ಹೆಚ್ಚಿನ ಅರವಳಿಕೆ ಚುಚ್ಚುಮದ್ದಿಗೆ ಮತ್ತೊಂದು ಸಾವು

ಶಸ್ತ್ರಚಿಕಿತ್ಸೆಗೆಂದು ಚಿಕ್ಕಪೇಟೆ ನಿವಾಸಿ ವೈಶಾಲಿ ಎಂಬುವವರನ್ನು ಸದಾಶಿವನಗರದ ನರ್ಸಿಂಗ್ ಹೋಂಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆಗೆ ಮುನ್ನ ಅರವಳಿಕೆ ಇಂಜೆಕ್ಷನ್ ನೀಡಿದ ನಂತರ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಕೂಡಲೆ ಅವರನ್ನು ಫೋರ್ಟಿಸ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಬದುಕಿ ಉಳಿಯಲಿಲ್ಲ.
ಹೆಚ್ಚಿನ ಪ್ರಮಾಣದಲ್ಲಿ ಅನಸ್ತೀಶಿಯಾ ನೀಡಿದ್ದರಿಂದಲೇ ಆಕೆಯಲ್ಲಿ ತೊಂದರೆ ಕಾಣಿಸಿಕೊಂಡಿತು ಎಂದು ವೈಶಾಲಿ ಕುಟುಂಬದವರು ಆರೋಪಿಸಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ. ಸದಾಶಿವನಗರ ಪೊಲೀಸರು ನಿರ್ಲಕ್ಷ್ಯ ತೋರಿದ ವೈದ್ಯರ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಮಹಿಳೆಯನ್ನು ಪೋಸ್ಟ್ ಮಾರ್ಟಂಗಾಗಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಹೆಚ್ಚಿನ ಪ್ರಮಾಣದಲ್ಲಿ ಅರವಳಿಕೆ ನೀಡಿದ್ದರಿಂದ ರೋಗಿಗಳು ಸಾವಿಗೀಡಾದ ಹಲವಾರು ಘಟನೆಗಳು ಇತ್ತೀಚಿನ ದಿನಗಳಲ್ಲಿ ನಡೆದಿವೆ. ಕೆಲವೇ ದಿನಗಳ ಹಿಂದೆ ಚಿತ್ರದುರ್ಗದ ಚೇತನಾ ಅವರು ಸಾವು ಬದುಕಿನ ಹೋರಾಟ ನಡೆಸಿ ಬೆಂಗಳೂರಿನ ನಿಮ್ಹಾನ್ಸ್ನಲ್ಲಿ ಕೊನೆಯುಸಿರೆಳೆದರು. ಅವರಿಗೆ ಕೂಡ ಹೆಚ್ಚಿನ ಪ್ರಮಾಣದಲ್ಲಿ ಅರವಳಿಕೆ ನೀಡಿದ್ದರಿಂದಲೇ ಸಾವಿಗೀಡಾಗಿದ್ದರು ಎಂದು ಆರೋಪಿಸಲಾಗಿತ್ತು. ಕಳೆದ ಫೆಬ್ರವರಿಯಲ್ಲಿ ಕೂಡ ವೈದ್ಯರ ನಿರ್ಲಕ್ಷ್ಯದಿಂದಾಗಿ ಹೆಚ್ಚಿನ ಅರವಳಿಕೆ ನೀಡಿದ್ದರಿಂದ ಪುಟ್ಟ ಮಗು ಶಿರೀಶ್ ಸಾವಿಗೀಡಾಗಿದ್ದ.
ಬಳ್ಳಾರಿಯಲ್ಲಿ ವೇಶ್ಯಾವಾಟಿಕೆ ಬಯಲು : ಅನೈತಿಕ ಚಟುವಟಿಕೆ ನಡೆಯುತ್ತಿದೆಂಬ ಸುಳಿವಿನ ಮೇರೆಗೆ ಬಳ್ಳಾರಿಯ ಡಿಸಿ ನಗರದ ಮನೆಯೊಂದರ ಮೇಲೆ ಶನಿವಾರ ಮಧ್ಯಾಹ್ನ ದಾಳಿ ಮಾಡಿ ಪೊಲೀಸರು 32 ಅಪ್ರಾಪ್ತೆಯರು, 23 ಮಹಿಳೆಯರು ಸೇರಿದಂತೆ 62 ಜನರನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಹಲವಾರು ಮಹಿಳೆಯರು ಮಹಾರಾಷ್ಟ್ರ, ಆಂಧ್ರ, ಪಶ್ಚಿಮ ಬಂಗಾಳಕ್ಕೆ ಸೇರಿದವರು ಎಂದು ಕೂಡ ತಿಳಿದುಬಂದಿದೆ.
ಬೆಂಗಳೂರಿನ ಜಸ್ಟಿಸ್ ಹ್ಯಾಂಡ್ ಕೇರ್ ಎನ್ಜಿಓ ಸಂಸ್ಥೆ ನೀಡಿದ ಸುಳಿವಿನ ಮೇರೆಗೆ, ಬಳ್ಳಾರಿ ಎಸ್ಪಿ ಚೇತನ್ ಸಿಂಗ್ ರಾಥೋಡ್ ನೇತೃತ್ವದಲ್ಲಿ ದಾಳಿ ಮಾಡಿದ ಪೊಲೀಸರು 57ಕ್ಕೂ ಹೆಚ್ಚು ಮಹಿಳೆಯರನ್ನು ತಮ್ಮ ವಶಕ್ಕೆ ತೆಗೆದುಕೊಂಡರು. ಇವರಲ್ಲಿ ಮೂವರು ಬಾಂಗ್ಲಾ ದೇಶಿಯರು ಮತ್ತು ಐವರು ಪುರುಷರು ಇದ್ದಾರೆ ಎಂದು ತಿಳಿದುಬಂದಿದೆ. ಅಪ್ರಾಪ್ತೆಯರನ್ನು ಬಾಲಮಂದಿರಕ್ಕೆ ಕಳುಹಿಸಲಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications