆ. ಸಿಬ್ಬಂದಿಯನ್ನು ರಕ್ಷಿಸಲು ತುರ್ತು ರಕ್ಷಣಾ ಕಾರ್ಯ ಕೈಗೊಂಡರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.
ಬೆಂಕಿ ಆಕಸ್ಮಿಕದಿಂದಾಗಿ ಸಬ್ ಮೆರಿನ್ ಭಾಗಶಃ ಸುಟ್ಟು ಕರಕಲಾಗಿದೆ. ಅದರ ಅರ್ಧಭಾಗ ಸಂಪೂರ್ಣವಾಗಿ ಸುಟ್ಟು ಹೋಗಿದೆ ಎಂದು ನೌಕಾಪಡೆಯ ವಕ್ತಾರ ಪಿ.ವಿ.ಎಸ್.ಸತೀಶ ಹೇಳಿದ್ದಾರೆ. ಬೆಂಕಿ ಹೊತ್ತಿಕೊಳ್ಳುವ ಮುನ್ನ ಸಬ್ ಮೆರಿನ್ ನಲ್ಲಿ ಸ್ಪೋಟ ಸಂಭವಿಸಿತ್ತು. ಸ್ಫೋಟಕ್ಕೆ ಕಾರಣವೇನಿರಬಹುದು ಎಂದು ನೌಕಾಪಡೆಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ತನಿಖೆಗೆ ಆದೇಶ : ಅತ್ಯಂತ ಬಿಗಿ ಭದ್ರತೆಯ ಸಬ್ ಮೆರಿನ್ ನ ಬೆಂಕಿಗೆ ಆಹುತಿಯಾದ ಪ್ರಕರಣದ ಬಗ್ಗೆ ತನಿಖೆಗೆ ನೌಕಾಪಡೆ ಆದೇಶ ನೀಡಿದೆ. ಬೆಂಕಿ ಮತ್ತು ಸ್ಫೋಟಕ್ಕೆ ಕಾರಣಗಳೇನು ಎಂದು ಸಮಗ್ರ ವರದಿ ನೀಡುವಂತೆ ನೌಕಾಪಡೆ ತನಿಖೆ ನಡೆಸುತ್ತಿರುವ ಸಮಿತಿಗೆ ನಿರ್ದೇಶನ ನೀಡಿದೆ.
(67ನೇ ಸ್ವಾತಂತ್ರ್ಯ ದಿನಾಚರಣೆ : ಈ ಪುಟ ನಿಮ್ಮ ಸ್ನೇಹಿತರಿಗೆ ಕಳಿಸಿ)
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications