ಜಮೀರ್ ಗೈರು: ರಾಧಿಕಾ-ಕುಮಾರಸ್ವಾಮಿ ಫ್ಯಾಕ್ಟರ್ ಕಾರಣ

bangalore-rural-lok-sabha-bypoll-jds-zameer-pasha-absence-conspicuous
ಬೆಂಗಳೂರು, ಆಗಸ್ಟ್ 16: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಒಂದು ಕಡೆ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಶಿವಕುಮಾರ್ ಹಾಗೂ ಜೆಡಿಎಸ್‌ ಪಕ್ಷದ ಅನಿತಾ ಕುಮಾರಸ್ವಾಮಿ ಅವರ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದ್ದರೆ, ಇತ್ತ ರಾಜಕೀಯ ಪಕ್ಷಗಳ ಮುಖಂಡರು ತಮ್ಮಿಚ್ಛಾನುಸಾರ/ ತಮ್ಮನುಕೂಲ ರಾಜಕಾರಣದಲ್ಲಿ ಮುಳುಗಿದ್ದಾರೆ.

ಉಪ ಚುನಾವಣೆ ಸಂದರ್ಭದಲ್ಲಿ ಅನೇಕ ರಾಜಕೀಯ ಮುಖಂಡರ ನಿಷ್ಠೆ ಬದಲಾಗಿದೆ. ಈ ಮಧ್ಯೆ ಸದ್ದಿಲ್ಲದೆ ಮತ್ತೊಬ್ಬ ಪ್ರಭಾವಿ ನಾಯಕ ತಮ್ಮ ನಿಷ್ಠೆ ಬದಲಿಸಿದ್ದಾರೆ ಎಂಬ ಗುಸುಗುಸು ಕೇಳಿಬಂದಿದೆ.

ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರಿಂದ ಮುನಿಸುಕೊಂಡು ಪ್ರಚಾರ ಕಣದಿಂದ ದೂರವುಳಿದಿರುವ ಅವರ ಬಲಗೈ ಬಂಟ, ಹಾಲಿ ಚಾಮರಾಜ ಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರು ಕಾಂಗ್ರೆಸ್ ಕೈಹಿಡಿಯುವ ಸಾಧ್ಯತೆಗಳು ಹೆಚ್ಚಾಗಿವೆ ಎನ್ನಲಾಗಿದೆ. ಸದ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಅವರಿಗೆ ಅನುಕೂಲವಾಗುವಂತೆ ಪ್ರಚಾದಿಂದ ದೂರವುಳಿದಿರುವ ಜಮೀರ್, ಮುಂದೆ ಶಿವಕುಮಾರ್ ಕೈಬಲಪಡಿಸಲು ಆಪರೇಶನ್ ಹಸ್ತದಿಂದಾಗಿ ಕಾಂಗ್ರೆಸ್ ಸೇರುವ ಸಾಧ್ಯತೆಗಳು ದಟ್ಟವಾಗಿವೆ ಎನ್ನಲಾಗಿದೆ.

ಒಂದು ಮಾಹಿತಿಯ ಪ್ರಕಾರ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರಕ್ಕೆಂದು ಜಮೀರ್ ಸಾಕಷ್ಟು ಹಣ ಖರ್ಚು ಮಾಡಿದ್ದರು. ಆದರೆ ಚುನಾವಣೆ ಮುಗಿದು ಮೂರು ತಿಂಗಳಾದರೂ ಗೌಡರ ಕುಟುಂಬ ಹಣ ವಾಪಸ್ ಮಾಡುವ ಗೋಜಿಗೆ ಹೋಗಿಲ್ಲ. ಇದರಿಂದ ಕಂಗೆಟ್ಟಿರುವ ಜಮೀರ್ ಕುಮಾರಣ್ಣನಿಂದ ದೂರವುಳಿದಿದ್ದಾರೆ ಎನ್ನಲಾಗಿದೆ.

ನಟಿ ರಾಧಿಕಾ- ಕುಮಾರಸ್ವಾಮಿ ಫ್ಯಾಕ್ಟರ್: ಮತ್ತೊಂದು ಮಾಹಿತಿಯ ಪ್ರಕಾರ ಜಮೀರ್, ಕಣದಲ್ಲಿರುವ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಅವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಏಕೆಂದರೆ ಕುಮಾರಣ್ಣಗೆ ನಟಿ ರಾಧಿಕಾರನ್ನು ಪರಿಚಯಿಸಿದ್ದೇ ಜಮೀರ್ ಎಂಬ ಮಾಹಿತಿ ಅನಿತಾ ಕುಮಾರಸ್ವಾಮಿ ಅವರ ಗಮನಕ್ಕೆ ಬಂದಿದ್ದು, ಶಾಸಕ ಜಮೀರ್ ರನ್ನು ಪ್ರಚಾರದಿಂದ ದೂರವಿಟ್ಟಿದ್ದಾರೆ ಎನ್ನಲಾಗಿದೆ.

ಏನೇ ಆಗಲಿ ರಾಮನಗರ ಮತ್ತು ಚನ್ನಪಟ್ಟಣ ಭಾಗಗಳಲ್ಲಿ ಅಲ್ಪಸಂಖ್ಯಾತ ಮತದಾರರು ಭಾರಿ ಸಂಖ್ಯೆಯಲ್ಲಿದ್ದಾರೆ. ಈ ಸಂದರ್ಭದಲ್ಲಿ ಜಮೀರ್ ಪ್ರಚಾರದಿಂದ ದೂರ ಉಳಿದಿರುವುದು ಜೆಡಿಎಸ್ಸಿಗೆ ಭಾರಿ ಹೊಡೆತ ನೀಡಲಿದೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+